ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಶೂನ್ಯ. ಜಿಲ್ಲೆಯಲ್ಲೂ ಅಭಿವೃದ್ಧಿ ಕುಂಠಿತಗೊಂಡಿದೆ. ಸೊರಬ ಕ್ಷೇತ್ರದ ಅಭಿವೃದ್ಧಿಗೆ ಸಾವಿರಾರು ಕೋಟಿ ಅನುದಾನ ತಂದಿರುವುದಾಗಿ ಶಾಸಕರು ಹೇಳಿಕೆ ನೀಡುತ್ತಾರೆ. ಆದರೆ, ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ರಸ್ತೆಗಳು ಸಂಪೂರ್ಣ ಹಾಳಾಗಿವೆ. ನೀರಾವರಿ ಯೋಜನೆಗಳು ನನೆಗುದಿಗೆ ಬಿದ್ದಿವೆ. ಹಾಗಾದರೆ ಬಿಡುಗಡೆಯಾದ ಅನುದಾನ ಎಲ್ಲಿಗೆ ಹೋಗಿದೆ ಎಂದು ಪ್ರಶ್ನಿಸಿದರು.