<p><strong>ರಿಪ್ಪನ್ಪೇಟೆ:</strong> ಕಳೆದ 12 ವರ್ಷಗಳಿಂದ ನಾಲ್ಕು ಸರ್ಕಾರ ಅಧಿಕಾರಕ್ಕೆ ಬಂದರೂ, ಪಟ್ಟಣದ ಸರ್ಕಾರಿ ಹೆರಿಗೆ ಆಸ್ಪತ್ರೆ ಕಟ್ಟಡ ಕಾಮಗಾರಿ ಪೂರ್ಣಗೊಳ್ಳದೆ ಸಾರ್ವಜನಿಕರ ಬಳಕೆಗೆ ಲಭ್ಯವಿಲ್ಲದಂತಾಗಿದೆ. <br /> <br /> ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹೃದಯ ಭಾಗದಲ್ಲಿರುವ ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಏಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿದ್ದು, 75ಕ್ಕೂ ಹೆಚ್ಚು ಮಜಿರೆ ಹಳ್ಳಿಗಳು ಸೇರ್ಪಡೆಗೊಂಡಿವೆ.<br /> <br /> ಇದನ್ನು ಮನಗಂಡು ಗ್ರಾಮೀಣ ಜನರ ಅನುಕೂಲಕ್ಕಾಗಿ ಈ ಹಿಂದೆ 2001ರಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರು ಸಂಸತ್ ಸದಸ್ಯ ಸಂದರ್ಭದಲ್ಲಿ ಸಾರ್ವಜನಿಕರ ರೂ. 1ಲಕ್ಷ ವಂತಿಕೆ ಸಂಗ್ರಹದೊಂದಿಗೆ ರೂ. 10 ಲಕ್ಷ ವೆಚ್ಚದ ಸರ್ಕಾರದ ಅನುದಾನದಲ್ಲಿ 10 ಹಾಸಿಗೆಗಳ ಹೆರಿಗೆ ಆಸ್ಪತ್ರೆಗೆ ಕಾಮಗಾರಿಗೆ ಚಾಲನೆ ನೀಡಿ, ಶಂಕುಸ್ಥಾಪನೆಯನ್ನೂ ನೆರವೇರಿಸಿದರು.<br /> <br /> ಗುಣಮಟ್ಟ ಕಾಯ್ದುಕೊಳ್ಳದ ಗುತ್ತಿಗೆದಾರನ ಕಾಮಗಾರಿಯಲ್ಲಿನ ವಿಳಂಬದಿಂದಾಗಿ ಕಟ್ಟಡ ನಿರ್ಮಾಣದ ವೆಚ್ಚ ಸುಮಾರು ರೂ.30 ಲಕ್ಷಕ್ಕೆ ತಲುಪಿದರೂ ಇನ್ನು ಅಪೂರ್ಣವಾಗಿದೆ. ತೇಪೆ ಹಚ್ಚುತ್ತಲೇ ಸಾಗುತ್ತಿದೆ.<br /> <br /> ಕುಂಟುತ್ತಾ ಸಾಗಿದ ಈ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಅಂದಿನಿಂದಲೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸೇರಿದಂತೆ ಜಿಲ್ಲಾ ಪಂಚಾಯ್ತಿ ಸದಸ್ಯ ಕಲಗೋಡು ರತ್ನಾಕರ, ಮಾಜಿ ಸದಸ್ಯ ಬಿ.ಪಿ. ರಾಮಚಂದ್ರ, ಹೋರಾಟಗಾರ ಟಿ.ಆರ್. ಕೃಷ್ಣಪ್ಪ ಹಾಗೂ ಹಲವರು ಪ್ರತಿಭಟನೆ, ಧರಣಿ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ.<br /> <br /> ಬದಲಾದ ರಾಜಕೀಯ ವ್ಯವಸ್ಥೆಯಲ್ಲಿ ಇದೀಗ ಕಳಪೆ ಕಾಮಗಾರಿಯಿಂದ ಶಿಥಿಲಗೊಂಡು ಸೋರುವ ಕಟ್ಟಡಕ್ಕೆ ಹೊಸ ಸೀರೆಯಂತೆ ಮೆಲ್ಛಾವಣಿಯ ಹೊದಿಕೆ ಹಾಕಿ, ತರಾತುರಿಯಲ್ಲಿ ಅಪೂರ್ಣ ಕಾಮಗಾರಿಯ ಕಟ್ಟಡಕ್ಕೆ ಸುಣ್ಣ- ಬಣ್ಣ ಲೇಪಿಸಲಾಗಿದೆ. ಆದರೆ, ಹಳೆ ಸಾಮಾಗ್ರಿಗಳು, ತುಕ್ಕುಹಿಡಿದ ಕಬ್ಬಿಣದ ಮಂಚಗಳು ಹಾಗೂ ಹರಕಲು ಹಾಸಿಗೆಗಳು ಮಾತ್ರ ಎಂದಿನಂತೆ ಬಿದ್ದಿವೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ:</strong> ಕಳೆದ 