<p><strong>ಶಿವಮೊಗ್ಗ:</strong> ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಶೋಧನೆಗೆ ಹೆಚ್ಚಿನ ಒತ್ತು ಹಾಗೂ ಬೋಧನೆಯಲ್ಲಿ ಕ್ರಿಯಾಶೀಲತೆ ಹೆಚ್ಚುಗೊಳಿಸಬೇಕಾದ ಅನಿವಾರ್ಯತೆ ಇದೆ ಎಂದು ಬೆಂಗಳೂರು ವಿವಿಯ ವಿಶ್ರಾಂತ ಕುಲಪತಿ ಪ್ರೊ.ಆರ್.ಎನ್. ಶೆಟ್ಟಿ ತಿಳಿಸಿದರು.<br /> <br /> ಶಂಕರಘಟ್ಟದ ಕುವೆಂಪು ವಿವಿಯ ಪ್ರೊ.ಎಸ್.ಪಿ. ಹಿರೇಮಠ್ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಗಳ ಸಿಂಡಿಕೇಟ್ ಸದಸ್ಯರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ತಂತ್ರಜ್ಞಾನ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಭಾರತ ಮುಂಚೂಣಿಯಲ್ಲಿದ್ದು, ಅಮೆರಿಕ, ಚೀನಾದ ನಂತರದ ಸ್ಥಾನ ಭಾರತದ್ದಾಗಿದೆ. ಈ ಸಂದರ್ಭದಲ್ಲಿ ಭಾರತದಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಅವರು ಹೇಳಿದರು.<br /> <br /> ಭಾರತದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ದೊರೆಯುತ್ತಿದೆಯಾದರೂ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ಆವಶ್ಯವಿರುವ ಈ ಸಂದರ್ಭದಲ್ಲಿ ಸಿಂಡಿಕೇಟ್ ಸದಸ್ಯರ ಸಮಾವೇಶ ಆಯೋಜಿಸಿರುವುದು ಸೂಕ್ತವಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.<br /> <br /> ಉನ್ನತ ಶಿಕ್ಷಣ ಪೂರೈಸಿದವರಿಗೆ ಇಲ್ಲಿಯೇ ಸೂಕ್ತ ಹುದ್ದೆ ಸ್ಥಾನಮಾನ ದೊರೆಯುವಂತಾಗಬೇಕು. ಇದರಿಂದ ಭಾರತದ ಬುದ್ಧಿವಂತಿಕೆ ವಿದೇಶಿಯರ ಪಾಲಾಗುವುದನ್ನು ತಪ್ಪಿಸಬಹುದು ಹಾಗೂ ಉನ್ನತ ಶಿಕ್ಷಣ ಪೂರೈಸಿದವರು ಸಹ ತಾಯ್ನಾಡಲ್ಲೆ ಸೇವೆ ಸಲ್ಲಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.<br /> <br /> ಇಂದು ನಮ್ಮ ದೇಶದಲ್ಲಿ ಉನ್ನತ ಶಿಕ್ಷಣಕ್ಕೆ ಸೂಕ್ತ ಹಣಕಾಸು ಸಹಾಯವೂ ದೊರೆಯುತ್ತಿದೆ. ಅದಕ್ಕೆ ತಕ್ಕಂತೆ ಉದ್ಯೋಗಾವಕಾಶಗಳೂ ಸೃಷ್ಟಿಯಾಗಿವೆ. ಸೂಕ್ತ ವ್ಯಕ್ತಿತ್ವ ಹಾಗೂ ಬುದ್ಧಿವಂತಿಕೆಗೆ ಸಮಯೋಚಿತ ಮನ್ನಣೆಯೂ ದೊರೆಯುತ್ತಿದೆ ಎಂದರು.