<p><strong>ಹೊಸನಗರ:</strong> ಮಲೆನಾಡಿನ ಕ್ರೀಡಾ ಪಟುಗಳಿಗೆ ಬಾಲ್ಯದಲ್ಲಿಯೇ ವೈಜ್ಞಾನಿಕ ರೀತಿಯಲ್ಲಿ ಕ್ರೀಡಾ ತರಬೇತಿ ನೀಡಿದ್ದಲ್ಲಿ ಇನ್ನೂ ಹೆಚ್ಚಿನ ಯಶಸ್ಸು ಸಾಧಿಸ ಬಹುದು ಎಂದು ವಿಧಾನಸಭಾದ್ಯಕ್ಷ ಕಾಗೋಡು ತಿಮ್ಮಪ್ಪ ಅಭಿಪ್ರಾಯಪಟ್ಟರು.<br /> <br /> ಇಲ್ಲಿನ ಕೊಡಚಾದ್ರಿ ಕ್ರೀಡಾಂಗಣದಲ್ಲಿ ಕುವೆಂಪು ವಿಶ್ವ ವಿದ್ಯಾಲಯದ 27ನೇ ಅಂತರ ಕಾಲೇಜು ಮಹಿಳಾ ಕ್ರೀಡಾಕೂಟ ಈಚೆಗೆ ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡಾಪಟುಗಳು ಕಠಿಣ ಪರಿಶ್ರಮ, ಇಚ್ಛಾಶಕ್ತಿ ಹಾಗೂ ದೂರದೃಷ್ಠಿ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.<br /> <br /> ಮಾಜಿ ಅಂತರರಾಷ್ಟ್ರೀಯ ಅಥ್ಲೀಟ್ ಎಸ್.ಡಿ. ಈಶನ್ ಮಾತನಾಡಿ, ಆಟದಲ್ಲಿ ಸೋಲು–ಗೆಲುವು ಮುಖ್ಯ ಅಲ್ಲ. ಗುಣ ಮಟ್ಟದ ಸ್ಪರ್ಧೆ ಮುಖ್ಯ. ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳುವಂತೆ ಅವರು ಕ್ರೀಡಾಪಟುಗಳಿಗೆ ಸಲಹೆ ನೀಡಿದರು.<br /> ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಕರುಣಾಕರ್ ಅಧ್ಯಕ್ಷತೆ ವಹಿಸಿದ್ದರು.<br /> <br /> ಜಿಲ್ಲಾ ಪಂಚಾಯ್ತಿ ಸದಸ್ಯರಾದ ಕಲಗೋಡು ರತ್ನಾಕರ್, ಜ್ಯೋತಿ ಚಂದ್ರಮೌಳಿ, ಶುಭಾ ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ನಾಗರತ್ನಾ ದೇವರಾಜ್ ಮತ್ತಿತರರು ಹಾಜರಿದ್ದರು.<br /> <br /> ಕುವೆಂಪು ವಿವಿ ಕ್ರೀಡಾವಿಭಾಗದ ನಿರ್ದೇಶಕ ಪ್ರಕಾಶ್ ಮಾತನಾಡಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಂದ ಸುಮಾರು 33 ಕಾಲೇಜುಗಳಿಂದ 350ಕ್ಕೂ ಹೆಚ್ಚು ಮಹಿಳಾ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವರು<br /> ಎಂದರು.<br /> <br /> ದೈಹಿಕ ಶಿಕ್ಷಣ ವಿಭಾಗದ ಈಶ್ವರಪ್ಪ ಸ್ವಾಗತಿಸಿದರು. ಶ್ರೀಧರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮಂಜುನಾಥ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ:</strong> ಮಲೆನಾಡಿನ ಕ್ರೀಡಾ ಪಟುಗಳಿಗೆ ಬಾಲ್ಯದಲ್ಲಿಯೇ ವೈಜ್ಞಾನಿಕ ರೀತಿಯಲ್ಲಿ ಕ್ರೀಡಾ ತರಬೇತಿ ನೀಡಿದ್ದಲ್ಲಿ ಇನ್ನೂ ಹೆಚ್ಚಿನ ಯಶಸ್ಸು ಸಾಧಿಸ ಬಹುದು ಎಂದು ವಿಧಾನಸಭಾದ್ಯಕ್ಷ ಕಾಗೋಡು ತಿಮ್ಮಪ್ಪ ಅಭಿಪ್ರಾಯಪಟ್ಟರು.<br /> <br /> ಇಲ್ಲಿನ ಕೊಡಚಾದ್ರಿ ಕ್ರೀಡಾಂಗಣದಲ್ಲಿ ಕುವೆಂಪು ವಿಶ್ವ ವಿದ್ಯಾಲಯದ 27ನೇ ಅಂತರ ಕಾಲೇಜು ಮಹಿಳಾ ಕ್ರೀಡಾಕೂಟ ಈಚೆಗೆ ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡಾಪಟುಗಳು ಕಠಿಣ ಪರಿಶ್ರಮ, ಇಚ್ಛಾಶಕ್ತಿ ಹಾಗೂ ದೂರದೃಷ್ಠಿ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.<br /> <br /> ಮಾಜಿ ಅಂತರರಾಷ್ಟ್ರೀಯ ಅಥ್ಲೀಟ್ ಎಸ್.ಡಿ. ಈಶನ್ ಮಾತನಾಡಿ, ಆಟದಲ್ಲಿ ಸೋಲು–ಗೆಲುವು ಮುಖ್ಯ ಅಲ್ಲ. ಗುಣ ಮಟ್ಟದ ಸ್ಪರ್ಧೆ ಮುಖ್ಯ. ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳುವಂತೆ ಅವರು ಕ್ರೀಡಾಪಟುಗಳಿಗೆ ಸಲಹೆ ನೀಡಿದರು.<br /> ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಕರುಣಾಕರ್ ಅಧ್ಯಕ್ಷತೆ ವಹಿಸಿದ್ದರು.<br /> <br /> ಜಿಲ್ಲಾ ಪಂಚಾಯ್ತಿ ಸದಸ್ಯರಾದ ಕಲಗೋಡು ರತ್ನಾಕರ್, ಜ್ಯೋತಿ ಚಂದ್ರಮೌಳಿ, ಶುಭಾ ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ನಾಗರತ್ನಾ ದೇವರಾಜ್ ಮತ್ತಿತರರು ಹಾಜರಿದ್ದರು.<br /> <br /> ಕುವೆಂಪು ವಿವಿ ಕ್ರೀಡಾವಿಭಾಗದ ನಿರ್ದೇಶಕ ಪ್ರಕಾಶ್ ಮಾತನಾಡಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಂದ ಸುಮಾರು 33 ಕಾಲೇಜುಗಳಿಂದ 350ಕ್ಕೂ ಹೆಚ್ಚು ಮಹಿಳಾ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವರು<br /> ಎಂದರು.<br /> <br /> ದೈಹಿಕ ಶಿಕ್ಷಣ ವಿಭಾಗದ ಈಶ್ವರಪ್ಪ ಸ್ವಾಗತಿಸಿದರು. ಶ್ರೀಧರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮಂಜುನಾಥ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>