12 ವರ್ಷಗಳಿಂದ ನಾಲ್ಕು ಸರ್ಕಾರ ಅಧಿಕಾರಕ್ಕೆ ಬಂದರೂ, ಪಟ್ಟಣದ ಸರ್ಕಾರಿ ಹೆರಿಗೆ ಆಸ್ಪತ್ರೆ ಕಟ್ಟಡ ಕಾಮಗಾರಿ ಪೂರ್ಣಗೊಳ್ಳದೆ ಸಾರ್ವಜನಿಕರ ಬಳಕೆಗೆ ಲಭ್ಯವಿಲ್ಲದಂತಾಗಿದೆ. <br /> <br /> ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹೃದಯ ಭಾಗದಲ್ಲಿರುವ ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಏಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿದ್ದು, 75ಕ್ಕೂ ಹೆಚ್ಚು ಮಜಿರೆ ಹಳ್ಳಿಗಳು ಸೇರ್ಪಡೆಗೊಂಡಿವೆ.<br /> <br /> ಇದನ್ನು ಮನಗಂಡು ಗ್ರಾಮೀಣ ಜನರ ಅನುಕೂಲಕ್ಕಾಗಿ ಈ ಹಿಂದೆ 2001ರಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರು ಸಂಸತ್ ಸದಸ್ಯ ಸಂದರ್ಭದಲ್ಲಿ ಸಾರ್ವಜನಿಕರ ರೂ. 1ಲಕ್ಷ ವಂತಿಕೆ ಸಂಗ್ರಹದೊಂದಿಗೆ ರೂ. 10 ಲಕ್ಷ ವೆಚ್ಚದ ಸರ್ಕಾರದ ಅನುದಾನದಲ್ಲಿ 10 ಹಾಸಿಗೆಗಳ ಹೆರಿಗೆ ಆಸ್ಪತ್ರೆಗೆ ಕಾಮಗಾರಿಗೆ ಚಾಲನೆ ನೀಡಿ, ಶಂಕುಸ್ಥಾಪನೆಯನ್ನೂ ನೆರವೇರಿಸಿದರು.<br /> <br /> ಗುಣಮಟ್ಟ ಕಾಯ್ದುಕೊಳ್ಳದ ಗುತ್ತಿಗೆದಾರನ ಕಾಮಗಾರಿಯಲ್ಲಿನ ವಿಳಂಬದಿಂದಾಗಿ ಕಟ್ಟಡ ನಿರ್ಮಾಣದ ವೆಚ್ಚ ಸುಮಾರು ರೂ.30 ಲಕ್ಷಕ್ಕೆ ತಲುಪಿದರೂ ಇನ್ನು ಅಪೂರ್ಣವಾಗಿದೆ. ತೇಪೆ ಹಚ್ಚುತ್ತಲೇ ಸಾಗುತ್ತಿದೆ.<br /> <br /> ಕುಂಟುತ್ತಾ ಸಾಗಿದ ಈ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಅಂದಿನಿಂದಲೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸೇರಿದಂತೆ ಜಿಲ್ಲಾ ಪಂಚಾಯ್ತಿ ಸದಸ್ಯ ಕಲಗೋಡು ರತ್ನಾಕರ, ಮಾಜಿ ಸದಸ್ಯ ಬಿ.ಪಿ. ರಾಮಚಂದ್ರ, ಹೋರಾಟಗಾರ ಟಿ.ಆರ್. ಕೃಷ್ಣಪ್ಪ ಹಾಗೂ ಹಲವರು ಪ್ರತಿಭಟನೆ, ಧರಣಿ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ.<br /> <br /> ಬದಲಾದ ರಾಜಕೀಯ ವ್ಯವಸ್ಥೆಯಲ್ಲಿ ಇದೀಗ ಕಳಪೆ ಕಾಮಗಾರಿಯಿಂದ ಶಿಥಿಲಗೊಂಡು ಸೋರುವ ಕಟ್ಟಡಕ್ಕೆ ಹೊಸ ಸೀರೆಯಂತೆ ಮೆಲ್ಛಾವಣಿಯ ಹೊದಿಕೆ ಹಾಕಿ, ತರಾತುರಿಯಲ್ಲಿ ಅಪೂರ್ಣ ಕಾಮಗಾರಿಯ ಕಟ್ಟಡಕ್ಕೆ ಸುಣ್ಣ- ಬಣ್ಣ ಲೇಪಿಸಲಾಗಿದೆ. ಆದರೆ, ಹಳೆ ಸಾಮಾಗ್ರಿಗಳು, ತುಕ್ಕುಹಿಡಿದ ಕಬ್ಬಿಣದ ಮಂಚಗಳು ಹಾಗೂ ಹರಕಲು ಹಾಸಿಗೆಗಳು ಮಾತ್ರ ಎಂದಿನಂತೆ ಬಿದ್ದಿವೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>