<p><strong>ಭದ್ರಾವತಿ:</strong> ‘ಕೈಗಾರಿಕಾ ನಗರದ ಇಂದಿನ ದುಸ್ಥಿತಿಗೆ ಮೂರು ಪಕ್ಷಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳು ಕಾರಣ’ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಹ ಸಂಚಾಲಕ ಶಿವಕುಮಾರ್ ದೂರಿದರು.</p>.<p>ನಗರದ ಸುನಂದ ಸಭಾಂಗಣದಲ್ಲಿ ಈಚೆಗೆ ಜರುಗಿದ ಪಕ್ಷದ ಕಾರ್ಯಕರ್ತರ ಸಭೆ, ಕ್ಷೇತ್ರದ ಅಭ್ಯರ್ಥಿ ಘೋಷಣೆಯಲ್ಲಿ ಮಾತನಾಡಿದರು.</p>.<p>ಇಲ್ಲಿಂದ ಆಯ್ಕೆಯಾದ ಪಕ್ಷದ ಅಭ್ಯರ್ಥಿಗಳು ಹಾಗೂ ವ್ಯಕ್ತಿಗಳು ಕಾರ್ಖಾನೆಗಳ ಉಳಿವಿಗೆ ಬೇಕಾದ ಇಚ್ಛಾಶಕ್ತಿ ಪ್ರಕಟ ಮಾಡದ ಕಾರಣ ಇತಿಹಾಸದ ಎಂಪಿಎಂ., ವಿಐಎಸ್ಎಲ್ ಕಾರ್ಖಾನೆಗಳು ಅವನತಿಯ ಹಾದಿ ಹಿಡಿದವು ಎಂದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ಪಕ್ಷದ ರಾಜ್ಯ ಸಹಕಾರ್ಯದರ್ಶಿ ವಿಜಯಶರ್ಮ ಮಾತನಾಡಿ, ‘ಪಕ್ಷದ ಕಾರ್ಯಕರ್ತರು ಕ್ಷೇತ್ರದ ಸಮಸ್ಯೆ ನಿಭಾಯಿಸುವ ನಿಟ್ಟಿನಲ್ಲಿ ಪಕ್ಷ ರೂಪಿಸಿರುವ ಯೋಜನೆಗಳ ವಿಚಾರವನ್ನು ಮನೆಗಳಿಗೆ ತಲುಪಿಸುವ ಕೆಲಸ ಮಾಡಲಿದೆ’ ಎಂದು ಹೇಳಿದರು.</p>.<p>ಪಕ್ಷದ ನಿಯೋಜಿತ ಅಭ್ಯರ್ಥಿಯಾಗಿ ಎಚ್. ರವಿಕುಮಾರ್ ಅವರನ್ನು ರಾಜ್ಯ ಹಾಗೂ ಕೇಂದ್ರ ನಾಯಕತ್ವಕ್ಕೆ ಶಿಫಾರಸು ಮಾಡಲಾಗುವುದು ಎಂದು ಮುಖಂಡರು ಘೋಷಿಸಿದರು.</p>.<p>ಪರಮೇಶ್ವರಾಚಾರ್, ಡಿ.ಎಂ. ಚಂದ್ರಪ್ಪ, ಮುನೀರ್ ಅಹಮದ್, ಜ್ಞಾನಸಾಗರ್, ರಾಬಿನ್, ಜೋಸೆಫ್, ಮುಳ್ಕೆರೆ ಲೋಕೇಶ್, ಪ್ರದೀಪಕುಮಾರ್, ರಾಜು, ರಾಜೇಂದ್ರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ:</strong> ‘ಕೈಗಾರಿಕಾ ನಗರದ ಇಂದಿನ ದುಸ್ಥಿತಿಗೆ ಮೂರು ಪಕ್ಷಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳು ಕಾರಣ’ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಹ ಸಂಚಾಲಕ ಶಿವಕುಮಾರ್ ದೂರಿದರು.</p>.<p>ನಗರದ ಸುನಂದ ಸಭಾಂಗಣದಲ್ಲಿ ಈಚೆಗೆ ಜರುಗಿದ ಪಕ್ಷದ ಕಾರ್ಯಕರ್ತರ ಸಭೆ, ಕ್ಷೇತ್ರದ ಅಭ್ಯರ್ಥಿ ಘೋಷಣೆಯಲ್ಲಿ ಮಾತನಾಡಿದರು.</p>.<p>ಇಲ್ಲಿಂದ ಆಯ್ಕೆಯಾದ ಪಕ್ಷದ ಅಭ್ಯರ್ಥಿಗಳು ಹಾಗೂ ವ್ಯಕ್ತಿಗಳು ಕಾರ್ಖಾನೆಗಳ ಉಳಿವಿಗೆ ಬೇಕಾದ ಇಚ್ಛಾಶಕ್ತಿ ಪ್ರಕಟ ಮಾಡದ ಕಾರಣ ಇತಿಹಾಸದ ಎಂಪಿಎಂ., ವಿಐಎಸ್ಎಲ್ ಕಾರ್ಖಾನೆಗಳು ಅವನತಿಯ ಹಾದಿ ಹಿಡಿದವು ಎಂದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ಪಕ್ಷದ ರಾಜ್ಯ ಸಹಕಾರ್ಯದರ್ಶಿ ವಿಜಯಶರ್ಮ ಮಾತನಾಡಿ, ‘ಪಕ್ಷದ ಕಾರ್ಯಕರ್ತರು ಕ್ಷೇತ್ರದ ಸಮಸ್ಯೆ ನಿಭಾಯಿಸುವ ನಿಟ್ಟಿನಲ್ಲಿ ಪಕ್ಷ ರೂಪಿಸಿರುವ ಯೋಜನೆಗಳ ವಿಚಾರವನ್ನು ಮನೆಗಳಿಗೆ ತಲುಪಿಸುವ ಕೆಲಸ ಮಾಡಲಿದೆ’ ಎಂದು ಹೇಳಿದರು.</p>.<p>ಪಕ್ಷದ ನಿಯೋಜಿತ ಅಭ್ಯರ್ಥಿಯಾಗಿ ಎಚ್. ರವಿಕುಮಾರ್ ಅವರನ್ನು ರಾಜ್ಯ ಹಾಗೂ ಕೇಂದ್ರ ನಾಯಕತ್ವಕ್ಕೆ ಶಿಫಾರಸು ಮಾಡಲಾಗುವುದು ಎಂದು ಮುಖಂಡರು ಘೋಷಿಸಿದರು.</p>.<p>ಪರಮೇಶ್ವರಾಚಾರ್, ಡಿ.ಎಂ. ಚಂದ್ರಪ್ಪ, ಮುನೀರ್ ಅಹಮದ್, ಜ್ಞಾನಸಾಗರ್, ರಾಬಿನ್, ಜೋಸೆಫ್, ಮುಳ್ಕೆರೆ ಲೋಕೇಶ್, ಪ್ರದೀಪಕುಮಾರ್, ರಾಜು, ರಾಜೇಂದ್ರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>