<p>ಭದ್ರಾವತಿ: ಇಂದಿನ ದಿನದಲ್ಲಿ ಪುರುಷನಿಗೆ ಸ್ತ್ರೀ ಸಮಾನಳು ಎಂದು ಹೇಳುವ ಅಗತ್ಯವಿಲ್ಲ. ಅದಕ್ಕೆ ಬದಲಾಗಿ ಸಮಾನತೆ ಕಾಣುವ ಮನಃಸ್ಥಿತಿ ಪ್ರತಿಯೊಬ್ಬರಲ್ಲೂ ಬೆಳೆಯಬೇಕು ಎಂದು ನ್ಯಾಯಾಧೀಶ ಗಿರೀಶ್ ಕೆ. ಭಟ್ ಕರೆ ನೀಡಿದರು.<br /> <br /> ಇಲ್ಲಿನ ಬಸವೇಶ್ವರ ಸಭಾ ಭವನದಲ್ಲಿ ಗುರುವಾರ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಹಾಗೂ ವಕೀಲರ ಸಂಘದ ಅಶ್ರಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಮಹಿಳಾ ರಕ್ಷಣೆಗಾಗಿ ಹಲವು ಕಾಯ್ದೆ, ಕಾನೂನುಗಳು ಜಾರಿಯಲ್ಲಿವೆ. ಆದರೆ, ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ಮೊದಲು ಅವುಗಳ ಸಂಪೂರ್ಣ ಜ್ಞಾನ ಸಂಪಾದನೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಪ್ರಯತ್ನಿಸಿ ಎಂದು ಮನವಿ ಮಾಡಿದರು.<br /> <br /> ನ್ಯಾಯಾಧೀಶರಾದ ದ್ರಾಕ್ಷಾಯಣಿ ಮಾತನಾಡಿ, ಕಾನೂನುಗಳು ಇವೆ ಎಂದು ಭಾವಿಸಿ ಅವುಗಳ ದುರುಪಯೋಗ ಮಾಡಿಕೊಳ್ಳುವುದು ಸರಿಯಲ್ಲ. ಹಾಗೆ ಮಾಡಿದಲ್ಲಿ ನೈಜ ಹಕ್ಕುದಾರರು ಸಹ ತೊಂದರೆ ಅನುಭವಿಸುವ ಸ್ಥಿತಿ ನಿರ್ಮಾಣವಾಗುತ್ತದೆ ಎಂದರು.<br /> <br /> ನ್ಯಾಯಾಧೀಶರಾದ ಶಾಂತವೀರ ಎಸ್. ಶಿವಪ್ಪ, ವಕೀಲರ ಸಂಘದ ಅಧ್ಯಕ್ಷ ಎ.ಬಿ. ನಂಜಪ್ಪ, ತಾ.ಪಂ. ಅಧ್ಯಕ್ಷ ಹಾಲಪ್ಪ, ಉಪಾಧ್ಯಕ್ಷ ಶಾಂತಕುಮಾರ್, ಭುವನೇಶ್, ಮಂಜಪ್ಪ, ಚಂದ್ರಪ್ಪ, ಸೋಮಶೇಖರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭದ್ರಾವತಿ: ಇಂದಿನ ದಿನದಲ್ಲಿ ಪುರುಷನಿಗೆ ಸ್ತ್ರೀ ಸಮಾನಳು ಎಂದು ಹೇಳುವ ಅಗತ್ಯವಿಲ್ಲ. ಅದಕ್ಕೆ ಬದಲಾಗಿ ಸಮಾನತೆ ಕಾಣುವ ಮನಃಸ್ಥಿತಿ ಪ್ರತಿಯೊಬ್ಬರಲ್ಲೂ ಬೆಳೆಯಬೇಕು ಎಂದು ನ್ಯಾಯಾಧೀಶ ಗಿರೀಶ್ ಕೆ. ಭಟ್ ಕರೆ ನೀಡಿದರು.<br /> <br /> ಇಲ್ಲಿನ ಬಸವೇಶ್ವರ ಸಭಾ ಭವನದಲ್ಲಿ ಗುರುವಾರ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಹಾಗೂ ವಕೀಲರ ಸಂಘದ ಅಶ್ರಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಮಹಿಳಾ ರಕ್ಷಣೆಗಾಗಿ ಹಲವು ಕಾಯ್ದೆ, ಕಾನೂನುಗಳು ಜಾರಿಯಲ್ಲಿವೆ. ಆದರೆ, ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ಮೊದಲು ಅವುಗಳ ಸಂಪೂರ್ಣ ಜ್ಞಾನ ಸಂಪಾದನೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಪ್ರಯತ್ನಿಸಿ ಎಂದು ಮನವಿ ಮಾಡಿದರು.<br /> <br /> ನ್ಯಾಯಾಧೀಶರಾದ ದ್ರಾಕ್ಷಾಯಣಿ ಮಾತನಾಡಿ, ಕಾನೂನುಗಳು ಇವೆ ಎಂದು ಭಾವಿಸಿ ಅವುಗಳ ದುರುಪಯೋಗ ಮಾಡಿಕೊಳ್ಳುವುದು ಸರಿಯಲ್ಲ. ಹಾಗೆ ಮಾಡಿದಲ್ಲಿ ನೈಜ ಹಕ್ಕುದಾರರು ಸಹ ತೊಂದರೆ ಅನುಭವಿಸುವ ಸ್ಥಿತಿ ನಿರ್ಮಾಣವಾಗುತ್ತದೆ ಎಂದರು.<br /> <br /> ನ್ಯಾಯಾಧೀಶರಾದ ಶಾಂತವೀರ ಎಸ್. ಶಿವಪ್ಪ, ವಕೀಲರ ಸಂಘದ ಅಧ್ಯಕ್ಷ ಎ.ಬಿ. ನಂಜಪ್ಪ, ತಾ.ಪಂ. ಅಧ್ಯಕ್ಷ ಹಾಲಪ್ಪ, ಉಪಾಧ್ಯಕ್ಷ ಶಾಂತಕುಮಾರ್, ಭುವನೇಶ್, ಮಂಜಪ್ಪ, ಚಂದ್ರಪ್ಪ, ಸೋಮಶೇಖರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>