<p><strong>ತೀರ್ಥಹಳ್ಳಿ:</strong> ಶಿಕಾರಿಪುರಕ್ಕೆ ಆರ್ಎಸ್ಎಸ್ ಪ್ರಚಾರಕರಾಗಿ ಬಂದಿದ್ದ ಯಡಿಯೂರಪ್ಪ ಅಂದಿನ ಕಾಂಗ್ರೆಸ್ ಗೂಂಡಾಗಿರಿ ಎದುರಿಸಿ ಬಿಜೆಪಿ ಕಟ್ಟಿದ್ದರು. ಈಗ ಪಕ್ಷ ಬೆಳೆದಿದ್ದು ಕಾರ್ಯಕರ್ತರ ಕೈ ಗಟ್ಟಿಯಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು.</p>.<p>ಇಲ್ಲಿನ ವಿದ್ಯಾಧಿರಾಜ ಸಭಾಭವನದಲ್ಲಿ ಮಂಗಳವಾರ ಬಿಜೆಪಿ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿ, ಶಿಕಾರಿಪುರ ವಾರ್ಡ್ಗೆ ಬಿಜೆಪಿಯಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಯಾರೂ ಸಿದ್ಧರಿರಲಿಲ್ಲ. ಆಗ ನನ್ನ ತಾಯಿ ಸ್ಪರ್ಧಿಸಿದ್ದರು ಎಂದರು ನೆನಪಿಸಿದರು.</p>.<p>ಇಂದಿರಾಗಾಂಧಿ ಪ್ರಧಾನಮಂತ್ರಿ, ಗುಂಡೂರಾವ್ ಮುಖ್ಯಮಂತ್ರಿ, ಶಿಕಾರಿಪುರ ಕ್ಷೇತ್ರದ ಯಂಕಟಪ್ಪ ಜೈಲ್ ಮಂತ್ರಿಯಾಗಿದ್ದರು. ಅಂತಹ ಕ್ಲಿಷ್ಟಕರ ಸನ್ನಿವೇಶದಲ್ಲಿ ಎಲ್ಲಾ ಜಾತಿ, ವರ್ಗವನ್ನು ಸೇರಿಸಿಕೊಂಡು ಯಡಿಯೂರಪ್ಪ ಶಾಸಕರಾದರು. ಹೋರಾಟದಿಂದ ಬಿಜೆಪಿ ಬಲಿಷ್ಠವಾಗಿ ಬೆಳೆದು ನಿಂತಿದೆ ಎಂದರು.</p>.<p>‘ಅಭಿವೃದ್ಧಿ ಆಧಾರದ ಮೇಲೆ ಬಿಜೆಪಿಗೆ ಮತ ಕೇಳುತ್ತಿದೇವೆ. ಶಿವಮೊಗ್ಗ ಜಿಲ್ಲೆಯನ್ನು ಮಾದರಿ ಕ್ಷೇತ್ರವಾಗಿಸುವಲ್ಲಿ ಬಿ.ವೈ. ರಾಘವೇಂದ್ರ ಕೊಡುಗೆ ಅಪಾರ ಇದೆ’ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.</p>.<p>ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ತಾಲ್ಲೂಕು ಘಟಕದ ಅಧ್ಯಕ್ಷ ನವೀನ್ ಹೆದ್ದೂರು, ಮಾಜಿ ಶಾಸಕ ಸ್ವಾಮಿರಾವ್, ಪ್ರಮುಖರಾದ ಮಹೇಶ್ ಹುಲ್ಕುಳಿ, ಸಾಲೇಕೊಪ್ಪ ರಾಮಚಂದ್ರ, ರಕ್ಷಿತ್ ಮೇಗರವಳ್ಳಿ, ಮೇದೊಳಿಗೆ ರಾಮಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ:</strong> ಶಿಕಾರಿಪುರಕ್ಕೆ ಆರ್ಎಸ್ಎಸ್ ಪ್ರಚಾರಕರಾಗಿ ಬಂದಿದ್ದ ಯಡಿಯೂರಪ್ಪ ಅಂದಿನ ಕಾಂಗ್ರೆಸ್ ಗೂಂಡಾಗಿರಿ ಎದುರಿಸಿ ಬಿಜೆಪಿ ಕಟ್ಟಿದ್ದರು. ಈಗ ಪಕ್ಷ ಬೆಳೆದಿದ್ದು ಕಾರ್ಯಕರ್ತರ ಕೈ ಗಟ್ಟಿಯಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು.</p>.<p>ಇಲ್ಲಿನ ವಿದ್ಯಾಧಿರಾಜ ಸಭಾಭವನದಲ್ಲಿ ಮಂಗಳವಾರ ಬಿಜೆಪಿ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿ, ಶಿಕಾರಿಪುರ ವಾರ್ಡ್ಗೆ ಬಿಜೆಪಿಯಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಯಾರೂ ಸಿದ್ಧರಿರಲಿಲ್ಲ. ಆಗ ನನ್ನ ತಾಯಿ ಸ್ಪರ್ಧಿಸಿದ್ದರು ಎಂದರು ನೆನಪಿಸಿದರು.</p>.<p>ಇಂದಿರಾಗಾಂಧಿ ಪ್ರಧಾನಮಂತ್ರಿ, ಗುಂಡೂರಾವ್ ಮುಖ್ಯಮಂತ್ರಿ, ಶಿಕಾರಿಪುರ ಕ್ಷೇತ್ರದ ಯಂಕಟಪ್ಪ ಜೈಲ್ ಮಂತ್ರಿಯಾಗಿದ್ದರು. ಅಂತಹ ಕ್ಲಿಷ್ಟಕರ ಸನ್ನಿವೇಶದಲ್ಲಿ ಎಲ್ಲಾ ಜಾತಿ, ವರ್ಗವನ್ನು ಸೇರಿಸಿಕೊಂಡು ಯಡಿಯೂರಪ್ಪ ಶಾಸಕರಾದರು. ಹೋರಾಟದಿಂದ ಬಿಜೆಪಿ ಬಲಿಷ್ಠವಾಗಿ ಬೆಳೆದು ನಿಂತಿದೆ ಎಂದರು.</p>.<p>‘ಅಭಿವೃದ್ಧಿ ಆಧಾರದ ಮೇಲೆ ಬಿಜೆಪಿಗೆ ಮತ ಕೇಳುತ್ತಿದೇವೆ. ಶಿವಮೊಗ್ಗ ಜಿಲ್ಲೆಯನ್ನು ಮಾದರಿ ಕ್ಷೇತ್ರವಾಗಿಸುವಲ್ಲಿ ಬಿ.ವೈ. ರಾಘವೇಂದ್ರ ಕೊಡುಗೆ ಅಪಾರ ಇದೆ’ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.</p>.<p>ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ತಾಲ್ಲೂಕು ಘಟಕದ ಅಧ್ಯಕ್ಷ ನವೀನ್ ಹೆದ್ದೂರು, ಮಾಜಿ ಶಾಸಕ ಸ್ವಾಮಿರಾವ್, ಪ್ರಮುಖರಾದ ಮಹೇಶ್ ಹುಲ್ಕುಳಿ, ಸಾಲೇಕೊಪ್ಪ ರಾಮಚಂದ್ರ, ರಕ್ಷಿತ್ ಮೇಗರವಳ್ಳಿ, ಮೇದೊಳಿಗೆ ರಾಮಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>