<br /> <br /> ಸಿಂಡಿಕೇಟ್ ಸದಸ್ಯರು ಹಾಗೂ ವಿಶ್ವವಿದ್ಯಾಲಯಗಳು ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿನ ಬದಲಾವಣೆಗೆ ಶಿಫಾರಸ್ಸು ಮಾಡಬಹುದು. ಆದರೆ, ಅದನ್ನು ಜಾರಿಗೆ ತರುವ ಅಧಿಕಾರವಿಲ್ಲ. ಈ ಹಿನ್ನೆಲೆಯಲ್ಲಿ ಸೂಕ್ತ ಬದಲಾವಣೆ ಕುರಿತು ಚರ್ಚೆ ನಡೆಸಿ ಸರ್ಕಾರಕ್ಕೆ ಶಿಫಾರಸುಮಾಡಬೇಕು ಎಂದು ಅಭಿಪ್ರಾಯಪಟ್ಟರು.<br /> <br /> ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುವೆಂಪು ವಿವಿ ಕುಲಪತಿ ಪ್ರೊ.ಎಸ್.ಎ. ಬಾರಿ ಮಾತನಾಡಿ, ವಿಶ್ವವಿದ್ಯಾನಿಲಯಗಳ ಸಿಂಡಿಕೇಟ್ ಸಮಿತಿಯು ಗುಣಮಟ್ಟದ ನಿರ್ವಾಹಕನಂತೆ ಕಾರ್ಯ ನಿರ್ವಹಿಸಬೇಕಿದೆ ಎಂದರು.<br /> <br /> ಎರಡು ದಿನಗಳ ಈ ಸಮ್ಮೇಳನದಲ್ಲಿ ಉನ್ನತ ಶಿಕ್ಷಣದ ವಿವಿಧ ಮಜಲುಗಳ ಚಿಂತನ-ಮಂತನ ನಡೆಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆಯೂ ಅವರು ನೆರೆದಿದ್ದ ವಿವಿಧ ವಿವಿಗಳ ಸಿಂಡಿಕೇಟ್ ಸದಸ್ಯರಲ್ಲಿ ಮನವಿ ಮಾಡಿದರು.<br /> ಕಾರ್ಯಕ್ರಮದಲ್ಲಿ ಕುವೆಂಪು ವಿವಿ ಕುಲಸಚಿವ ಪ್ರೊ.ಟಿ.ಆರ್. ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಶೋಧನೆಗೆ ಹೆಚ್ಚಿನ ಒತ್ತು ಹಾಗೂ ಬೋಧನೆಯಲ್ಲಿ ಕ್ರಿಯಾಶೀಲತೆ ಹೆಚ್ಚುಗೊಳಿಸಬೇಕಾದ ಅನಿವಾರ್ಯತೆ ಇದೆ ಎಂದು ಬೆಂಗಳೂರು ವಿವಿಯ ವಿಶ್ರಾಂತ ಕುಲಪತಿ ಪ್ರೊ.ಆರ್.ಎನ್. ಶೆಟ್ಟಿ ತಿಳಿಸಿದರು.<br /> <br /> ಶಂಕರಘಟ್ಟದ ಕುವೆಂಪು ವಿವಿಯ ಪ್ರೊ.ಎಸ್.ಪಿ. ಹಿರೇಮಠ್ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಗಳ ಸಿಂಡಿಕೇಟ್ ಸದಸ್ಯರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ತಂತ್ರಜ್ಞಾನ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಭಾರತ ಮುಂಚೂಣಿಯಲ್ಲಿದ್ದು, ಅಮೆರಿಕ, ಚೀನಾದ ನಂತರದ ಸ್ಥಾನ ಭಾರತದ್ದಾಗಿದೆ. ಈ ಸಂದರ್ಭದಲ್ಲಿ ಭಾರತದಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಅವರು ಹೇಳಿದರು.