<p><strong>ಶಿಕಾರಿಪುರ: </strong>ಹೆಚ್ಚು ಇಳುವರಿ ಪಡೆಯಬೇಕು ಎನ್ನುವ ರೈತರ ಅತಿಯಾಸೆಯ ಫಲದಿಂದಾಗಿ ರಸಗೊಬ್ಬರ ಬಳಕೆ ಹೆಚ್ಚಾಗಿದ್ದು ಇದನ್ನು ಕಡಿಮೆ ಮಾಡುವುದು ಅಗತ್ಯವಾಗಿದೆ ಎಂದು ಕೃಷಿ ಅಧಿಕಾರಿ ಎ.ಎಸ್. ನೂರ್ಸಮದ್ ಹೇಳಿದರು.<br /> <br /> ತಾಲ್ಲೂಕಿನ ಕಾಗಿನಲ್ಲಿ ಗ್ರಾಮದಲ್ಲಿ ಈಚೆಗೆ ಮಹಾತ್ಮಾಗಾಂಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ನಡೆದ `ಎರೆಹುಳು ಗೊಬ್ಬರ ತಯಾರಿಕೆ ತರಬೇತಿ~ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಣ್ಣಿನ ಫಲವತ್ತತೆ ಹೆಚ್ಚಳಕ್ಕೆ ರೈತರು ಹೆಚ್ಚಿನ ಗಮನ ನೀಡುವುದು ಅಗತ್ಯವಾಗಿದ್ದು ಇದಕ್ಕಾಗಿ ಸಾವಯವ ಗೊಬ್ಬರ, ಹಸಿರೆಲೆ ಗೊಬ್ಬರ, ಎರೆಹುಳು ಗೊಬ್ಬರ ಬಳಕೆ ಮಾಡಬೇಕು ಇದರ ತಯಾರಿಕೆ ಬಗ್ಗೆ ರೈತರಿಗೆ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಎಂದರು.<br /> <br /> ನಿವೃತ್ತ ಶಿಕ್ಷಕ ತೀರ್ಥಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಗಣಿ ಗೊಬ್ಬರ ಬಳಕೆ ಮಾಡುವುದು ಅತ್ಯಂತ ಹಳೆಯ ಸಂಪ್ರದಾಯವಾಗಿದ್ದು ಇಂತಹ ಪದ್ಧತಿಗೆ ರೈತರು ಮರಳಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.<br /> <br /> ಮಹಾತ್ಮಾಗಾಂಧಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಲೋಕೇಶ್, ಕೆಂಚಗೊಂಡನಕೊಪ್ಪ ಜಲಾನಯನ ಸಮಿತಿ ಅಧ್ಯಕ್ಷ ಷಣ್ಮುಖಪ್ಪ, ರೈತಕೂಟದ ಸದಸ್ಯರು, ಶೈಲಜಾ, ಪುಷ್ಪಾ, ಮಂಜುಳಾ, ಗ್ರಾಮದ ಸ್ವಸಹಾಯ ಸಂಘದ ಸದಸ್ಯರುಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಕಾರಿಪುರ: </strong>ಹೆಚ್ಚು ಇಳುವರಿ ಪಡೆಯಬೇಕು ಎನ್ನುವ ರೈತರ ಅತಿಯಾಸೆಯ ಫಲದಿಂದಾಗಿ ರಸಗೊಬ್ಬರ ಬಳಕೆ ಹೆಚ್ಚಾಗಿದ್ದು ಇದನ್ನು ಕಡಿಮೆ ಮಾಡುವುದು ಅಗತ್ಯವಾಗಿದೆ ಎಂದು ಕೃಷಿ ಅಧಿಕಾರಿ ಎ.ಎಸ್. ನೂರ್ಸಮದ್ ಹೇಳಿದರು.<br /> <br /> ತಾಲ್ಲೂಕಿನ ಕಾಗಿನಲ್ಲಿ ಗ್ರಾಮದಲ್ಲಿ ಈಚೆಗೆ ಮಹಾತ್ಮಾಗಾಂಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ನಡೆದ `ಎರೆಹುಳು ಗೊಬ್ಬರ ತಯಾರಿಕೆ ತರಬೇತಿ~ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಣ್ಣಿನ ಫಲವತ್ತತೆ ಹೆಚ್ಚಳಕ್ಕೆ ರೈತರು ಹೆಚ್ಚಿನ ಗಮನ ನೀಡುವುದು ಅಗತ್ಯವಾಗಿದ್ದು ಇದಕ್ಕಾಗಿ ಸಾವಯವ ಗೊಬ್ಬರ, ಹಸಿರೆಲೆ ಗೊಬ್ಬರ, ಎರೆಹುಳು ಗೊಬ್ಬರ ಬಳಕೆ ಮಾಡಬೇಕು ಇದರ ತಯಾರಿಕೆ ಬಗ್ಗೆ ರೈತರಿಗೆ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಎಂದರು.<br /> <br /> ನಿವೃತ್ತ ಶಿಕ್ಷಕ ತೀರ್ಥಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಗಣಿ ಗೊಬ್ಬರ ಬಳಕೆ ಮಾಡುವುದು ಅತ್ಯಂತ ಹಳೆಯ ಸಂಪ್ರದಾಯವಾಗಿದ್ದು ಇಂತಹ ಪದ್ಧತಿಗೆ ರೈತರು ಮರಳಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.<br /> <br /> ಮಹಾತ್ಮಾಗಾಂಧಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಲೋಕೇಶ್, ಕೆಂಚಗೊಂಡನಕೊಪ್ಪ ಜಲಾನಯನ ಸಮಿತಿ ಅಧ್ಯಕ್ಷ ಷಣ್ಮುಖಪ್ಪ, ರೈತಕೂಟದ ಸದಸ್ಯರು, ಶೈಲಜಾ, ಪುಷ್ಪಾ, ಮಂಜುಳಾ, ಗ್ರಾಮದ ಸ್ವಸಹಾಯ ಸಂಘದ ಸದಸ್ಯರುಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>