<p><strong>ಸಾಗರ:</strong> ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಸಿಗಂದೂರಿಗೆ ತೆರಳಲು ಪ್ರವಾಸಿಗರು ಶರಾವತಿ ಹಿನ್ನೀರಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಸಂಚರಿಸುವ ಲಾಂಚ್ನಲ್ಲೇ ಪ್ರಯಾಣಿಸಬೇಕಿದೆ. ಅಂತೆಯೆ ನಾಡಿಗೆ ಬೆಳಕು ನೀಡಲು ತಮ್ಮ ಬದುಕನ್ನೇ ತ್ಯಾಗ ಮಾಡಿದ ಕರೂರು ಹೋಬಳಿಯ ಜನರೂ ತಾಲ್ಲೂಕು ಕೇಂದ್ರಕ್ಕೆ ಬರಲು ಇಲ್ಲಿನ ಲಾಂಚ್ ಅನ್ನೇ ಆಶ್ರಯಿಸಿದ್ದಾರೆ.</p>.<p>ಕಳೆದ ಸೆಪ್ಟೆಂಬರ್ನಲ್ಲಿ ಇಲ್ಲಿ ಸಂಚರಿಸುವ ಎರಡು ಲಾಂಚ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದರು. ಈ ಸಂದರ್ಭದಲ್ಲಿ ಲಾಂಚ್ ಪ್ರಯಾಣದ ಸುರಕ್ಷತೆಯ ಬಗ್ಗೆ ಹತ್ತು ಹಲವು ಪ್ರಶ್ನೆಗಳು ಎದುರಾಗಿದ್ದವು.</p>.<p>ಲಾಂಚ್ ಡಿಕ್ಕಿ ಪ್ರಕರಣದ ನಂತರವಾದರೂ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಹಲವು ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂಬ ನಿರೀಕ್ಷೆ ಸುಳ್ಳಾಗಿದೆ.ಇತ್ತೀಚಿನ ದಿನಗಳಲ್ಲಿ ಸಿಗಂದೂರಿಗೆ ಬರುವ<br />ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸ್ಥಳೀಯರು ಸಾಗರಕ್ಕೆ ಬರಲು ಹಾಗೂ ಮರಳಿ ತಮ್ಮೂರಿಗೆ ಹೋಗಲು ಪರದಾಡುವಂತಾಗಿದೆ.</p>.<p>ಈ ನಡುವೆ ಲಾಂಚ್ಗೆ ವಾಹನಗಳನ್ನು ಏರಿಸುವಾಗ ಅಲ್ಲಿನ ಸಿಬ್ಬಂದಿ ಯಾವ ಮುಂಜಾಗ್ರತೆ ವಹಿಸ<br />ಬೇಕೊ ಅದನ್ನು ವಹಿಸುತ್ತಿಲ್ಲ ಎನ್ನುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬರುತ್ತಿವೆ. ಲಾಂಚ್ನ ಬಾಗಿಲು ಮುಚ್ಚುವಷ್ಟು ಸ್ಥಳಾವಕಾಶ ಇರುವ ಜಾಗದಲ್ಲಿ ಮಾತ್ರ ವಾಹನಗಳನ್ನು ತುಂಬಿಸುವುದು ಸುರ<br />ಕ್ಷಿತ ಕ್ರಮ. ಆದರೆ ದಡದಿಂದ ಲಾಂಚ್ ಹೊರಟ ನಂತರವೂ ಬಾಗಿಲು ಮುಚ್ಚದೆ ಅದರ ತುದಿಯಲ್ಲೇ ವಾಹನಗಳು ನಿಲ್ಲಲು ಸಿಬ್ಬಂದಿಅವಕಾಶ ಕಲ್ಪಿಸುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ.</p>.