<br /> <br /> ಭಾರತದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ದೊರೆಯುತ್ತಿದೆಯಾದರೂ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ಆವಶ್ಯವಿರುವ ಈ ಸಂದರ್ಭದಲ್ಲಿ ಸಿಂಡಿಕೇಟ್ ಸದಸ್ಯರ ಸಮಾವೇಶ ಆಯೋಜಿಸಿರುವುದು ಸೂಕ್ತವಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.<br /> <br /> ಉನ್ನತ ಶಿಕ್ಷಣ ಪೂರೈಸಿದವರಿಗೆ ಇಲ್ಲಿಯೇ ಸೂಕ್ತ ಹುದ್ದೆ ಸ್ಥಾನಮಾನ ದೊರೆಯುವಂತಾಗಬೇಕು. ಇದರಿಂದ ಭಾರತದ ಬುದ್ಧಿವಂತಿಕೆ ವಿದೇಶಿಯರ ಪಾಲಾಗುವುದನ್ನು ತಪ್ಪಿಸಬಹುದು ಹಾಗೂ ಉನ್ನತ ಶಿಕ್ಷಣ ಪೂರೈಸಿದವರು ಸಹ ತಾಯ್ನಾಡಲ್ಲೆ ಸೇವೆ ಸಲ್ಲಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.<br /> <br /> ಇಂದು ನಮ್ಮ ದೇಶದಲ್ಲಿ ಉನ್ನತ ಶಿಕ್ಷಣಕ್ಕೆ ಸೂಕ್ತ ಹಣಕಾಸು ಸಹಾಯವೂ ದೊರೆಯುತ್ತಿದೆ. ಅದಕ್ಕೆ ತಕ್ಕಂತೆ ಉದ್ಯೋಗಾವಕಾಶಗಳೂ ಸೃಷ್ಟಿಯಾಗಿವೆ. ಸೂಕ್ತ ವ್ಯಕ್ತಿತ್ವ ಹಾಗೂ ಬುದ್ಧಿವಂತಿಕೆಗೆ ಸಮಯೋಚಿತ ಮನ್ನಣೆಯೂ ದೊರೆಯುತ್ತಿದೆ ಎಂದರು.<br /> <br /> ಸಿಂಡಿಕೇಟ್ ಸದಸ್ಯರು ಹಾಗೂ ವಿಶ್ವವಿದ್ಯಾಲಯಗಳು ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿನ ಬದಲಾವಣೆಗೆ ಶಿಫಾರಸ್ಸು ಮಾಡಬಹುದು. ಆದರೆ, ಅದನ್ನು ಜಾರಿಗೆ ತರುವ ಅಧಿಕಾರವಿಲ್ಲ. ಈ ಹಿನ್ನೆಲೆಯಲ್ಲಿ ಸೂಕ್ತ ಬದಲಾವಣೆ ಕುರಿತು ಚರ್ಚೆ ನಡೆಸಿ ಸರ್ಕಾರಕ್ಕೆ ಶಿಫಾರಸುಮಾಡಬೇಕು ಎಂದು ಅಭಿಪ್ರಾಯಪಟ್ಟರು.<br /> <br /> ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುವೆಂಪು ವಿವಿ ಕುಲಪತಿ ಪ್ರೊ.ಎಸ್.ಎ. ಬಾರಿ ಮಾತನಾಡಿ, ವಿಶ್ವವಿದ್ಯಾನಿಲಯಗಳ ಸಿಂಡಿಕೇಟ್ ಸಮಿತಿಯು ಗುಣಮಟ್ಟದ ನಿರ್ವಾಹಕನಂತೆ ಕಾರ್ಯ ನಿರ್ವಹಿಸಬೇಕಿದೆ ಎಂದರು.<br /> <br /> ಎರಡು ದಿನಗಳ ಈ ಸಮ್ಮೇಳನದಲ್ಲಿ ಉನ್ನತ ಶಿಕ್ಷಣದ ವಿವಿಧ ಮಜಲುಗಳ ಚಿಂತನ-ಮಂತನ ನಡೆಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆಯೂ ಅವರು ನೆರೆದಿದ್ದ ವಿವಿಧ ವಿವಿಗಳ ಸಿಂಡಿಕೇಟ್ ಸದಸ್ಯರಲ್ಲಿ ಮನವಿ ಮಾಡಿದರು.<br /> ಕಾರ್ಯಕ್ರಮದಲ್ಲಿ ಕುವೆಂಪು ವಿವಿ ಕುಲಸಚಿವ ಪ್ರೊ.ಟಿ.ಆರ್. ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>