<p><strong>ಸೊರಬ: </strong>ಕನಿಷ್ಠ ವೇತನ, ನೇಮಕಾತಿ ಕಾಯಂಗೊಳಿಸವುದು ಮೊದಲಾದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕಿನ ಗ್ರಾ.ಪಂ. ನೌಕರರ ಒಕ್ಕೂಟದ ವತಿಯಿಂದ ಗುರುವಾರ ಧರಣಿ ಆರಂಭಗೊಂಡಿತು.<br /> <br /> ನೌಕರರಿಗೆ ಭವಿಷ್ಯ ನಿಧಿ ಜಾರಿ ಆಗಿದ್ದರೂ, ಸೌಲಭ್ಯ ನೀಡುತ್ತಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು. ವಿವಿಧ ಗ್ರಾ.ಪಂ.ಗಳಲ್ಲಿ ಜವಾನ, ನೀರುಗಂಟಿ, ಬಿಲ್ ಕಲೆಕ್ಟರ್ ಕರ್ತವ್ಯ ನಿರ್ವಹಿಸುತ್ತಿರುವ ನೌಕರರನ್ನು ಕಾಯಂಗೊಳಿಸಬೇಕು. ಕನಿಷ್ಠ ವೇತನವನ್ನು 6 ಸಾವಿರಕ್ಕೆ ಹೆಚ್ಚಿಸಬೇಕು. ಸೇವಾ ಪುಸ್ತಕ ದಾಖಲಿಸಬೇಕು. <br /> <br /> ಸರ್ಕಾರವೇ ನೇರವಾಗಿ ವೇತನ ನೀಡಬೇಕು. ಕಾರ್ಯದರ್ಶಿ ಗ್ರೇಡ್-2 ಹುದ್ದೆಗೆ ಹಾಲಿ ನೌಕರರನ್ನೇ ನೇಮಿಸಬೇಕು. ನಿವೃತ್ತ ನೌಕರರಿಗೆ 4 ಲಕ್ಷ ಜೀವನ ನಿರ್ವಹಣೆಗೆ ಹಾಗೂ ಮಾಸಿಕ ಅರ್ಧ ವೇತನ ಜಾರಿಗೊಳಿಸಬೇಕು ಮೊದಲಾದ ಬೇಡಿಕೆಗಳನ್ನು ಮಂಡಿಸಿದರು.<br /> <br /> ಅಡೆ-ತಡೆ ಇಲ್ಲದೇ ನಡೆಯುತ್ತಿರುವ ಹೊಸ ನೇಮಕಾತಿಗಳನ್ನು ಸ್ಥಗಿತಗೊಳಿಸಿ, ಹಾಲಿ ನೌಕರರ ಕಾಯಂಗೆ ಕ್ರಮ ಕೈಗೊಳ್ಳಬೇಕು ಎಂದುಆಗ್ರಹಿಸಿದರು.<br /> ಬೇಡಿಕೆ ಕುರಿತು ಸಂಬಂಧಪಟ್ಟ ಸಚಿವರು, ಅಧಿಕಾರಿಗಳಿಗೆ ಪದೇ ಪದೇ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಆರೋಪಿಸಿ, ತಮ್ಮೆಲ್ಲಾ ಬೇಡಿಕೆ ಈಡೇರುವವರೆಗೆ ಧರಣಿ ಹಿಂತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದರು. <br /> <br /> ಜಿ.ಪಂ. ಯೋಜನಾ ನಿರ್ದೇಶಕ ಮುನಿರಾಜಪ್ಪ ಮನವಿ ಸ್ವೀಕರಿಸಿದರು. ಜಿ.ಪಂ. ವ್ಯಾಪ್ತಿಯ ಬೇಡಿಕೆಗಳಿಗೆ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಅವರು, ರಾಜ್ಯ ಮಟ್ಟದ ಬೇಡಿಕೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು. <br /> <br /> ಗೌರವಾಧ್ಯಕ್ಷೆ ಶೇಖರಮ್ಮ, ಜಿಲ್ಲಾ ಸಂಘದ ಶಿವಶಂಕರಪ್ಪ, ಮೇಘರಾಜ, ತಾಲ್ಲೂಕು ಅಧ್ಯಕ್ಷ ಸುಬ್ರಾಯ ಶೆಟ್ಟಿ, ಕಾರ್ಯದರ್ಶಿ ಮಂಜಪ್ಪ, ಹುಚ್ಚರಾಯಪ್ಪ, ತಾಲ್ಲೂಕು ಸಂಚಾಲಕ ನಾಗರಾಜ, ಪದಾಧಿಕಾರಿಗಳು, ನೌಕರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೊರಬ: </strong>ಕನಿಷ್ಠ ವೇತನ, ನೇಮಕಾತಿ ಕಾಯಂಗೊಳಿಸವುದು ಮೊದಲಾದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕಿನ ಗ್ರಾ.