<p>ಈ ವಿಷಯದಲ್ಲಿ ಕೆಲವೊಮ್ಮೆ ಪ್ರವಾಸಿಗರ ಹಾಗೂ ಸ್ಥಳೀಯರ ಅವಸರದ ಮನೋಭಾವವೂ ಸಿಬ್ಬಂದಿ ಮೇಲೆ ಒತ್ತಡ ತರುತ್ತಿದೆ ಎನ್ನಲಾಗುತ್ತಿದೆ. ಆದರೆ ಜೀವಕ್ಕೆ ಕುತ್ತು ತರುವ ಸಂದರ್ಭ ಇರುವಾಗ ಲಾಂಚ್ನ ಸಿಬ್ಬಂದಿ ಇಂತಹ ಒತ್ತಡಗಳಿಗೆ ಮಣಿಯದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಪ್ರಯಾಣಿಕರು ಒತ್ತಾಯಿಸುತ್ತಾರೆ.</p>.<p>ಲಾಂಚ್ನ ಬಾಗಿಲಿನಲ್ಲೇ ವಾಹನಗಳು ನಿಲ್ಲಲು ಅವಕಾಶ ಮಾಡಿಕೊಟ್ಟು ಏನಾದರೂ ಅನಾಹುತವಾದರೆ ಅದರ ಜವಾಬ್ದಾರಿಯನ್ನು ಸಿಬ್ಬಂದಿ ವರ್ಗದವರೇ ಹೊರಬೇಕಾಗುತ್ತದೆ.ಬರುವ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಎರಡು ದಿನಗಳ ಕಾಲ ಸಿಗಂದೂರಿನಲ್ಲಿ ಜಾತ್ರೆ ನಡೆಯಲಿದ್ದು, 50 ಸಾವಿರ ಪ್ರವಾಸಿಗರು ಬರುವ ನಿರೀಕ್ಷೆ ಇದೆ. ಈ ವೇಳೆಯಲ್ಲಿ ಲಾಂಚ್ನಲ್ಲಿ ನೂಕುನುಗ್ಗಲು ಉಂಟಾಗುವುದು ಸಾಮಾನ್ಯ. ಸಿಬ್ಬಂದಿ ಮತ್ತಷ್ಟು ಹೆಚ್ಚಿನ ಎಚ್ಚರ ವಹಿಸಬೇಕಿದೆ ಎಂಬುದು ಸ್ಥಳೀಯರ ಒತ್ತಾಯ.</p>.<p>ಲಾಂಚ್ ಮುಖಾಮುಖಿ ಡಿಕ್ಕಿ ಪ್ರಕರಣದ ನಂತರವಾದರೂ ಕೊರತೆ ಇರುವ ಸಿಬ್ಬಂದಿ ನೇಮಕವಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಆ ವೇಳೆಯಲ್ಲಿ ಸ್ಥಳಕ್ಕೆ ಬಂದು ಪರಿಶೀಲನೆ ಶಾಸ್ತ್ರ ಮುಗಿಸಿದ್ದನ್ನು ಬಿಟ್ಟರೆ ಸಿಬ್ಬಂದಿ ನೇಮಕಕ್ಕೆ ಮುಂದಾಗಿಲ್ಲ.ಪ್ರಕರಣಕ್ಕೆ ಸಂಬಂಧ<br />ಪಟ್ಟಂತೆ ತಪ್ಪಿತಸ್ಥರ ವಿರುದ್ಧ ಮೊಕದ್ದಮೆ ದಾಖಲಿಸಬೇಕು ಎಂಬ ಒತ್ತಾಯವೂ ಕೇಳಿಬಂದಿತ್ತು. ಆದರೆ ತಾಂತ್ರಿಕ ತೊಂದರೆಯಿಂದಾಗಿ ಅವಘಡ ಸಂಭವಿಸಿದೆ ಎನ್ನುವ ಕಾರಣಕ್ಕೆ ಮಾನವೀಯ ನೆಲೆಯಲ್ಲಿ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿರಲಿಲ್ಲ.</p>.<p>ಭವಿಷ್ಯದಲ್ಲಾದರೂ ಲಾಂಚ್ನ ಸಿಬ್ಬಂದಿ ಪ್ರಯಾಣಿಕರ ಸಂಚಾರ ಹಾಗೂ ಅವರ ವಾಹನಗಳ ನಿಲುಗಡೆ ಸಂಬಂಧ ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಬೇಕು ಎಂಬುದು ಪ್ರಯಾಣಿಕರ ಒತ್ತಾಯ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಸಿಗಂದೂರಿಗೆ ತೆರಳಲು ಪ್ರವಾಸಿಗರು ಶರಾವತಿ ಹಿನ್ನೀರಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಸಂಚರಿಸುವ ಲಾಂಚ್ನಲ್ಲೇ ಪ್ರಯಾಣಿಸಬೇಕಿದೆ. ಅಂತೆಯೆ ನಾಡಿಗೆ ಬೆಳಕು ನೀಡಲು ತಮ್ಮ ಬದುಕನ್ನೇ ತ್ಯಾಗ ಮಾಡಿದ ಕರೂರು ಹೋಬಳಿಯ ಜನರೂ ತಾಲ್ಲೂಕು ಕೇಂದ್ರಕ್ಕೆ ಬರಲು ಇಲ್ಲಿನ ಲಾಂಚ್ ಅನ್ನೇ ಆಶ್ರಯಿಸಿದ್ದಾರೆ.