<p><strong>ಸಾಗರ: </strong>ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆ ಪ್ರಕಟವಾದಾಗ ಸಾಮಾನ್ಯವಾಗಿ ಅಪಸ್ವರದ ಧ್ವನಿಗಳು ಕೇಳಿ ಬರುತ್ತವೆ. ಈ ಬಾರಿ ಆ ರೀತಿ ಆಗದೇ ಇರುವುದು ನನಗೆ ಸಮಾಧಾನ ಉಂಟು ಮಾಡಿದೆ ಎಂದು ಮಡಿಕೇರಿಯಲ್ಲಿ ನಡೆಯಲಿರುವ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಡಾ.ನಾ.ಡಿಸೋಜ ಹೇಳಿದರು.<br /> <br /> ವಕೀಲರ ಸಂಘ ಶುಕ್ರವಾರ ನೀಡಿದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆ ವಿವಾದಕ್ಕೆ ಆಸ್ಪದ ಮಾಡಿಕೊಡದೆ ಇರುವ ರೀತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯುವುದು ಸೂಕ್ತ ಎಂದರು.<br /> <br /> ವಕೀಲರ ಸಂಘದ ಅಧ್ಯಕ್ಷ ಎಚ್.ಕೆ. ಅಣ್ಣಪ್ಪ ಮಾತನಾಡಿ, ನಾ.ಡಿಸೋಜ ಅವರನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸಾಗರದ ಸಾಂಸ್ಕೃತಿಕ ಹಿರಿಮೆಗೆ ಮತ್ತೊಂದು ಗರಿ ಮೂಡಿಸಿದಂತಾಗಿದೆ. ಡಿಸೋಜ ಅವರಿಗೆ ಭವಿಷ್ಯದಲ್ಲಿ ಜ್ಞಾನಪೀಠ ಪ್ರಶಸ್ತಿ ಬರುವಂತಾಗಲಿ ಎಂದು ಆಶಿಸಿದರು.<br /> <br /> ಹಿರಿಯ ವಕೀಲ ಟಿ.ಬಿ.ಮಂಜುನಾಥ್ ಶೆಟ್ಟಿ ಮಾತನಾಡಿ ಸರಳತೆ ಹಾಗೂ ಸಜ್ಜನಿಕೆಗೆ ಮತ್ತೊಂದು ಹೆಸರು ಎನ್ನುವಂತಿರುವ ಡಿಸೋಜ ಅವರು ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನ ವಹಿಸಲು ಅತ್ಯಂತ ಸೂಕ್ತ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು.<br /> <br /> ವಕೀಲರ ಸಂಘದ ಕಾರ್ಯದರ್ಶಿ ರವೀಶ್ಕುಮಾರ್, ಖಜಾಂಚಿ ಪ್ರೇಮ್ಸಿಂಗ್, ಆರೀಫ್ ಆಲಿಖಾನ್, ಬಿ.ತ್ಯಾಗಮೂರ್ತಿ, ಎಚ್.ಆರ್. ಶ್ರೀಧರ್, ವಿನಯಕುಮಾರ್, ಉಲ್ಲಾಸ್, ಮರಿದಾಸ್, ಕೆ.ಎಲ್. ಭೋಜರಾಜ್, ಮಹಮದ್ ಜಿಕ್ರಿಯಾ, ಕೆ.ವಿ.ಪ್ರವೀಣ್ಕುಮಾರ್, ಗೌತಮ್, ಅಬ್ದುಲ್ ರಶೀದ್, ರಮೇಶ್ ಮರ್ತೂರು ಇನ್ನಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆ ಪ್ರಕಟವಾದಾಗ ಸಾಮಾನ್ಯವಾಗಿ ಅಪಸ್ವರದ ಧ್ವನಿಗಳು ಕೇಳಿ ಬರುತ್ತವೆ. ಈ ಬಾರಿ ಆ ರೀತಿ ಆಗದೇ ಇರುವುದು ನನಗೆ ಸಮಾಧಾನ ಉಂಟು ಮಾಡಿದೆ ಎಂದು ಮಡಿಕೇರಿಯಲ್ಲಿ ನಡೆಯಲಿರುವ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಡಾ.ನಾ.ಡಿಸೋಜ ಹೇಳಿದರು.<br /> <br /> ವಕೀಲರ ಸಂಘ ಶುಕ್ರವಾರ ನೀಡಿದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆ ವಿವಾದಕ್ಕೆ ಆಸ್ಪದ ಮಾಡಿಕೊಡದೆ ಇರುವ ರೀತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯುವುದು ಸೂಕ್ತ ಎಂದರು.<br /> <br /> ವಕೀಲರ ಸಂಘದ ಅಧ್ಯಕ್ಷ ಎಚ್.ಕೆ. ಅಣ್ಣಪ್ಪ ಮಾತನಾಡಿ, ನಾ.ಡಿಸೋಜ ಅವರನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸಾಗರದ ಸಾಂಸ್ಕೃತಿಕ ಹಿರಿಮೆಗೆ ಮತ್ತೊಂದು ಗರಿ ಮೂಡಿಸಿದಂತಾಗಿದೆ. ಡಿಸೋಜ ಅವರಿಗೆ ಭವಿಷ್ಯದಲ್ಲಿ ಜ್ಞಾನಪೀಠ ಪ್ರಶಸ್ತಿ ಬರುವಂತಾಗಲಿ ಎಂದು ಆಶಿಸಿದರು.<br /> <br /> ಹಿರಿಯ ವಕೀಲ ಟಿ.ಬಿ.ಮಂಜುನಾಥ್ ಶೆಟ್ಟಿ ಮಾತನಾಡಿ ಸರಳತೆ ಹಾಗೂ ಸಜ್ಜನಿಕೆಗೆ ಮತ್ತೊಂದು ಹೆಸರು ಎನ್ನುವಂತಿರುವ ಡಿಸೋಜ ಅವರು ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನ ವಹಿಸಲು ಅತ್ಯಂತ ಸೂಕ್ತ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು.<br /> <br /> ವಕೀಲರ ಸಂಘದ ಕಾರ್ಯದರ್ಶಿ ರವೀಶ್ಕುಮಾರ್, ಖಜಾಂಚಿ ಪ್ರೇಮ್ಸಿಂಗ್, ಆರೀಫ್ ಆಲಿಖಾನ್, ಬಿ.ತ್ಯಾಗಮೂರ್ತಿ, ಎಚ್.ಆರ್. ಶ್ರೀಧರ್, ವಿನಯಕುಮಾರ್, ಉಲ್ಲಾಸ್, ಮರಿದಾಸ್, ಕೆ.ಎಲ್. ಭೋಜರಾಜ್, ಮಹಮದ್ ಜಿಕ್ರಿಯಾ, ಕೆ.ವಿ.ಪ್ರವೀಣ್ಕುಮಾರ್, ಗೌತಮ್, ಅಬ್ದುಲ್ ರಶೀದ್, ರಮೇಶ್ ಮರ್ತೂರು ಇನ್ನಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>