<p><strong>ಶಿವಮೊಗ್ಗ: </strong>ಅಶಾಂತಿಯಿಂದ ತತ್ತರಿಸುತ್ತಿರುವ ಮಾನವ ಬದುಕಿಗೆ ಧರ್ಮ ಪರಿಪಾಲನೆಯಿಂದ ಮಾತ್ರ ನೆಮ್ಮದಿ ಸಿಗಲು ಸಾಧ್ಯ ಎಂದು ಬಾಳೆಹೊನ್ನೂರು ರಂಭಾಪುರಿ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.<br /> <br /> ಮಂಗಳವಾರ ತಾಲ್ಲೂಕಿನ ಗಾಜನೂರು ಮುಳ್ಳುಕೆರೆ ಗ್ರಾಮದ ವೀರಭದ್ರಸ್ವಾಮಿ ಪುನರ್ ಪ್ರತಿಷ್ಠಾಪನಾ ಧರ್ಮ ಸಮಾರಂಭದ ನೇತೃತ್ವ ವಹಿಸಿ ಅವರು ಮಾತನಾಡಿದರು.<br /> <br /> ಮಾನವ ಜೀವನ ಉನ್ನತಿಗೆ ಮತ್ತು ಶ್ರೇಯಸ್ಸಿಗೆ ಧರ್ಮವೇ ಮೂಲ. ಎಲ್ಲ ಸಮುದಾಯದ ಜನತೆಗೆ ಈ ಧರ್ಮಸೂತ್ರಗಳು ಅನ್ವಯಿಸುತ್ತವೆ. ಅಮೂಲ್ಯವಾದ ಮಾನವ ಜನ್ಮ ಸಾರ್ಥಕಗೊಳ್ಳಬೇಕು. ಬದುಕಿನ<br /> ವಿಕಾಸ ಮತ್ತು ನೆಮ್ಮದಿಯ ಬದುಕಿಗೆ ಧರ್ಮ ಪರಿಪಾಲನೆ ಅಗತ್ಯ. ನಂಬಿಗೆ ಮತ್ತು ವಿಶ್ವಾಸದಿಂದ ನಡೆದು ಶಾಂತಿ ಕಾಣುವಂತಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.<br /> <br /> ಸಮಾರಂಭದಲ್ಲಿ ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಅಶಾಂತಿಯಿಂದ ತತ್ತರಿಸುತ್ತಿರುವ ಮಾನವ ಬದುಕಿಗೆ ಧರ್ಮ ಪರಿಪಾಲನೆಯಿಂದ ಮಾತ್ರ ನೆಮ್ಮದಿ ಸಿಗಲು ಸಾಧ್ಯ ಎಂದು ಬಾಳೆಹೊನ್ನೂರು ರಂಭಾಪುರಿ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.<br /> <br /> ಮಂಗಳವಾರ ತಾಲ್ಲೂಕಿನ ಗಾಜನೂರು ಮುಳ್ಳುಕೆರೆ ಗ್ರಾಮದ ವೀರಭದ್ರಸ್ವಾಮಿ ಪುನರ್ ಪ್ರತಿಷ್ಠಾಪನಾ ಧರ್ಮ ಸಮಾರಂಭದ ನೇತೃತ್ವ ವಹಿಸಿ ಅವರು ಮಾತನಾಡಿದರು.<br /> <br /> ಮಾನವ ಜೀವನ ಉನ್ನತಿಗೆ ಮತ್ತು ಶ್ರೇಯಸ್ಸಿಗೆ ಧರ್ಮವೇ ಮೂಲ. ಎಲ್ಲ ಸಮುದಾಯದ ಜನತೆಗೆ ಈ ಧರ್ಮಸೂತ್ರಗಳು ಅನ್ವಯಿಸುತ್ತವೆ. ಅಮೂಲ್ಯವಾದ ಮಾನವ ಜನ್ಮ ಸಾರ್ಥಕಗೊಳ್ಳಬೇಕು. ಬದುಕಿನ<br /> ವಿಕಾಸ ಮತ್ತು ನೆಮ್ಮದಿಯ ಬದುಕಿಗೆ ಧರ್ಮ ಪರಿಪಾಲನೆ ಅಗತ್ಯ. ನಂಬಿಗೆ ಮತ್ತು ವಿಶ್ವಾಸದಿಂದ ನಡೆದು ಶಾಂತಿ ಕಾಣುವಂತಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.<br /> <br /> ಸಮಾರಂಭದಲ್ಲಿ ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>