<p><strong>ಸಾಗರ</strong>: ರಂಗಭೂಮಿ, ಕಿರುತೆರೆ, ಚಲನಚಿತ್ರ, ಯಕ್ಷಗಾನ, ಪರಿಸರ, ಸಾಮಾಜಿಕ ಹೋರಾಟ, ರಾಜಕೀಯ, ಶೈಕ್ಷಣಿಕ ಜಾಗೃತಿ.. ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸದಾ ಲವಲವಿಕೆಯಿಂದ ಓಡಾಡುತ್ತಿದ್ದ ಸಾಮಾಜಿಕ ಕಳಕಳಿಯ ಕಲಾವಿದ ಯೇಸು ಪ್ರಕಾಶ್ ನಿಧನದ ಸುದ್ದಿ ಈ ಭಾಗದ ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರಕ್ಕೆ ಅತೀವ ನೋವು ತಂದಿದೆ.</p><p>ಬಾಲ್ಯದಲ್ಲಿಯೇ ರಂಗಭೂಮಿ, ಯಕ್ಷಗಾನದ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದ ಯೇಸು ಪ್ರಕಾಶ್ ಅವರು ಕುಗ್ವೆಯ ರಂಗಸಂಕುಲ, ನೀನಾಸಂ ಬಳಗ, ನಾಡಚಾವಡಿ, ಕೆ.ವಿ.ಸುಬ್ಬಣ್ಣ ರಂಗಸಮೂಹ, ಹಾಲ್ದೀಪ ಚಂಡೆಬಳಗ ಮೊದಲಾದ ಸಂಸ್ಥೆಗಳ ಮೂಲಕ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿ ದ್ದರು.</p><p>ಕೆ.ವಿ.ಸುಬ್ಬಣ್ಣ, ಪ್ರಸನ್ನ, ಚಂದ್ರಶೇಖರ ಕಂಬಾರ, ಅತುಲ್ ತಿವಾರಿ, ಚಿದಂಬರರಾವ್ ಜಂಬೆ, ಕೆ.ವಿ.ಅಕ್ಷರ, ವೆಂಕಟರಮಣ ಐತಾಳ, ಪ್ರಕಾಶ್ ಬೆಳವಾಡಿ, ರಘುನಂದನ, ಕೆ.ಜಿ.ಕೃಷ್ಣಮೂರ್ತಿ ಮತ್ತಿತರ ನಿರ್ದೇಶಕರ ನಾಟಕಗಳಿಗೆ ಬಣ್ಣ ಹಚ್ಚಿದ್ದು ಯೇಸು ಪ್ರಕಾಶ್ ಹೆಗ್ಗಳಿಕೆ.</p><p>ಎಸ್.ನಾರಾಯಣ್ ನಿರ್ದೇಶನದ ‘ವೀರೂ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ಯೇಸು ‘ಸಂತ’, ‘ಮಾದೇಶ’, ‘ಗುಣವಂತ’, ‘ಯಾರೇ ಕೂಗಾಡಲಿ’, ‘ಸುಗ್ರೀವ’, ‘ಸಾರಥಿ’, ‘ರಾಜಾಹುಲಿ’, ‘ಸಂತೆಯಲ್ಲಿ ನಿಂತ ಕಬೀರ’, ‘ಕಲ್ಪನಾ-2’ ಸೇರಿ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು.</p><p>ಬಟ್ಟೆಮಲ್ಲಪ್ಪ ಗ್ರಾಮದ ಸಾರಾ ಸಂಸ್ಥೆಯ ಮೂಲಕ ಜಲಸಾಕ್ಷರತೆ, ಇಂಗುಗುಂಡಿ ನಿರ್ಮಾಣ, ಹಸರೀಕರಣ, ಕೆರೆಗಳ ಪುನಶ್ಚೇತನದಂತಹ ಪರಿಸರ ಸಂಬಂಧಿ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಸಾಗರ-ಹೊಸನಗರ ಭಾಗದ 25ಕ್ಕೂ ಹೆಚ್ಚು ಕೆರೆಗಳ ಪುನಶ್ಚೇತನ ಕಾಮಗಾರಿಗೆ ಪ್ರೇರಕ ಶಕ್ತಿಯಾಗಿ ನಿಂತಿದ್ದರು.</p><p>ಹರಿದ್ರಾವತಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿ, ಅಗತ್ಯ ಬಿದ್ದಾಗ ಬೀದಿಗಿಳಿದು ಹೋರಾಟ ನಡೆಸಿದ್ದರು. ಶರಾವತಿ ಹಿನ್ನೀರನ್ನು ಬೆಂಗಳೂರಿಗೆ ಹರಿಸುವ ಯೋಜನೆಯ ಪ್ರಸ್ತಾಪ ಬಂದಾಗ ಅದರ ವಿರುದ್ಧ ಇಲ್ಲಿ ನಡೆದ ಪ್ರತಿಭಟನೆಯ ಮುಂಚೂಣಿಯಲ್ಲಿದ್ದರು.