<p><strong>ಹೊಸನಗರ:</strong> ತಾಲ್ಲೂಕಿನ ಮೂಡುಗೊಪ್ಪ ನಗರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶರಾವತಿ ಹಿನ್ನೀರಿನ 5 ಮಜರೆ ಹಳ್ಳಿಯ ಗ್ರಾಮಸ್ಥರು ರಸ್ತೆ ಸಂಪರ್ಕಕ್ಕಾಗಿ ಸೋಮವಾರದಿಂದ ಅನಿರ್ದಿಷ್ಟಕಾಲ ನಡುಗಡ್ಡೆಯಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.<br /> <br /> ಮಳೆಗಾಲದಲ್ಲಿ ಶರಾವತಿ ಹಿನ್ನೀರಿನ 5 ತಿಂಗಳು ಕಾಲ ಕೆರೆಮಠ, ಬಾಳೆಕೊಪ್ಪ, ಮಟದಜಡ್ಡು, ಕೋಟೆ ಕೆರೆ ಹಿಂದಿನ ಕೇರಿ, ಉಕ್ಕಡ ರಸ್ತೆ ಸಂಪರ್ಕ ಇಲ್ಲದ ಗ್ರಾಮಸ್ಥರು ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವ ತನಕ ಸೋಮವಾರದಿಂದ ಅನಿರ್ದಿಷ್ಟ ಕಾಲ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.<br /> <br /> ಕೇವಲ ರೂ 10ರಿಂದ 20 ಲಕ್ಷ ವೆಚ್ಚದಲ್ಲಿ ಸುಮಾರು 1.5 ಕಿ.ಮೀ ದೂರದವರೆಗೆ 2ರಿಂದ 10 ಅಡಿಯ ಎತ್ತರದ ದಂಡೆ ಹಾಕಿ ರಸ್ತೆ ಏರಿಸುವಂತೆ ಕಳೆದ 4 ದಶಕಗಳಿಂದ ಮಾಡಿದ ಮನವಿಗಳು ಸಂಪೂರ್ಣವಾಗಿ ವಿಫಲವಾದ ಕಾರಣ 5 ಮಜರೆ ಹಳ್ಳಿಯ ಗ್ರಾಮಸ್ಥರು ಮೂಡುಗೊಪ್ಪ ನಗರ ತಲುಪಲು ಕಾಲು ದಾರಿಯಲ್ಲಿ ಸುಮಾರು 10 ಕಿ.ಮೀ. ದೂರ ಸಂಚರಿಸುವುದು ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ.<br /> <br /> <strong>ಶಾಶ್ವತ ಸಂಪರ್ಕಕ್ಕೆ ಆಗ್ರಹ: </strong>ತಾ.ಪಂ. ಅಧ್ಯಕ್ಷೆ ಸುಮಾ ಸುಬ್ರಹ್ಮಣ್ಯ ಹಾಗೂ ಗ್ರಾ.ಪಂ. ಅಧ್ಯಕ್ಷೆ ಶಾರದಮ್ಮ ಸ್ಥಳಕ್ಕೆ ಆಗಮಿಸಿ ನೀಡಿದ ಮತ್ತೊಂದು ಭರವಸೆಗೆ ಒಪ್ಪದ ಗ್ರಾಮಸ್ಥರು ತಮ್ಮಡನೆ ಪ್ರತಿಭಟನೆ ಭಾಗವಹಿಸುವಂತೆ ಕೋರಿದರು. <br /> <br /> ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳು ಭೇಟಿ ನೀಡಿ ತಾತ್ಕಾಲಿಕವಾಗಿ ಬೋಟ್ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ಇದಕ್ಕೆ ಒಪ್ಪದ ಪ್ರತಿಭಟನಾಕಾರರು ನಿಗಮದಿಂದ ಶಾಶ್ವತ ರಸ್ತೆ ಸಂಪರ್ಕ ಕಲ್ಪಿಸುವಂತೆ ಒತ್ತಾಯಿಸಿದರು.<br /> <br /> <strong>ಚುನಾವಣೆ ಬಹಿಷ್ಕಾರ: </strong>ರಸ್ತೆ ಸಂಪರ್ಕದ ತಮ್ಮ ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ ಚುನಾವಣೆಯಲ್ಲಿ ಬಹಿಷ್ಕಾರದ ಎಚ್ಚರಿಕೆ ಹಾಕಲಾಗಿತ್ತು. ಆಗ ಸುದ್ದಿ ತಿಳಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬೇಡಿಕೆ ಈಡೇರಿಸುವ ಭರವಸೆ ನೀಡಿ ಮತ ಪಡೆದು ಸುಮ್ಮನಾದರು ಎಂಬುದು ಗ್ರಾಮಸ್ಥರ ಆರೋಪ.