<p>ಸೊರಬ: ರಾಷ್ಟ್ರ ಕಂಡ ಅಪರೂಪದ ರಾಜಕಾರಣಿ ಎಂದು ಹೆಸರಾದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ವೈಕುಂಠ ಸಮಾರಾಧನೆ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮ ಗುರುವಾರ ವಿವಿಧ ಗಣ್ಯರು, ಸಹಸ್ರಾರು ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಿತು.<br /> <br /> ಬೆಳಿಗ್ಗೆ ಬಂಗಾರಪ್ಪ ತವರಾದ ಕುಬಟೂರಿನ ಅವರ ಸ್ವಗೃಹ `ಬಂಗಾರ~ದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಪತ್ನಿ ಶಕುಂತಲಮ್ಮ ಬಂಗಾರಪ್ಪ, ಪುತ್ರ ಮಧು ಬಂಗಾರಪ್ಪ, ಅನಿತಾ ಮಧು, ಅಳಿಯಂದಿರಾದ `ಡೆಕ್ಕನ್ ಹೆರಾಲ್ಡ್~ ಸಂಪಾದಕ ಕೆ.ಎನ್. ತಿಲಕ್ಕುಮಾರ್, ಚಿತ್ರನಟ ಶಿವರಾಜ್ಕುಮಾರ್, ಪವನ್ಕುಮಾರ್, ಹೆಣ್ಣು ಮಕ್ಕಳಾದ ಸುಜಾತಾ, ಗೀತಾ, ಅನಿತಾ, ಮೊಮ್ಮಕ್ಕಳು, ಭೀಮಣ್ಣನಾಯ್ಕ ಹಾಗೂ ಬಂಧು ವರ್ಗದವರು ಪಾಲ್ಗೊಂಡರು.<br /> <br /> ನಂತರ ಪಟ್ಟಣದ ಅಂತ್ಯ ಸಂಸ್ಕಾರ ಸ್ಥಳದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಅಭಿಮಾನಿಗಳು ಜತೆಗೂಡಿ ನೆಚ್ಚಿನ ನಾಯಕನಿಗೆ ಅಶ್ರುತರ್ಪಣ ನೀಡಿದರು.<br /> <br /> ಶ್ರದ್ಧಾಂಜಲಿ ಕಾರ್ಯಕ್ರಮ ಸಮನವಳ್ಳಿ ವ್ಯಾಪ್ತಿಯ `ಬಂಗಾರ ತೋಟ~ದಲ್ಲಿ ನಡೆಯಿತು. ರಾಜ್ಯದ ವಿವಿಧೆಡೆಯಿಂದ ಸಹಸ್ರಾರು ಅಭಿಮಾನಿಗಳು ಆಗಮಿಸಿದ್ದರು. ರಾಜಕೀಯ ಮುಖಂಡರನ್ನು ಒಳಗೊಂಡಂತೆ ನೂರಾರು ಅಭಿಮಾನಿಗಳು ನುಡಿ ನಮನ, ಗೀತ ನಮನ ಸಲ್ಲಿಸಿದರು.<br /> <br /> ನಟ ಶಿವರಾಜ್ಕುಮಾರ್, ಸಂಗೀತ ನಿರ್ದೇಶಕ ರಾಜೇಶ್ ರಾಮನಾಥ್, ರಾಜ್ಯ ರೈತ ಸಂಘದ ತ್ಯಾವಣಿಗಿ ಅಧ್ಯಕ್ಷ ಟಿ.ಎಸ್. ಜಯದೇವ್, ಬಿದರಗೆರೆಯ ಮೋಟಪ್ಪ, ಸಾಗರದ ಉದಯ್ಕುಮಾರ್, ವೆಂಕಟೇಶ್ ಸಾಗರ್, ರಾಮಣ್ಣ ಭಜಂತ್ರಿ, ಬಣ್ಣದಬಾಬು ಮತ್ತಿತರರು ಸಂಗೀತ ವಾದ್ಯ, ಗಾಯನ, ಕವನ ನಿವೇದನೆ ಮೂಲಕ `ಅಂದು, ಇಂದು, ಎಂದೆಂದೂ ಅಮರ ಬಂಗಾರಪ್ಪ~ ಎಂದು ಸ್ಮರಿಸಿದರು. <br /> <br /> ಜಿ.ವಿ. ಅತ್ರಿ ಸಂಗೀತ ನಿರ್ದೇಶನದಲ್ಲಿ ಬಂಗಾರಪ್ಪ ಹಾಡಿರುವ ಗೀತ ಸಂಕಲನ `ಕರುನಾಡ ಕಂಪು~ ಧ್ವನಿ ಸುರುಳಿಯ ಗೀತೆಗಳನ್ನು ಹಾಕಲಾಗಿತ್ತು. <br /> <br /> ರಾಜ್ಯ, ಜಿಲ್ಲಾ, ತಾಲ್ಲೂಕು ವ್ಯಾಪ್ತಿಯ ರಾಜಕೀಯ ಮುಖಂಡರು, ಮಠಾಧೀಶರು, ಶ್ರದ್ಧಾಂಜಲಿ ಸಮಿತಿಯ ಸದಸ್ಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೊರಬ: