<div> <strong>ಶಿವಮೊಗ್ಗ: </strong>ಎರಡು ವರ್ಷಗಳ ಹಿಂದೆ ಪತ್ತೆಯಾದ ತಾಳಗುಂದ ಶಾಸನ ಕನ್ನಡದ ಅತ್ಯಂತ ಪ್ರಾಚೀನ ಶಾಸನ ಎಂದು ಭಾರತೀಯ ಪುರಾತತ್ವ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ. <div> </div><div> ಹಾಸನ ಜಿಲ್ಲೆಯ ಹಲ್ಮಿಡಿ ಶಾಸನವೇ ಇದುವರೆಗೆ ಕನ್ನಡದ ಪ್ರಾಚೀನ ಶಾಸನ ಎಂದು ಇತಿಹಾಸದಲ್ಲಿ ದಾಖಲಾಗಿತ್ತು. ಹಲವು ವರ್ಷಗಳ ಹಿಂದೆ ತಾಳಗುಂದ</div><div> ದಲ್ಲೇ ಪತ್ತೆಯಾಗಿದ್ದ ಶಾಂತಿವರ್ಮನ ಕಾಲದ (ಕ್ರಿ.ಶ. 450) ಇನ್ನೊಂದು ಸ್ತಂಭ ಶಾಸನಕ್ಕಿಂತಲೂ ಈ ಶಾಸನ ಹಳೆಯದು ಎಂದು ಖಚಿತವಾಗಿದೆ.</div><div> </div><div> ಪತ್ತೆಯಾದ ಶಾಸನದ ಕಾಲ ಕುರಿತು ಸಾಕಷ್ಟು ಚರ್ಚೆ ನಡೆದಿದ್ದವು. ತಾಳಗುಂದದಲ್ಲಿ ದೊರೆತ ಶಾಸನದ ಕಾಲ ಕ್ರಿ.ಶ. 370 ರಿಂದ 450ರ ಮಧ್ಯದ ಅವಧಿ ಎಂದು ಕೇಂದ್ರ ಪುರಾತತ್ವ ಇಲಾಖೆ 15 ದಿನಗಳ ಹಿಂದೆ ದೃಢಪಡಿಸಿದೆ.</div><div> </div><div> ಶಿಕಾರಿಪುರ ತಾಲ್ಲೂಕು ತಾಳಗುಂದದ ಪ್ರಣವಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪುರಾತತ್ವ ಇಲಾಖೆ 2013–14ರಲ್ಲಿ ನಡೆಸಿದ ಉತ್ಖನನದಲ್ಲಿ ಹಲ್ಮಿಡಿಗಿಂತಲೂ ಹಿಂದಿನ ಕನ್ನಡದ ಶಾಸನ ಪತ್ತೆಯಾಗಿತ್ತು. </div><div> </div><div> ಕ್ರಿ.ಶ. 345ರಲ್ಲಿ ಮಯೂರ ವರ್ಮ ಕದಂಬ ಸಾಮ್ರಾಜ್ಯ ಸ್ಥಾಪಿಸಿದ್ದ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪದ ಬನವಾಸಿ ಕದಂಬರ ರಾಜಧಾನಿ. ಮಯೂರ ವರ್ಮ 365ರಲ್ಲಿ ಮೃತಪಟ್ಟ ನಂತರ ಕಂಗವರ್ಮ, ಭಗೀರಥ ವರ್ಮ, ರಘುಪತಿ ವರ್ಮ (365–425) ಆಳ್ವಿಕೆ ನಡೆಸಿದ್ದರು.</div><div> </div><div> 425–455ರವರೆಗೆ ಕಾಕುತ್ಸ ವರ್ಮ ಅಧಿಕಾರ ನಡೆಸಿದ್ದರು. 450ರಲ್ಲಿ ಹಲ್ಮಿಡಿ ಶಾಸನ ಹೊರಡಿಸಿದ್ದು ಇದೇ ಕಾಕುತ್ಸವರ್ಮ. ತಾಳಗುಂದ ಶಾಸನ ಕಾಕುತ್ಸವರ್ಮನಿಗಿಂತ ಮೊದಲೇ ಹೊರಡಿಸಲಾಗಿತ್ತು ಎಂದು ಖಚಿತವಾಗಿದೆ. </div><div> </div><div> ದೇವಾಲಯದ ಉತ್ತರ ಭಾಗದಲ್ಲಿ ಪತ್ತೆಯಾಗಿದ್ದ ಈ ಶಾಸನ ವಜಿನಾಗ ಎಂಬ ಅಂಬಿಗನಿಗೆ ಕದಂಬ ದೊರೆ, ಭೂಮಿಯನ್ನು ಇನಾಮು ಆಗಿ ನೀಡಿದ ಮಾಹಿತಿ ಒಳಗೊಂಡಿದೆ. ತುಂಡರಿಸಿರುವ ಏಳು ಸಾಲುಗಳಲ್ಲಿ ಕನ್ನಡ ಪದಗಳ ಬಳಕೆ ಮಾಡಲಾಗಿದೆ. ಹಾಗಾಗಿ, ಶಾಸನಶಾಸ್ತ್ರದಲ್ಲಿ ಕನ್ನಡ ಶಾಸನ ಎಂದೇ ನಮೂದಿಸಲಾಗಿದೆ.