ಪಂ. ನೌಕರರ ಒಕ್ಕೂಟದ ವತಿಯಿಂದ ಗುರುವಾರ ಧರಣಿ ಆರಂಭಗೊಂಡಿತು.<br /> <br /> ನೌಕರರಿಗೆ ಭವಿಷ್ಯ ನಿಧಿ ಜಾರಿ ಆಗಿದ್ದರೂ, ಸೌಲಭ್ಯ ನೀಡುತ್ತಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು. ವಿವಿಧ ಗ್ರಾ.ಪಂ.ಗಳಲ್ಲಿ ಜವಾನ, ನೀರುಗಂಟಿ, ಬಿಲ್ ಕಲೆಕ್ಟರ್ ಕರ್ತವ್ಯ ನಿರ್ವಹಿಸುತ್ತಿರುವ ನೌಕರರನ್ನು ಕಾಯಂಗೊಳಿಸಬೇಕು. ಕನಿಷ್ಠ ವೇತನವನ್ನು 6 ಸಾವಿರಕ್ಕೆ ಹೆಚ್ಚಿಸಬೇಕು. ಸೇವಾ ಪುಸ್ತಕ ದಾಖಲಿಸಬೇಕು. <br /> <br /> ಸರ್ಕಾರವೇ ನೇರವಾಗಿ ವೇತನ ನೀಡಬೇಕು. ಕಾರ್ಯದರ್ಶಿ ಗ್ರೇಡ್-2 ಹುದ್ದೆಗೆ ಹಾಲಿ ನೌಕರರನ್ನೇ ನೇಮಿಸಬೇಕು. ನಿವೃತ್ತ ನೌಕರರಿಗೆ 4 ಲಕ್ಷ ಜೀವನ ನಿರ್ವಹಣೆಗೆ ಹಾಗೂ ಮಾಸಿಕ ಅರ್ಧ ವೇತನ ಜಾರಿಗೊಳಿಸಬೇಕು ಮೊದಲಾದ ಬೇಡಿಕೆಗಳನ್ನು ಮಂಡಿಸಿದರು.<br /> <br /> ಅಡೆ-ತಡೆ ಇಲ್ಲದೇ ನಡೆಯುತ್ತಿರುವ ಹೊಸ ನೇಮಕಾತಿಗಳನ್ನು ಸ್ಥಗಿತಗೊಳಿಸಿ, ಹಾಲಿ ನೌಕರರ ಕಾಯಂಗೆ ಕ್ರಮ ಕೈಗೊಳ್ಳಬೇಕು ಎಂದುಆಗ್ರಹಿಸಿದರು.<br /> ಬೇಡಿಕೆ ಕುರಿತು ಸಂಬಂಧಪಟ್ಟ ಸಚಿವರು, ಅಧಿಕಾರಿಗಳಿಗೆ ಪದೇ ಪದೇ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಆರೋಪಿಸಿ, ತಮ್ಮೆಲ್ಲಾ ಬೇಡಿಕೆ ಈಡೇರುವವರೆಗೆ ಧರಣಿ ಹಿಂತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದರು. <br /> <br /> ಜಿ.ಪಂ. ಯೋಜನಾ ನಿರ್ದೇಶಕ ಮುನಿರಾಜಪ್ಪ ಮನವಿ ಸ್ವೀಕರಿಸಿದರು. ಜಿ.ಪಂ. ವ್ಯಾಪ್ತಿಯ ಬೇಡಿಕೆಗಳಿಗೆ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಅವರು, ರಾಜ್ಯ ಮಟ್ಟದ ಬೇಡಿಕೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು. <br /> <br /> ಗೌರವಾಧ್ಯಕ್ಷೆ ಶೇಖರಮ್ಮ, ಜಿಲ್ಲಾ ಸಂಘದ ಶಿವಶಂಕರಪ್ಪ, ಮೇಘರಾಜ, ತಾಲ್ಲೂಕು ಅಧ್ಯಕ್ಷ ಸುಬ್ರಾಯ ಶೆಟ್ಟಿ, ಕಾರ್ಯದರ್ಶಿ ಮಂಜಪ್ಪ, ಹುಚ್ಚರಾಯಪ್ಪ, ತಾಲ್ಲೂಕು ಸಂಚಾಲಕ ನಾಗರಾಜ, ಪದಾಧಿಕಾರಿಗಳು, ನೌಕರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>