‘ಕೆಲವು ತಿಂಗಳುಗಳ ಹಿಂದೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಸಿಗಂದೂರು ದೇವಸ್ಥಾನವನ್ನು ಮುಜರಾಯಿಗೆ ಸೇರಿಸಬೇಕು ಎಂದು ಹೇಳಿಕೆ ನೀಡಿದ್ದು ವಿವಾದ ಬೆಳೆಯಲು ದಾರಿ ಮಾಡಿಕೊಟ್ಟಿತು. ನಂತರ ಧರ್ಮದರ್ಶಿ ರಾಮಪ್ಪ ಹಾಗೂ ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರನ್ನು ಒಟ್ಟಿಗೆ ಸೇರಿಸಿ ರಾಜೀ ಸಂಧಾನ ನಡೆಸಲು ಪ್ರಯತ್ನಿಸಿದೆ. ಆದರೆ, ರಾಮಪ್ಪ ಅವರುಮಾತುಕತೆಗೆ ಬರಲಿಲ್ಲ. ಇದಕ್ಕೆ ಇಲ್ಲಿನ ಈಡಿಗರ ಸಂಘದ ಕೆಲವು ಪದಾಧಿಕಾರಿಗಳೇ ಕಾರಣ’ ಎಂದು ದೂರಿದರು.