<br /> <br /> ಜನಪ್ರತಿನಿಧಿಗಳ ಹಾಗೂ ಸ್ಥಳೀಯ ಅಧಿಕಾರಿಗಳ ಈಡೇರದ ಹುಸಿ ಭರವಸೆಗೆ ಬೇಸತ್ತ ಗ್ರಾಮಸ್ಥರು ತಮ್ಮ ಬೇಡಿಕೆ ಈಡೇರಿಸಲು ಜಿಲ್ಲಾಧಿಕಾರಿಗಳೇ ಸ್ಥಳಕ್ಕೆ ಬರಬೇಕು. ಅಲ್ಲಿಯ ತನಕ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ:</strong> ತಾಲ್ಲೂಕಿನ ಮೂಡುಗೊಪ್ಪ ನಗರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶರಾವತಿ ಹಿನ್ನೀರಿನ 5 ಮಜರೆ ಹಳ್ಳಿಯ ಗ್ರಾಮಸ್ಥರು ರಸ್ತೆ ಸಂಪರ್ಕಕ್ಕಾಗಿ ಸೋಮವಾರದಿಂದ ಅನಿರ್ದಿಷ್ಟಕಾಲ ನಡುಗಡ್ಡೆಯಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.<br /> <br /> ಮಳೆಗಾಲದಲ್ಲಿ ಶರಾವತಿ ಹಿನ್ನೀರಿನ 5 ತಿಂಗಳು ಕಾಲ ಕೆರೆಮಠ, ಬಾಳೆಕೊಪ್ಪ, ಮಟದಜಡ್ಡು, ಕೋಟೆ ಕೆರೆ ಹಿಂದಿನ ಕೇರಿ, ಉಕ್ಕಡ ರಸ್ತೆ ಸಂಪರ್ಕ ಇಲ್ಲದ ಗ್ರಾಮಸ್ಥರು ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವ ತನಕ ಸೋಮವಾರದಿಂದ ಅನಿರ್ದಿಷ್ಟ ಕಾಲ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.<br /> <br /> ಕೇವಲ ರೂ 10ರಿಂದ 20 ಲಕ್ಷ ವೆಚ್ಚದಲ್ಲಿ ಸುಮಾರು 1.5 ಕಿ.ಮೀ ದೂರದವರೆಗೆ 2ರಿಂದ 10 ಅಡಿಯ ಎತ್ತರದ ದಂಡೆ ಹಾಕಿ ರಸ್ತೆ ಏರಿಸುವಂತೆ ಕಳೆದ 4 ದಶಕಗಳಿಂದ ಮಾಡಿದ ಮನವಿಗಳು ಸಂಪೂರ್ಣವಾಗಿ ವಿಫಲವಾದ ಕಾರಣ 5 ಮಜರೆ ಹಳ್ಳಿಯ ಗ್ರಾಮಸ್ಥರು ಮೂಡುಗೊಪ್ಪ ನಗರ ತಲುಪಲು ಕಾಲು ದಾರಿಯಲ್ಲಿ ಸುಮಾರು 10 ಕಿ.ಮೀ. ದೂರ ಸಂಚರಿಸುವುದು ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ.<br /> <br /> <strong>ಶಾಶ್ವತ ಸಂಪರ್ಕಕ್ಕೆ ಆಗ್ರಹ: </strong>ತಾ.ಪಂ. ಅಧ್ಯಕ್ಷೆ ಸುಮಾ ಸುಬ್ರಹ್ಮಣ್ಯ ಹಾಗೂ ಗ್ರಾ.ಪಂ. ಅಧ್ಯಕ್ಷೆ ಶಾರದಮ್ಮ ಸ್ಥಳಕ್ಕೆ ಆಗಮಿಸಿ ನೀಡಿದ ಮತ್ತೊಂದು ಭರವಸೆಗೆ ಒಪ್ಪದ ಗ್ರಾಮಸ್ಥರು ತಮ್ಮಡನೆ ಪ್ರತಿಭಟನೆ ಭಾಗವಹಿಸುವಂತೆ ಕೋರಿದರು. <br /> <br /> ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳು ಭೇಟಿ ನೀಡಿ ತಾತ್ಕಾಲಿಕವಾಗಿ ಬೋಟ್ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ಇದಕ್ಕೆ ಒಪ್ಪದ ಪ್ರತಿಭಟನಾಕಾರರು ನಿಗಮದಿಂದ ಶಾಶ್ವತ ರಸ್ತೆ ಸಂಪರ್ಕ ಕಲ್ಪಿಸುವಂತೆ ಒತ್ತಾಯಿಸಿದರು.<br /> <br /> <strong>ಚುನಾವಣೆ ಬಹಿಷ್ಕಾರ: </strong>ರಸ್ತೆ ಸಂಪರ್ಕದ ತಮ್ಮ ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ ಚುನಾವಣೆಯಲ್ಲಿ ಬಹಿಷ್ಕಾರದ ಎಚ್ಚರಿಕೆ ಹಾಕಲಾಗಿತ್ತು. ಆಗ ಸುದ್ದಿ ತಿಳಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬೇಡಿಕೆ ಈಡೇರಿಸುವ ಭರವಸೆ ನೀಡಿ ಮತ ಪಡೆದು ಸುಮ್ಮನಾದರು ಎಂಬುದು ಗ್ರಾಮಸ್ಥರ ಆರೋಪ.<br /> <br /> ಜನಪ್ರತಿನಿಧಿಗಳ ಹಾಗೂ ಸ್ಥಳೀಯ ಅಧಿಕಾರಿಗಳ ಈಡೇರದ ಹುಸಿ ಭರವಸೆಗೆ ಬೇಸತ್ತ ಗ್ರಾಮಸ್ಥರು ತಮ್ಮ ಬೇಡಿಕೆ ಈಡೇರಿಸಲು ಜಿಲ್ಲಾಧಿಕಾರಿಗಳೇ ಸ್ಥಳಕ್ಕೆ ಬರಬೇಕು. ಅಲ್ಲಿಯ ತನಕ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>