<p><strong>ಶಿವಮೊಗ್ಗ:</strong> ಅಧಿಕಾರಿಗಳು ಜವಾಬ್ದಾರಿ ಅರಿತು ಸಾರ್ವಜನಿಕರ ಆವಶ್ಯಕ ಸೇವೆಯನ್ನು ನಿಗದಿತ ಕಾಲಮಿತಿಯಲ್ಲಿ ಒದಗಿಸಲು ನಾಗರಿಕ ಸೇವಾ ಖಾತರಿ ಕಾಯಿದೆ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿ ಹೇಳಿದರು.<br /> <br /> ಜಿಲ್ಲಾ ಪಂಚಾಯ್ತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ನಾಗರಿಕ ಸೇವಾ ಖಾತರಿ ಕಾಯಿದೆ-2011ರ ಕುರಿತ ಎರಡು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> ನಾಗರಿಕ ಸೇವೆ ಒದಗಿಸುವ ಕುರಿತು ಅನೇಕ ಅಧಿನಿಯಮಗಳು ಜಾರಿಯಲ್ಲಿವೆ. ಆಡಳಿತ ವ್ಯವಸ್ಥೆಯಲ್ಲಿ ಹೊಸ ಮೈಲಿಗಲ್ಲಾಗಿರುವ ನಾಗರಿಕ ಸೇವಾ ಖಾತರಿ ಕಾಯ್ದೆಯನ್ನು ಪರಿಣಾಮಕಾರಿ ಆಗಿ ಅನುಷ್ಠಾನಗೊಳಿಸುವ ಗುರುತರವಾದ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದರು.<br /> <br /> ಸಾರ್ವಜನಿಕರ ಕೆಲಸ ಕಾರ್ಯಗಳಲ್ಲಿ ಆಗುತ್ತಿರುವ ಅನಗತ್ಯ ವಿಳಂಬ, ಇತ್ಯಾದಿ ಕಾರಣಗಳಿಗಾಗಿ ಚುನಾಯಿತ ಪ್ರತಿನಿಧಿಗಳು ಮಧ್ಯಪ್ರವೇಶಿಸಲು ಅವಕಾಶ ಇಲ್ಲದಂತೆ ಸಾರ್ವಜನಿಕರು ಸರ್ಕಾರಿ ಸೇವೆಗಳ ಸೌಲಭ್ಯವನ್ನು ಯಾವುದೇ ಅಡೆತಡೆಗಳಿಲ್ಲದೆ ಸುಲಭವಾಗಿ ಪಡೆದುಕೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದರು. <br /> <br /> ಈ ಕಾಯ್ದೆಯಡಿ ಸಾರ್ವಜನಿಕರು ವಿವಿಧ ರೀತಿಯ 151 ಸೇವಾ ಸೌಲಭ್ಯಗಳನ್ನು ಒದಗಿಸುವ ಕಂದಾಯ, ಗ್ರಾಮೀಣಾಭಿವೃದ್ಧಿ, ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸೇರಿದಂತೆ 11 ಇಲಾಖೆಗಳನ್ನು ಈ ಕಾಯ್ದೆಯ ವ್ಯಾಪ್ತಿಗೆ ತರಲಾಗಿದೆ ಎಂದರು.<br /> <br /> ರಾಜ್ಯದ ಮೊದಲ ತರಬೇತಿ ಶಿವಮೊಗ್ಗದಲ್ಲಿ ನಡೆಯುತ್ತಿದ್ದು, ತರಬೇತಿಯಲ್ಲಿ ಗಮನಿಸಬಹುದಾದ ವಿಷಯಗಳ ಕುರಿತು ತಿದ್ದುಪಡಿ, ಮಾರ್ಪಾಡು ಮಾಡಬೇಕೆನಿಸಿದ್ದಲ್ಲಿ ಅಂತಹ ವಿಷಯಗಳನ್ನು ಗುರುತಿಸಿ, ನೀಡಿದಲ್ಲಿ ಕಾಯ್ದೆಯ ತಿದ್ದುಪಡಿಯ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದರು.<br /> <br /> ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿ.ಪಂ. ಉಪ ಕಾರ್ಯದರ್ಶಿ ಹನುಮನರಸಯ್ಯ ಮಾತನಾಡಿ, ಸಾರ್ವಜನಿಕರಿಗೆ ಅಧಿನಿಯಮದ ಕುರಿತು ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.<br /> ಈ ಸಂದರ್ಭದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ರಾಮ್ಪ್ರಸಾದ್, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ನಾಗರಾಜ್, ಮೈಸೂರು ತರಬೇತಿ ಕೇಂದ್ರದ ಉಪ ನಿರ್ದೇಶಕ ನಾಗರಾಜ್, ತರಬೇತಿ ಸಂಸ್ಥೆಯ ನಿವೃತ್ತ ಜಂಟಿ ನಿರ್ದೇಶಕ ಇಕ್ಬಾಲ್ ಹುಸೇನ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. <br /> ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಅಧಿಕಾರಿಗಳು ಜವಾಬ್ದಾರಿ ಅರಿತು ಸಾರ್ವಜನಿಕರ ಆವಶ್ಯಕ ಸೇವೆಯನ್ನು ನಿಗದಿತ ಕಾಲಮಿತಿಯಲ್ಲಿ ಒದಗಿಸಲು ನಾಗರಿಕ ಸೇವಾ ಖಾತರಿ ಕಾಯಿದೆ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿ ಹೇಳಿದರು.