ಈ ಮಧ್ಯೆಯೇ ಹೋಟೆಲ್ನಲ್ಲಿ ಮಾತುಕತೆ ನಡೆಸಿರುವ ಶಿವಕುಮಾರ್ ಮತ್ತು ಸಿದ್ದರಾಮಯ್ಯ, ರಾಜ್ಯದಲ್ಲಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡುವಂತೆ ಮತ್ತು ಹೈಕಮಾಂಡ್ ಸೂಚನೆಯಂತೆ ಒಗ್ಗಟ್ಟಿನಿಂದ ಕೆಲಸ ಮಾಡುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಮುಖಂಡರಾದ ಚೆಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್, ನಜೀರ್ ಅಹ್ಮದ್ ಅವರು ಈ ಇಬ್ಬರ ಮಧ್ಯೆ ಮಾತುಕತೆಗೆ ಕಾರಣರಾಗಿದ್ದರು ಎಂದೂ ಗೊತ್ತಾಗಿದೆ.