<p>ದಾವಣಗೆರೆ: ಪ್ರೇರಣ ಸಂಸ್ಥೆಯಿಂದ ಪ್ರತಿವರ್ಷ ನೀಡಲಾಗುವ ಉತ್ತಮ ಮಹಿಳಾ ಉದ್ಯಮಿ ಪ್ರಶಸ್ತಿವನ್ನು ಪದ್ಮಾವತಿ ವಿಜಯಕುಮಾರ್ ಅವರಿಗೆ ನೀಡಲಾಗುವುದು ಎಂದು ಪ್ರೇರಣಾ ಸಂಸ್ಥೆಯ ಕಾರ್ಯದರ್ಶಿ ಉಮಾ ನಾಗರಾಜ್ ತಿಳಿಸಿದರು.<br /> <br /> ವನಿತಾ ಸಮಾಜದ ಅಂಗಸಂಸ್ಥೆಯಾದ ಪ್ರೇರಣಾ ಸಂಸ್ಥೆಯು ಮನೆಯಲ್ಲಿ ಉದ್ಯೋಗ ಮಾಡುವ ಮಹಿಳೆಯರನ್ನು ಗುರುತಿಸಿ ಪ್ರೋತ್ಸಾಹಿಸುವಂತಹ ಕೆಲಸ ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ, ಸ್ವಸಹಾಯ ಗುಂಪುಗಳಿಗೆ ಜಾಗೃತಿ ಶಿಬಿರ ಹಾಗೂ ಎಂಎಸ್ಎಂಇ ಸಂಸ್ಥೆಯಿಂದ ಕಿವುಡ ಮತ್ತು ಮೂಕ ಹೆಣ್ಣು ಮಕ್ಕಳಿಗೆ 6 ವಾರದ ಸಿದ್ಧ ಉಡುಗಳ ತಯಾರಿಕೆ ತರಬೇತಿಯ ಮುಕ್ತಾಯ ಸಮಾರಂಭವನ್ನು ಶನಿವಾರ ಏರ್ಪಡಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.<br /> <br /> ಪ್ರೇರಣ ಸಂಸ್ಥೆಯ ಅಧ್ಯಕ್ಷೆ ನಾಗರತ್ನ ಜಗದೀಶ್ ಮಾತನಾಡಿ, ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ನೆರವೇರಿಸಲಿದ್ದು, ಅತಿಥಿಗಳಾಗಿ ಸಿ. ಕೇಶವಮೂರ್ತಿ, ಪದ್ಮಾನಾಗಪ್ರಕಾಶ್, ಗದಿಗೇಶ ಕೆ. ಶಿರಶಿ ಭಾಗವಹಿಸಲಿದ್ದಾರೆ. ನಾಗಮ್ಮ ಕೇಶವಮೂರ್ತಿ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.<br /> ಉಷಾ ಜಯಪ್ರಕಾಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಪ್ರೇರಣ ಸಂಸ್ಥೆಯಿಂದ ಪ್ರತಿವರ್ಷ ನೀಡಲಾಗುವ ಉತ್ತಮ ಮಹಿಳಾ ಉದ್ಯಮಿ ಪ್ರಶಸ್ತಿವನ್ನು ಪದ್ಮಾವತಿ ವಿಜಯಕುಮಾರ್ ಅವರಿಗೆ ನೀಡಲಾಗುವುದು ಎಂದು ಪ್ರೇರಣಾ ಸಂಸ್ಥೆಯ ಕಾರ್ಯದರ್ಶಿ ಉಮಾ ನಾಗರಾಜ್ ತಿಳಿಸಿದರು.<br /> <br /> ವನಿತಾ ಸಮಾಜದ ಅಂಗಸಂಸ್ಥೆಯಾದ ಪ್ರೇರಣಾ ಸಂಸ್ಥೆಯು ಮನೆಯಲ್ಲಿ ಉದ್ಯೋಗ ಮಾಡುವ ಮಹಿಳೆಯರನ್ನು ಗುರುತಿಸಿ ಪ್ರೋತ್ಸಾಹಿಸುವಂತಹ ಕೆಲಸ ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ, ಸ್ವಸಹಾಯ ಗುಂಪುಗಳಿಗೆ ಜಾಗೃತಿ ಶಿಬಿರ ಹಾಗೂ ಎಂಎಸ್ಎಂಇ ಸಂಸ್ಥೆಯಿಂದ ಕಿವುಡ ಮತ್ತು ಮೂಕ ಹೆಣ್ಣು ಮಕ್ಕಳಿಗೆ 6 ವಾರದ ಸಿದ್ಧ ಉಡುಗಳ ತಯಾರಿಕೆ ತರಬೇತಿಯ ಮುಕ್ತಾಯ ಸಮಾರಂಭವನ್ನು ಶನಿವಾರ ಏರ್ಪಡಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.<br /> <br /> ಪ್ರೇರಣ ಸಂಸ್ಥೆಯ ಅಧ್ಯಕ್ಷೆ ನಾಗರತ್ನ ಜಗದೀಶ್ ಮಾತನಾಡಿ, ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ನೆರವೇರಿಸಲಿದ್ದು, ಅತಿಥಿಗಳಾಗಿ ಸಿ. ಕೇಶವಮೂರ್ತಿ, ಪದ್ಮಾನಾಗಪ್ರಕಾಶ್, ಗದಿಗೇಶ ಕೆ. ಶಿರಶಿ ಭಾಗವಹಿಸಲಿದ್ದಾರೆ. ನಾಗಮ್ಮ ಕೇಶವಮೂರ್ತಿ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.<br /> ಉಷಾ ಜಯಪ್ರಕಾಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>