</p><p>ಹೆಣ್ಣುಮಕ್ಕಳು ಕಲಾ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂಬ ತುಡಿತ ಅವರಲ್ಲಿತ್ತು. ಅವರ ಪ್ರೋತ್ಸಾಹದಿಂದಾಗಿಯೇ ಪತ್ನಿ ಶೈಲಜಾ, ಪುತ್ರಿ ಮಧುನಿಷಾ ಕೂಡ ನಾಟಕ ಹಾಗೂ ಯಕ್ಷಗಾನಕ್ಕೆ ಬಣ್ಣ ಹಚ್ಚಿದ್ದರು.</p><p>ಊರವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಅಪರೂಪದ ಕಲಾವಿದ ಯೇಸು ಪ್ರಕಾಶ್ ಅವರ ಅಕಾಲಿಕ ನಿಧನ ಮಲೆನಾಡಿನ ಪರಿಸರಕ್ಕೆ ತುಂಬಲಾರದ ನಷ್ಟವಾಗಿದೆ.</p><p><strong>ಅಂತ್ಯಕ್ರಿಯೆ</strong></p><p>ಶನಿವಾರ ನಿಧನರಾದ ಯೇಸು ಪ್ರಕಾಶ್ ಅವರ ಅಂತ್ಯಕ್ರಿಯೆ ಭಾನುವಾರ ನಗರದ ಕಂಬಳಿಕೊಪ್ಪ ಬಡಾವಣೆಯಲ್ಲಿರುವ ಸಿ.ಎಸ್.ಐ ಚರ್ಚ್ನ ಸಮಾಧಿ ಸ್ಥಳದಲ್ಲಿ ನಡೆಯಿತು.</p><p>ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಆನಂದಪುರಂನ ಮುರುಘಾಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಮೂಲೆಗದ್ದೆ ಮಠದ ಸ್ವಾಮೀಜಿ ಸೇರಿ ಹಲವು ಗಣ್ಯರು ಅಂತಿಮ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ರಂಗಭೂಮಿ, ಕಿರುತೆರೆ, ಚಲನಚಿತ್ರ, ಯಕ್ಷಗಾನ, ಪರಿಸರ, ಸಾಮಾಜಿಕ ಹೋರಾಟ, ರಾಜಕೀಯ, ಶೈಕ್ಷಣಿಕ ಜಾಗೃತಿ.. ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸದಾ ಲವಲವಿಕೆಯಿಂದ ಓಡಾಡುತ್ತಿದ್ದ ಸಾಮಾಜಿಕ ಕಳಕಳಿಯ ಕಲಾವಿದ ಯೇಸು ಪ್ರಕಾಶ್ ನಿಧನದ ಸುದ್ದಿ ಈ ಭಾಗದ ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರಕ್ಕೆ ಅತೀವ ನೋವು ತಂದಿದೆ.</p><p>ಬಾಲ್ಯದಲ್ಲಿಯೇ ರಂಗಭೂಮಿ, ಯಕ್ಷಗಾನದ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದ ಯೇಸು ಪ್ರಕಾಶ್ ಅವರು ಕುಗ್ವೆಯ ರಂಗಸಂಕುಲ, ನೀನಾಸಂ ಬಳಗ, ನಾಡಚಾವಡಿ, ಕೆ.ವಿ.ಸುಬ್ಬಣ್ಣ ರಂಗಸಮೂಹ, ಹಾಲ್ದೀಪ ಚಂಡೆಬಳಗ ಮೊದಲಾದ ಸಂಸ್ಥೆಗಳ ಮೂಲಕ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿ ದ್ದರು.</p><p>ಕೆ.ವಿ.ಸುಬ್ಬಣ್ಣ, ಪ್ರಸನ್ನ, ಚಂದ್ರಶೇಖರ ಕಂಬಾರ, ಅತುಲ್ ತಿವಾರಿ, ಚಿದಂಬರರಾವ್ ಜಂಬೆ, ಕೆ.ವಿ.ಅಕ್ಷರ, ವೆಂಕಟರಮಣ ಐತಾಳ, ಪ್ರಕಾಶ್ ಬೆಳವಾಡಿ, ರಘುನಂದನ, ಕೆ.ಜಿ.