<p><strong>ಶಿವಮೊಗ್ಗ: </strong>ರೈಲುನಿಲ್ದಾಣದಲ್ಲಿ ಮುಂಗಡ ಕಾಯ್ದಿರಿಸುವಿಕೆಯ ಒತ್ತಡ ತಡೆಯುವುದಕ್ಕಾಗಿ ನಗರದಲ್ಲಿ ನಾಲ್ಕು ಕಡೆಗಳಲ್ಲಿ ಮುಂಗಡ ಬುಕ್ಕಿಂಗ್ ಕೌಂಟರ್ ತೆರೆಯಲಾಗಿದೆ ಎಂದು ನೈರುತ್ಯ ರೈಲ್ವೆ ವಲಯದ ಹಿರಿಯ ವಾಣಿಜ್ಯ ಅಧಿಕಾರಿ ಡಾ.ಅನೂಪ್ ದಯಾನಂದ್ ತಿಳಿಸಿದರು.<br /> <br /> ನಗರದ ರೈಲುನಿಲ್ದಾಣದಲ್ಲಿ ರೈಲು ಪ್ರಯಾಣದ ಕಾದಿರಿಸುವಿಕೆ ಹಾಗೂ ಟೆಕೆಟ್ ಖರೀದಿಸಲು ಬರುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಗುರುವಾರ ಟೋಕನ್ ಮ್ಯಾನೇಜ್ಮೆಂಟ್ ವ್ಯವಸ್ಥೆಗೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> ನಗರದ ಪೊಲೀಸ್ಚೌಕಿ, ಕೋಟೆ ಅಂಚೆ ಕಚೇರಿ, ನಂಜಪ್ಪ ಆಸ್ಪತ್ರೆ ಎದುರು ಹಾಗೂ ಹಳೆ ರೈಲುನಿಲ್ದಾಣದ ಎದುರು ಈ ಮುಂಗಡ ಕಾಯ್ದಿರಿಸುವಿಕೆ ಈಗಾಗಲೇ ಜಾರಿಯಲ್ಲಿದೆ ಎಂದರು.<br /> <br /> ರೈಲುನಿಲ್ದಾಣದಲ್ಲಿ ಟಿಕೆಟ್ ಪಡೆದುಕೊಳ್ಳಲು ಪ್ರಯಾಣಿಕರು ಪ್ರತಿ ಸಲವೂ ಕ್ಯೂನಲ್ಲಿ ನಿಂತು ವೃಥಾ ಕಾಯುವುದನ್ನು ತಪ್ಪಿಸಲು ಈ ಟೋಕನ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದರು.<br /> <br /> ಮೈಸೂರು ವಿಭಾಗದ `ಎ~ ಶ್ರೇಣಿ ರೈಲುನಿಲ್ದಾಣಗಳಾದ ಶಿವಮೊಗ್ಗ, ದಾವಣಗೆರೆ ರೈಲುನಿಲ್ದಾಣಗಳಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ ಎಂದ ಅವರು, ಮುಂದಿನ ದಿನಗಳಲ್ಲಿ `ಬಿ~ ಶ್ರೇಣಿ ರೈಲುನಿಲ್ದಾಣಗಳಲ್ಲಿಯೂ ಈ ವ್ಯವಸ್ಥೆ ಅಳವಡಿಸಲು ಚಿಂತನೆ ಇದೆ ಎಂದರು.<br /> <br /> ಸಮಾರಂಭದಲ್ಲಿ ನೈರುತ್ಯ ರೈಲ್ವೆ ವಲಯ ಮೈಸೂರು ವಿಭಾಗೀಯ ವ್ಯವಸ್ಥಾಪಕ ಡಿ.ಬಿ. ವರ್ಮಾ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ರೈಲುನಿಲ್ದಾಣದಲ್ಲಿ ಮುಂಗಡ ಕಾಯ್ದಿರಿಸುವಿಕೆಯ ಒತ್ತಡ ತಡೆಯುವುದಕ್ಕಾಗಿ ನಗರದಲ್ಲಿ ನಾಲ್ಕು ಕಡೆಗಳಲ್ಲಿ ಮುಂಗಡ ಬುಕ್ಕಿಂಗ್ ಕೌಂಟರ್ ತೆರೆಯಲಾಗಿದೆ ಎಂದು ನೈರುತ್ಯ ರೈಲ್ವೆ ವಲಯದ ಹಿರಿಯ ವಾಣಿಜ್ಯ ಅಧಿಕಾರಿ ಡಾ.ಅನೂಪ್ ದಯಾನಂದ್ ತಿಳಿಸಿದರು.<br /> <br /> ನಗರದ ರೈಲುನಿಲ್ದಾಣದಲ್ಲಿ ರೈಲು ಪ್ರಯಾಣದ ಕಾದಿರಿಸುವಿಕೆ ಹಾಗೂ ಟೆಕೆಟ್ ಖರೀದಿಸಲು ಬರುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಗುರುವಾರ ಟೋಕನ್ ಮ್ಯಾನೇಜ್ಮೆಂಟ್ ವ್ಯವಸ್ಥೆಗೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> ನಗರದ ಪೊಲೀಸ್ಚೌಕಿ, ಕೋಟೆ ಅಂಚೆ ಕಚೇರಿ, ನಂಜಪ್ಪ ಆಸ್ಪತ್ರೆ ಎದುರು ಹಾಗೂ ಹಳೆ ರೈಲುನಿಲ್ದಾಣದ ಎದುರು ಈ ಮುಂಗಡ ಕಾಯ್ದಿರಿಸುವಿಕೆ ಈಗಾಗಲೇ ಜಾರಿಯಲ್ಲಿದೆ ಎಂದರು.<br /> <br /> ರೈಲುನಿಲ್ದಾಣದಲ್ಲಿ ಟಿಕೆಟ್ ಪಡೆದುಕೊಳ್ಳಲು ಪ್ರಯಾಣಿಕರು ಪ್ರತಿ ಸಲವೂ ಕ್ಯೂನಲ್ಲಿ ನಿಂತು ವೃಥಾ ಕಾಯುವುದನ್ನು ತಪ್ಪಿಸಲು ಈ ಟೋಕನ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದರು.<br /> <br /> ಮೈಸೂರು ವಿಭಾಗದ `ಎ~ ಶ್ರೇಣಿ ರೈಲುನಿಲ್ದಾಣಗಳಾದ ಶಿವಮೊಗ್ಗ, ದಾವಣಗೆರೆ ರೈಲುನಿಲ್ದಾಣಗಳಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ ಎಂದ ಅವರು, ಮುಂದಿನ ದಿನಗಳಲ್ಲಿ `ಬಿ~ ಶ್ರೇಣಿ ರೈಲುನಿಲ್ದಾಣಗಳಲ್ಲಿಯೂ ಈ ವ್ಯವಸ್ಥೆ ಅಳವಡಿಸಲು ಚಿಂತನೆ ಇದೆ ಎಂದರು.<br /> <br /> ಸಮಾರಂಭದಲ್ಲಿ ನೈರುತ್ಯ ರೈಲ್ವೆ ವಲಯ ಮೈಸೂರು ವಿಭಾಗೀಯ ವ್ಯವಸ್ಥಾಪಕ ಡಿ.ಬಿ. ವರ್ಮಾ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>