<p><strong>ಸಾಗರ: ಯೋಗಿ ನಾರಾಯಣ ಯತೀಂದ್ರರಂತಹ ದಾರ್ಶನಿಕರ ಸಂದೇಶಗಳನ್ನು ಪಾಲಿಸಿದರೆ ಸಾಮಾಜಿಕ ಸುಧಾರಣೆ ಸಾಧ್ಯ ಎಂದು ಉಪ ತಹಶೀಲ್ದಾರ್ ತೋಯಜಾಕ್ಷಿ ಹೇಳಿದರು. </strong></p>.<p><strong>ಇಲ್ಲಿನ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕು ಆಡಳಿತ ಏರ್ಪಡಿಸಿದ್ದ ಯೋಗಿ ನಾರಾಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. </strong></p>.<p><strong>ಸಮಾಜದ ಅಂಕುಡೊಂಕುಗಳನ್ನು ತಿದ್ದುವ ನಿಟ್ಟಿನಲ್ಲಿ ನಾರಾಯಣ ಯತೀಂದ್ರರು ಇಂದಿಗೂ ಪ್ರಸ್ತುತವಾಗುವ ಅತ್ಯಂತ ಮಹತ್ವದ ಸಂದೇಶಗಳನ್ನು ನಮಗೆ ನೀಡಿದ್ದಾರೆ. ಯುವಜನರು ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ಅವುಗಳನ್ನು ಪ್ರಸರಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದರು.</strong></p>.<p><strong>ಸಹಾಯಕ ಪ್ರಾಧ್ಯಾಪಕ ಪ್ರೊ.ಚರಣ್ ಜಂಬಾನಿ ಉಪನ್ಯಾಸ ನೀಡಿದರು. ತಾಲ್ಲೂಕು ಬಲಿಜ ಸಮುದಾಯದ ಅಧ್ಯಕ್ಷ ಸತೀಶ್ ಆರ್. ಪ್ರಮುಖರಾದ ಶಾಂತಾ ಪಾಂಡುರಂಗ, ಮೋಹನ್, ವಿ.ಟಿ.ಸ್ವಾಮಿ, ದೇವರಾಜ್ ಎಸ್.ಪಿ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: ಯೋಗಿ ನಾರಾಯಣ ಯತೀಂದ್ರರಂತಹ ದಾರ್ಶನಿಕರ ಸಂದೇಶಗಳನ್ನು ಪಾಲಿಸಿದರೆ ಸಾಮಾಜಿಕ ಸುಧಾರಣೆ ಸಾಧ್ಯ ಎಂದು ಉಪ ತಹಶೀಲ್ದಾರ್ ತೋಯಜಾಕ್ಷಿ ಹೇಳಿದರು. </strong></p>.<p><strong>ಇಲ್ಲಿನ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕು ಆಡಳಿತ ಏರ್ಪಡಿಸಿದ್ದ ಯೋಗಿ ನಾರಾಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. </strong></p>.<p><strong>ಸಮಾಜದ ಅಂಕುಡೊಂಕುಗಳನ್ನು ತಿದ್ದುವ ನಿಟ್ಟಿನಲ್ಲಿ ನಾರಾಯಣ ಯತೀಂದ್ರರು ಇಂದಿಗೂ ಪ್ರಸ್ತುತವಾಗುವ ಅತ್ಯಂತ ಮಹತ್ವದ ಸಂದೇಶಗಳನ್ನು ನಮಗೆ ನೀಡಿದ್ದಾರೆ. ಯುವಜನರು ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ಅವುಗಳನ್ನು ಪ್ರಸರಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದರು.</strong></p>.<p><strong>ಸಹಾಯಕ ಪ್ರಾಧ್ಯಾಪಕ ಪ್ರೊ.ಚರಣ್ ಜಂಬಾನಿ ಉಪನ್ಯಾಸ ನೀಡಿದರು. ತಾಲ್ಲೂಕು ಬಲಿಜ ಸಮುದಾಯದ ಅಧ್ಯಕ್ಷ ಸತೀಶ್ ಆರ್. ಪ್ರಮುಖರಾದ ಶಾಂತಾ ಪಾಂಡುರಂಗ, ಮೋಹನ್, ವಿ.ಟಿ.ಸ್ವಾಮಿ, ದೇವರಾಜ್ ಎಸ್.ಪಿ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>