ಕೃಷ್ಣಮೂರ್ತಿ ಮತ್ತಿತರ ನಿರ್ದೇಶಕರ ನಾಟಕಗಳಿಗೆ ಬಣ್ಣ ಹಚ್ಚಿದ್ದು ಯೇಸು ಪ್ರಕಾಶ್ ಹೆಗ್ಗಳಿಕೆ.</p><p>ಎಸ್.ನಾರಾಯಣ್ ನಿರ್ದೇಶನದ ‘ವೀರೂ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ಯೇಸು ‘ಸಂತ’, ‘ಮಾದೇಶ’, ‘ಗುಣವಂತ’, ‘ಯಾರೇ ಕೂಗಾಡಲಿ’, ‘ಸುಗ್ರೀವ’, ‘ಸಾರಥಿ’, ‘ರಾಜಾಹುಲಿ’, ‘ಸಂತೆಯಲ್ಲಿ ನಿಂತ ಕಬೀರ’, ‘ಕಲ್ಪನಾ-2’ ಸೇರಿ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು.</p><p>ಬಟ್ಟೆಮಲ್ಲಪ್ಪ ಗ್ರಾಮದ ಸಾರಾ ಸಂಸ್ಥೆಯ ಮೂಲಕ ಜಲಸಾಕ್ಷರತೆ, ಇಂಗುಗುಂಡಿ ನಿರ್ಮಾಣ, ಹಸರೀಕರಣ, ಕೆರೆಗಳ ಪುನಶ್ಚೇತನದಂತಹ ಪರಿಸರ ಸಂಬಂಧಿ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಸಾಗರ-ಹೊಸನಗರ ಭಾಗದ 25ಕ್ಕೂ ಹೆಚ್ಚು ಕೆರೆಗಳ ಪುನಶ್ಚೇತನ ಕಾಮಗಾರಿಗೆ ಪ್ರೇರಕ ಶಕ್ತಿಯಾಗಿ ನಿಂತಿದ್ದರು.</p><p>ಹರಿದ್ರಾವತಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿ, ಅಗತ್ಯ ಬಿದ್ದಾಗ ಬೀದಿಗಿಳಿದು ಹೋರಾಟ ನಡೆಸಿದ್ದರು. ಶರಾವತಿ ಹಿನ್ನೀರನ್ನು ಬೆಂಗಳೂರಿಗೆ ಹರಿಸುವ ಯೋಜನೆಯ ಪ್ರಸ್ತಾಪ ಬಂದಾಗ ಅದರ ವಿರುದ್ಧ ಇಲ್ಲಿ ನಡೆದ ಪ್ರತಿಭಟನೆಯ ಮುಂಚೂಣಿಯಲ್ಲಿದ್ದರು.</p><p>ಹೆಣ್ಣುಮಕ್ಕಳು ಕಲಾ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂಬ ತುಡಿತ ಅವರಲ್ಲಿತ್ತು. ಅವರ ಪ್ರೋತ್ಸಾಹದಿಂದಾಗಿಯೇ ಪತ್ನಿ ಶೈಲಜಾ, ಪುತ್ರಿ ಮಧುನಿಷಾ ಕೂಡ ನಾಟಕ ಹಾಗೂ ಯಕ್ಷಗಾನಕ್ಕೆ ಬಣ್ಣ ಹಚ್ಚಿದ್ದರು.</p><p>ಊರವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಅಪರೂಪದ ಕಲಾವಿದ ಯೇಸು ಪ್ರಕಾಶ್ ಅವರ ಅಕಾಲಿಕ ನಿಧನ ಮಲೆನಾಡಿನ ಪರಿಸರಕ್ಕೆ ತುಂಬಲಾರದ ನಷ್ಟವಾಗಿದೆ.</p><p><strong>ಅಂತ್ಯಕ್ರಿಯೆ</strong></p><p>ಶನಿವಾರ ನಿಧನರಾದ ಯೇಸು ಪ್ರಕಾಶ್ ಅವರ ಅಂತ್ಯಕ್ರಿಯೆ ಭಾನುವಾರ ನಗರದ ಕಂಬಳಿಕೊಪ್ಪ ಬಡಾವಣೆಯಲ್ಲಿರುವ ಸಿ.ಎಸ್.ಐ ಚರ್ಚ್ನ ಸಮಾಧಿ ಸ್ಥಳದಲ್ಲಿ ನಡೆಯಿತು.</p><p>ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಆನಂದಪುರಂನ ಮುರುಘಾಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಮೂಲೆಗದ್ದೆ ಮಠದ ಸ್ವಾಮೀಜಿ ಸೇರಿ ಹಲವು ಗಣ್ಯರು ಅಂತಿಮ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>