ಹೊಳೆಹೊನ್ನೂರು: ಭದ್ರಾವತಿ ತಾಲ್ಲೂಕಿನ ಗುಡುಮಗಟ್ಟೆಯ ಯುವಕ ಜಿ.ಜೆ. ಪರಮೇಶ್ (28) ಡೆಂಗಿಯಿಂದ ಮೃತಪಟ್ಟಿದ್ದಾರೆ.
ಕಳೆದೊಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಪರಮೇಶ್ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಮೃತಪಟ್ಟಿದ್ದಾರೆ.
‘ಅವರಿಗೆ ಡೆಂಗಿ ಇರುವುದು ದೃಢಪಟ್ಟಿದೆ’ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಜೋತ್ರದಾರ್ ಜಯಪ್ಪ ಅವರ ಹಿರಿಯ ಪುತ್ರರಾದ ಜಿ.ಜೆ.ಪರಮೇಶ್ ಎರಡು ವರ್ಷಗಳ ಹಿಂದಷ್ಟೇ ವಿವಾಹವಾಗಿದ್ದರು.