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div> <strong>ಶಿವಮೊಗ್ಗ: </strong>ಎರಡು ವರ್ಷಗಳ ಹಿಂದೆ ಪತ್ತೆಯಾದ ತಾಳಗುಂದ ಶಾಸನ ಕನ್ನಡದ ಅತ್ಯಂತ ಪ್ರಾಚೀನ ಶಾಸನ ಎಂದು ಭಾರತೀಯ ಪುರಾತತ್ವ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ. <div> </div><div> ಹಾಸನ ಜಿಲ್ಲೆಯ ಹಲ್ಮಿಡಿ ಶಾಸನವೇ ಇದುವರೆಗೆ ಕನ್ನಡದ ಪ್ರಾಚೀನ ಶಾಸನ ಎಂದು ಇತಿಹಾಸದಲ್ಲಿ ದಾಖಲಾಗಿತ್ತು. ಹಲವು ವರ್ಷಗಳ ಹಿಂದೆ ತಾಳಗುಂದ</div><div> ದಲ್ಲೇ ಪತ್ತೆಯಾಗಿದ್ದ ಶಾಂತಿವರ್ಮನ ಕಾಲದ (ಕ್ರಿ.ಶ. 450) ಇನ್ನೊಂದು ಸ್ತಂಭ ಶಾಸನಕ್ಕಿಂತಲೂ ಈ ಶಾಸನ ಹಳೆಯದು ಎಂದು ಖಚಿತವಾಗಿದೆ.</div><div> </div><div> ಪತ್ತೆಯಾದ ಶಾಸನದ ಕಾಲ ಕುರಿತು ಸಾಕಷ್ಟು ಚರ್ಚೆ ನಡೆದಿದ್ದವು. ತಾಳಗುಂದದಲ್ಲಿ ದೊರೆತ ಶಾಸನದ ಕಾಲ ಕ್ರಿ.ಶ. 370 ರಿಂದ 450ರ ಮಧ್ಯದ ಅವಧಿ ಎಂದು ಕೇಂದ್ರ ಪುರಾತತ್ವ ಇಲಾಖೆ 15 ದಿನಗಳ ಹಿಂದೆ ದೃಢಪಡಿಸಿದೆ.</div><div> </div><div> ಶಿಕಾರಿಪುರ ತಾಲ್ಲೂಕು ತಾಳಗುಂದದ ಪ್ರಣವಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪುರಾತತ್ವ ಇಲಾಖೆ 2013–14ರಲ್ಲಿ ನಡೆಸಿದ ಉತ್ಖನನದಲ್ಲಿ ಹಲ್ಮಿಡಿಗಿಂತಲೂ ಹಿಂದಿನ ಕನ್ನಡದ ಶಾಸನ ಪತ್ತೆಯಾಗಿತ್ತು. </div><div> </div><div> ಕ್ರಿ.ಶ. 345ರಲ್ಲಿ ಮಯೂರ ವರ್ಮ ಕದಂಬ ಸಾಮ್ರಾಜ್ಯ ಸ್ಥಾಪಿಸಿದ್ದ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪದ ಬನವಾಸಿ ಕದಂಬರ ರಾಜಧಾನಿ. ಮಯೂರ ವರ್ಮ 365ರಲ್ಲಿ ಮೃತಪಟ್ಟ ನಂತರ ಕಂಗವರ್ಮ, ಭಗೀರಥ ವರ್ಮ, ರಘುಪತಿ ವರ್ಮ (365–425) ಆಳ್ವಿಕೆ ನಡೆಸಿದ್ದರು.</div><div> </div><div> 425–455ರವರೆಗೆ ಕಾಕುತ್ಸ ವರ್ಮ ಅಧಿಕಾರ ನಡೆಸಿದ್ದರು. 450ರಲ್ಲಿ ಹಲ್ಮಿಡಿ ಶಾಸನ ಹೊರಡಿಸಿದ್ದು ಇದೇ ಕಾಕುತ್ಸವರ್ಮ. ತಾಳಗುಂದ ಶಾಸನ ಕಾಕುತ್ಸವರ್ಮನಿಗಿಂತ ಮೊದಲೇ ಹೊರಡಿಸಲಾಗಿತ್ತು ಎಂದು ಖಚಿತವಾಗಿದೆ. </div><div> </div><div> ದೇವಾಲಯದ ಉತ್ತರ ಭಾಗದಲ್ಲಿ ಪತ್ತೆಯಾಗಿದ್ದ ಈ ಶಾಸನ ವಜಿನಾಗ ಎಂಬ ಅಂಬಿಗನಿಗೆ ಕದಂಬ ದೊರೆ, ಭೂಮಿಯನ್ನು ಇನಾಮು ಆಗಿ ನೀಡಿದ ಮಾಹಿತಿ ಒಳಗೊಂಡಿದೆ. ತುಂಡರಿಸಿರುವ ಏಳು ಸಾಲುಗಳಲ್ಲಿ ಕನ್ನಡ ಪದಗಳ ಬಳಕೆ ಮಾಡಲಾಗಿದೆ. ಹಾಗಾಗಿ, ಶಾಸನಶಾಸ್ತ್ರದಲ್ಲಿ ಕನ್ನಡ ಶಾಸನ ಎಂದೇ ನಮೂದಿಸಲಾಗಿದೆ.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>