<br /> <br /> ಜಿಲ್ಲಾ ಪಂಚಾಯ್ತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ನಾಗರಿಕ ಸೇವಾ ಖಾತರಿ ಕಾಯಿದೆ-2011ರ ಕುರಿತ ಎರಡು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> ನಾಗರಿಕ ಸೇವೆ ಒದಗಿಸುವ ಕುರಿತು ಅನೇಕ ಅಧಿನಿಯಮಗಳು ಜಾರಿಯಲ್ಲಿವೆ. ಆಡಳಿತ ವ್ಯವಸ್ಥೆಯಲ್ಲಿ ಹೊಸ ಮೈಲಿಗಲ್ಲಾಗಿರುವ ನಾಗರಿಕ ಸೇವಾ ಖಾತರಿ ಕಾಯ್ದೆಯನ್ನು ಪರಿಣಾಮಕಾರಿ ಆಗಿ ಅನುಷ್ಠಾನಗೊಳಿಸುವ ಗುರುತರವಾದ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದರು.<br /> <br /> ಸಾರ್ವಜನಿಕರ ಕೆಲಸ ಕಾರ್ಯಗಳಲ್ಲಿ ಆಗುತ್ತಿರುವ ಅನಗತ್ಯ ವಿಳಂಬ, ಇತ್ಯಾದಿ ಕಾರಣಗಳಿಗಾಗಿ ಚುನಾಯಿತ ಪ್ರತಿನಿಧಿಗಳು ಮಧ್ಯಪ್ರವೇಶಿಸಲು ಅವಕಾಶ ಇಲ್ಲದಂತೆ ಸಾರ್ವಜನಿಕರು ಸರ್ಕಾರಿ ಸೇವೆಗಳ ಸೌಲಭ್ಯವನ್ನು ಯಾವುದೇ ಅಡೆತಡೆಗಳಿಲ್ಲದೆ ಸುಲಭವಾಗಿ ಪಡೆದುಕೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದರು. <br /> <br /> ಈ ಕಾಯ್ದೆಯಡಿ ಸಾರ್ವಜನಿಕರು ವಿವಿಧ ರೀತಿಯ 151 ಸೇವಾ ಸೌಲಭ್ಯಗಳನ್ನು ಒದಗಿಸುವ ಕಂದಾಯ, ಗ್ರಾಮೀಣಾಭಿವೃದ್ಧಿ, ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸೇರಿದಂತೆ 11 ಇಲಾಖೆಗಳನ್ನು ಈ ಕಾಯ್ದೆಯ ವ್ಯಾಪ್ತಿಗೆ ತರಲಾಗಿದೆ ಎಂದರು.<br /> <br /> ರಾಜ್ಯದ ಮೊದಲ ತರಬೇತಿ ಶಿವಮೊಗ್ಗದಲ್ಲಿ ನಡೆಯುತ್ತಿದ್ದು, ತರಬೇತಿಯಲ್ಲಿ ಗಮನಿಸಬಹುದಾದ ವಿಷಯಗಳ ಕುರಿತು ತಿದ್ದುಪಡಿ, ಮಾರ್ಪಾಡು ಮಾಡಬೇಕೆನಿಸಿದ್ದಲ್ಲಿ ಅಂತಹ ವಿಷಯಗಳನ್ನು ಗುರುತಿಸಿ, ನೀಡಿದಲ್ಲಿ ಕಾಯ್ದೆಯ ತಿದ್ದುಪಡಿಯ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದರು.<br /> <br /> ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿ.ಪಂ. ಉಪ ಕಾರ್ಯದರ್ಶಿ ಹನುಮನರಸಯ್ಯ ಮಾತನಾಡಿ, ಸಾರ್ವಜನಿಕರಿಗೆ ಅಧಿನಿಯಮದ ಕುರಿತು ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.<br /> ಈ ಸಂದರ್ಭದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ರಾಮ್ಪ್ರಸಾದ್, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ನಾಗರಾಜ್, ಮೈಸೂರು ತರಬೇತಿ ಕೇಂದ್ರದ ಉಪ ನಿರ್ದೇಶಕ ನಾಗರಾಜ್, ತರಬೇತಿ ಸಂಸ್ಥೆಯ ನಿವೃತ್ತ ಜಂಟಿ ನಿರ್ದೇಶಕ ಇಕ್ಬಾಲ್ ಹುಸೇನ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. <br /> ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>