<p>ಸಾಗರ: ಪ್ರೇಕ್ಷಕರನ್ನು ರಂಜಿಸಲು ತಮ್ಮಲ್ಲಿರುವ ಅಭಿನಯ ಸಾಮರ್ಥ್ಯವನ್ನು ಸಂಪೂರ್ಣವಾಗಿ ಧಾರೆ ಎರೆಯುವ ಯಕ್ಷಗಾನ ಕಲಾವಿದರ ಬದುಕು ವೃದ್ಧಾಪ್ಯದಲ್ಲಿ ಅತ್ಯಂತ ಸಂಕಷ್ಟದಿಂದ ಕೂಡಿರುತ್ತದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.<br /> <br /> ಇಲ್ಲಿನ ಪ್ರಜ್ಞಾಮಿತ್ರ ಮಂಡಳಿ ಏರ್ಪಡಿಸಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರನ್ನು ಈಚೆಗೆ ಸನ್ಮಾನಿಸಿ ಅವರು ಮಾತನಾಡಿದರು.<br /> <br /> ಸರ್ಕಾರ ಯಕ್ಷಗಾನ ಕಲಾವಿದರು ಜೀವನ ಸಂಧ್ಯದಲ್ಲಿರುವ ಸಂದರ್ಭದಲ್ಲಿ ಅವರ ಜೀವನ ನಿರ್ವಹಣೆಗೆ ಮಾಸಾಶನ ನೀಡುವ ಬಗ್ಗೆ ಗಮನಹರಿಸಬೇಕಿದೆ. ಈ ಬಗ್ಗೆ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.<br /> <br /> ಚಿಟ್ಟಾಣಿ ರಾಮಚಂದ್ರ ಹೆಗಡೆ ಸೇರಿದಂತೆ ಯಕ್ಷರಂಗದ ಅನೇಕ ಕಲಾವಿದರು ಕಲೆಯನ್ನು ದೇಶ-ವಿದೇಶಗಳಲ್ಲಿ ಪ್ರಖ್ಯಾತಿಗೆ ತರಲು ಸಾಕಷ್ಟು ಶ್ರಮಿಸಿದ್ದಾರೆ ಎಂದರು.<br /> <br /> ಸನ್ಮಾನಿತ ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಮಾತನಾಡಿ, ಪ್ರಶಸ್ತಿ ಸನ್ಮಾನಗಳಿಗಿಂತ ಅಭಿಮಾನಿಗಳ ಹೃದಯದಲ್ಲಿ ನೆಲೆಸುವುದು ಪ್ರತಿಯೊಬ್ಬ ಕಲಾವಿದನ ಇಚ್ಛೆಯಾಗಿರುತ್ತದೆ. ಅಭಿಮಾನಿಗಳಿಲ್ಲದ ಕಲಾವಿದನ ಬದುಕು ಶೂನ್ಯ. ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರಿಗೆ ಬಂದದ್ದಲ್ಲ. ಯಕ್ಷಗಾನ ಲೋಕಕ್ಕೆ ಸಂದ ಗೌರವವಾಗಿದೆ ಎಂದರು.<br /> <br /> ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷ ರಾಧಾಕೃಷ್ಣ ನಾಯಕ್ ಬೇಂಗ್ರೆ, ಅನಂತ ಹೆಗಡೆ ಗಂಗೆಮನೆ, ಅಬಸೆ ಎನ್.ದಿನೇಶ್ಕುಮಾರ್ ಜೋಷಿ ಹಾಜರಿದ್ದರು. ಗಣಪತಿ ಶಿರಳಗಿ ಸ್ವಾಗತಿಸಿದರು. ಪ್ರತೀಕ್ಷಾ ಜಿ. ವಂದಿಸಿದರು. ಆಶಾ ಹೆಗಡೆ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ಪ್ರೇಕ್ಷಕರನ್ನು ರಂಜಿಸಲು ತಮ್ಮಲ್ಲಿರುವ ಅಭಿನಯ ಸಾಮರ್ಥ್ಯವನ್ನು ಸಂಪೂರ್ಣವಾಗಿ ಧಾರೆ ಎರೆಯುವ ಯಕ್ಷಗಾನ ಕಲಾವಿದರ ಬದುಕು ವೃದ್ಧಾಪ್ಯದಲ್ಲಿ ಅತ್ಯಂತ ಸಂಕಷ್ಟದಿಂದ ಕೂಡಿರುತ್ತದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.<br /> <br /> ಇಲ್ಲಿನ ಪ್ರಜ್ಞಾಮಿತ್ರ ಮಂಡಳಿ ಏರ್ಪಡಿಸಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರನ್ನು ಈಚೆಗೆ ಸನ್ಮಾನಿಸಿ ಅವರು ಮಾತನಾಡಿದರು.<br /> <br /> ಸರ್ಕಾರ ಯಕ್ಷಗಾನ ಕಲಾವಿದರು ಜೀವನ ಸಂಧ್ಯದಲ್ಲಿರುವ ಸಂದರ್ಭದಲ್ಲಿ ಅವರ ಜೀವನ ನಿರ್ವಹಣೆಗೆ ಮಾಸಾಶನ ನೀಡುವ ಬಗ್ಗೆ ಗಮನಹರಿಸಬೇಕಿದೆ. ಈ ಬಗ್ಗೆ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.<br /> <br /> ಚಿಟ್ಟಾಣಿ ರಾಮಚಂದ್ರ ಹೆಗಡೆ ಸೇರಿದಂತೆ ಯಕ್ಷರಂಗದ ಅನೇಕ ಕಲಾವಿದರು ಕಲೆಯನ್ನು ದೇಶ-ವಿದೇಶಗಳಲ್ಲಿ ಪ್ರಖ್ಯಾತಿಗೆ ತರಲು ಸಾಕಷ್ಟು ಶ್ರಮಿಸಿದ್ದಾರೆ ಎಂದರು.<br /> <br /> ಸನ್ಮಾನಿತ ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಮಾತನಾಡಿ, ಪ್ರಶಸ್ತಿ ಸನ್ಮಾನಗಳಿಗಿಂತ ಅಭಿಮಾನಿಗಳ ಹೃದಯದಲ್ಲಿ ನೆಲೆಸುವುದು ಪ್ರತಿಯೊಬ್ಬ ಕಲಾವಿದನ ಇಚ್ಛೆಯಾಗಿರುತ್ತದೆ. ಅಭಿಮಾನಿಗಳಿಲ್ಲದ ಕಲಾವಿದನ ಬದುಕು ಶೂನ್ಯ. ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರಿಗೆ ಬಂದದ್ದಲ್ಲ. ಯಕ್ಷಗಾನ ಲೋಕಕ್ಕೆ ಸಂದ ಗೌರವವಾಗಿದೆ ಎಂದರು.<br /> <br /> ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷ ರಾಧಾಕೃಷ್ಣ ನಾಯಕ್ ಬೇಂಗ್ರೆ, ಅನಂತ ಹೆಗಡೆ ಗಂಗೆಮನೆ, ಅಬಸೆ ಎನ್.ದಿನೇಶ್ಕುಮಾರ್ ಜೋಷಿ ಹಾಜರಿದ್ದರು. ಗಣಪತಿ ಶಿರಳಗಿ ಸ್ವಾಗತಿಸಿದರು. ಪ್ರತೀಕ್ಷಾ ಜಿ. ವಂದಿಸಿದರು. ಆಶಾ ಹೆಗಡೆ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>