ರಾಷ್ಟ್ರ ಕಂಡ ಅಪರೂಪದ ರಾಜಕಾರಣಿ ಎಂದು ಹೆಸರಾದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ವೈಕುಂಠ ಸಮಾರಾಧನೆ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮ ಗುರುವಾರ ವಿವಿಧ ಗಣ್ಯರು, ಸಹಸ್ರಾರು ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಿತು.<br /> <br /> ಬೆಳಿಗ್ಗೆ ಬಂಗಾರಪ್ಪ ತವರಾದ ಕುಬಟೂರಿನ ಅವರ ಸ್ವಗೃಹ `ಬಂಗಾರ~ದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಪತ್ನಿ ಶಕುಂತಲಮ್ಮ ಬಂಗಾರಪ್ಪ, ಪುತ್ರ ಮಧು ಬಂಗಾರಪ್ಪ, ಅನಿತಾ ಮಧು, ಅಳಿಯಂದಿರಾದ `ಡೆಕ್ಕನ್ ಹೆರಾಲ್ಡ್~ ಸಂಪಾದಕ ಕೆ.ಎನ್. ತಿಲಕ್ಕುಮಾರ್, ಚಿತ್ರನಟ ಶಿವರಾಜ್ಕುಮಾರ್, ಪವನ್ಕುಮಾರ್, ಹೆಣ್ಣು ಮಕ್ಕಳಾದ ಸುಜಾತಾ, ಗೀತಾ, ಅನಿತಾ, ಮೊಮ್ಮಕ್ಕಳು, ಭೀಮಣ್ಣನಾಯ್ಕ ಹಾಗೂ ಬಂಧು ವರ್ಗದವರು ಪಾಲ್ಗೊಂಡರು.<br /> <br /> ನಂತರ ಪಟ್ಟಣದ ಅಂತ್ಯ ಸಂಸ್ಕಾರ ಸ್ಥಳದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಅಭಿಮಾನಿಗಳು ಜತೆಗೂಡಿ ನೆಚ್ಚಿನ ನಾಯಕನಿಗೆ ಅಶ್ರುತರ್ಪಣ ನೀಡಿದರು.<br /> <br /> ಶ್ರದ್ಧಾಂಜಲಿ ಕಾರ್ಯಕ್ರಮ ಸಮನವಳ್ಳಿ ವ್ಯಾಪ್ತಿಯ `ಬಂಗಾರ ತೋಟ~ದಲ್ಲಿ ನಡೆಯಿತು. ರಾಜ್ಯದ ವಿವಿಧೆಡೆಯಿಂದ ಸಹಸ್ರಾರು ಅಭಿಮಾನಿಗಳು ಆಗಮಿಸಿದ್ದರು. ರಾಜಕೀಯ ಮುಖಂಡರನ್ನು ಒಳಗೊಂಡಂತೆ ನೂರಾರು ಅಭಿಮಾನಿಗಳು ನುಡಿ ನಮನ, ಗೀತ ನಮನ ಸಲ್ಲಿಸಿದರು.<br /> <br /> ನಟ ಶಿವರಾಜ್ಕುಮಾರ್, ಸಂಗೀತ ನಿರ್ದೇಶಕ ರಾಜೇಶ್ ರಾಮನಾಥ್, ರಾಜ್ಯ ರೈತ ಸಂಘದ ತ್ಯಾವಣಿಗಿ ಅಧ್ಯಕ್ಷ ಟಿ.ಎಸ್. ಜಯದೇವ್, ಬಿದರಗೆರೆಯ ಮೋಟಪ್ಪ, ಸಾಗರದ ಉದಯ್ಕುಮಾರ್, ವೆಂಕಟೇಶ್ ಸಾಗರ್, ರಾಮಣ್ಣ ಭಜಂತ್ರಿ, ಬಣ್ಣದಬಾಬು ಮತ್ತಿತರರು ಸಂಗೀತ ವಾದ್ಯ, ಗಾಯನ, ಕವನ ನಿವೇದನೆ ಮೂಲಕ `ಅಂದು, ಇಂದು, ಎಂದೆಂದೂ ಅಮರ ಬಂಗಾರಪ್ಪ~ ಎಂದು ಸ್ಮರಿಸಿದರು. <br /> <br /> ಜಿ.ವಿ. ಅತ್ರಿ ಸಂಗೀತ ನಿರ್ದೇಶನದಲ್ಲಿ ಬಂಗಾರಪ್ಪ ಹಾಡಿರುವ ಗೀತ ಸಂಕಲನ `ಕರುನಾಡ ಕಂಪು~ ಧ್ವನಿ ಸುರುಳಿಯ ಗೀತೆಗಳನ್ನು ಹಾಕಲಾಗಿತ್ತು. <br /> <br /> ರಾಜ್ಯ, ಜಿಲ್ಲಾ, ತಾಲ್ಲೂಕು ವ್ಯಾಪ್ತಿಯ ರಾಜಕೀಯ ಮುಖಂಡರು, ಮಠಾಧೀಶರು, ಶ್ರದ್ಧಾಂಜಲಿ ಸಮಿತಿಯ ಸದಸ್ಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>