<p>ಕಾರ್ಗಲ್: ಜೋಗ ಜಲಪಾತಕ್ಕೆ ಆಗಮಿಸುವ ಪ್ರವಾಸಿಗರಿಗೆ ಮೂಲಸೌಕರ್ಯ ಒದಗಿಸುವಲ್ಲಿ ಜೋಗ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯೂ ಆದ ಜಿಲ್ಲಾಧಿಕಾರಿ ಪೊನ್ನುರಾಜ್ ಸಂಪೂರ್ಣ ನಿರ್ಲಕ್ಷ್ಯ ತಾಳಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತೀ.ನಾ. ಶ್ರೀನಿವಾಸ್ ಆರೋಪಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 4 ವರ್ಷಗಳಿಂದ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಒಂದು ಸಭೆಯನ್ನು ನಡೆಸಿಲ್ಲ. ಇದರಿಂದ ಜೋಗ್ಫಾಲ್ಸ್ ಪ್ರದೇಶದಲ್ಲಿ ಶುದ್ಧವಾದ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ. ಪ್ರಾಧಿಕಾರದ ವತಿಯಿಂದ ಕಟ್ಟಿರುವ ಕಾಂಪ್ಲೆಕ್ಸ್, ಅಲ್ಲಿರುವ ಶೌಚಾಲಯ, ಚರಂಡಿಗಳಲ್ಲಿ ದುರ್ವಾಸನೆ ಬೀರುತ್ತಿದೆ ಎಂದು ಹೇಳಿದರು.<br /> <br /> ಕೇಂದ್ರ ಸರ್ಕಾರ ಬೃಂದಾವನ ಮಾದರಿಯ ಗಾರ್ಡನ್ ನಿರ್ಮಾಣಕ್ಕೆ ನೀಡಿದ ್ಙ 5 ಕೋಟಿ ಹಣ ಖರ್ಚಾಗಿಲ್ಲ. ್ಙ 1.20 ಕೋಟಿ ವೆಚ್ಚದ ಸಂಗೀತ ಕಾರಂಜಿ ಇನ್ನೂ ಆರಂಭವಾಗಿಲ್ಲ. ಜೋಗ್ಫಾಲ್ಸ್ ವ್ಯಾಪ್ತಿಯಲ್ಲಿ ನಡೆದ ಸುಮಾರು ್ಙ 8 ಕೋಟಿ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರ್ಗಲ್: ಜೋಗ ಜಲಪಾತಕ್ಕೆ ಆಗಮಿಸುವ ಪ್ರವಾಸಿಗರಿಗೆ ಮೂಲಸೌಕರ್ಯ ಒದಗಿಸುವಲ್ಲಿ ಜೋಗ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯೂ ಆದ ಜಿಲ್ಲಾಧಿಕಾರಿ ಪೊನ್ನುರಾಜ್ ಸಂಪೂರ್ಣ ನಿರ್ಲಕ್ಷ್ಯ ತಾಳಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತೀ.ನಾ. ಶ್ರೀನಿವಾಸ್ ಆರೋಪಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 4 ವರ್ಷಗಳಿಂದ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಒಂದು ಸಭೆಯನ್ನು ನಡೆಸಿಲ್ಲ. ಇದರಿಂದ ಜೋಗ್ಫಾಲ್ಸ್ ಪ್ರದೇಶದಲ್ಲಿ ಶುದ್ಧವಾದ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ. ಪ್ರಾಧಿಕಾರದ ವತಿಯಿಂದ ಕಟ್ಟಿರುವ ಕಾಂಪ್ಲೆಕ್ಸ್, ಅಲ್ಲಿರುವ ಶೌಚಾಲಯ, ಚರಂಡಿಗಳಲ್ಲಿ ದುರ್ವಾಸನೆ ಬೀರುತ್ತಿದೆ ಎಂದು ಹೇಳಿದರು.<br /> <br /> ಕೇಂದ್ರ ಸರ್ಕಾರ ಬೃಂದಾವನ ಮಾದರಿಯ ಗಾರ್ಡನ್ ನಿರ್ಮಾಣಕ್ಕೆ ನೀಡಿದ ್ಙ 5 ಕೋಟಿ ಹಣ ಖರ್ಚಾಗಿಲ್ಲ. ್ಙ 1.20 ಕೋಟಿ ವೆಚ್ಚದ ಸಂಗೀತ ಕಾರಂಜಿ ಇನ್ನೂ ಆರಂಭವಾಗಿಲ್ಲ. ಜೋಗ್ಫಾಲ್ಸ್ ವ್ಯಾಪ್ತಿಯಲ್ಲಿ ನಡೆದ ಸುಮಾರು ್ಙ 8 ಕೋಟಿ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>