</p>.<p>ಕಳೆದ ಸೆಪ್ಟೆಂಬರ್ನಲ್ಲಿ ಇಲ್ಲಿ ಸಂಚರಿಸುವ ಎರಡು ಲಾಂಚ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದರು. ಈ ಸಂದರ್ಭದಲ್ಲಿ ಲಾಂಚ್ ಪ್ರಯಾಣದ ಸುರಕ್ಷತೆಯ ಬಗ್ಗೆ ಹತ್ತು ಹಲವು ಪ್ರಶ್ನೆಗಳು ಎದುರಾಗಿದ್ದವು.</p>.<p>ಲಾಂಚ್ ಡಿಕ್ಕಿ ಪ್ರಕರಣದ ನಂತರವಾದರೂ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಹಲವು ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂಬ ನಿರೀಕ್ಷೆ ಸುಳ್ಳಾಗಿದೆ.ಇತ್ತೀಚಿನ ದಿನಗಳಲ್ಲಿ ಸಿಗಂದೂರಿಗೆ ಬರುವ<br />ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸ್ಥಳೀಯರು ಸಾಗರಕ್ಕೆ ಬರಲು ಹಾಗೂ ಮರಳಿ ತಮ್ಮೂರಿಗೆ ಹೋಗಲು ಪರದಾಡುವಂತಾಗಿದೆ.</p>.<p>ಈ ನಡುವೆ ಲಾಂಚ್ಗೆ ವಾಹನಗಳನ್ನು ಏರಿಸುವಾಗ ಅಲ್ಲಿನ ಸಿಬ್ಬಂದಿ ಯಾವ ಮುಂಜಾಗ್ರತೆ ವಹಿಸ<br />ಬೇಕೊ ಅದನ್ನು ವಹಿಸುತ್ತಿಲ್ಲ ಎನ್ನುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬರುತ್ತಿವೆ. ಲಾಂಚ್ನ ಬಾಗಿಲು ಮುಚ್ಚುವಷ್ಟು ಸ್ಥಳಾವಕಾಶ ಇರುವ ಜಾಗದಲ್ಲಿ ಮಾತ್ರ ವಾಹನಗಳನ್ನು ತುಂಬಿಸುವುದು ಸುರ<br />ಕ್ಷಿತ ಕ್ರಮ. ಆದರೆ ದಡದಿಂದ ಲಾಂಚ್ ಹೊರಟ ನಂತರವೂ ಬಾಗಿಲು ಮುಚ್ಚದೆ ಅದರ ತುದಿಯಲ್ಲೇ ವಾಹನಗಳು ನಿಲ್ಲಲು ಸಿಬ್ಬಂದಿಅವಕಾಶ ಕಲ್ಪಿಸುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ.</p>.<p>ಈ ವಿಷಯದಲ್ಲಿ ಕೆಲವೊಮ್ಮೆ ಪ್ರವಾಸಿಗರ ಹಾಗೂ ಸ್ಥಳೀಯರ ಅವಸರದ ಮನೋಭಾವವೂ ಸಿಬ್ಬಂದಿ ಮೇಲೆ ಒತ್ತಡ ತರುತ್ತಿದೆ ಎನ್ನಲಾಗುತ್ತಿದೆ. ಆದರೆ ಜೀವಕ್ಕೆ ಕುತ್ತು ತರುವ ಸಂದರ್ಭ ಇರುವಾಗ ಲಾಂಚ್ನ ಸಿಬ್ಬಂದಿ ಇಂತಹ ಒತ್ತಡಗಳಿಗೆ ಮಣಿಯದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಪ್ರಯಾಣಿಕರು ಒತ್ತಾಯಿಸುತ್ತಾರೆ.</p>.<p>ಲಾಂಚ್ನ ಬಾಗಿಲಿನಲ್ಲೇ ವಾಹನಗಳು ನಿಲ್ಲಲು ಅವಕಾಶ ಮಾಡಿಕೊಟ್ಟು ಏನಾದರೂ ಅನಾಹುತವಾದರೆ ಅದರ ಜವಾಬ್ದಾರಿಯನ್ನು ಸಿಬ್ಬಂದಿ ವರ್ಗದವರೇ ಹೊರಬೇಕಾಗುತ್ತದೆ.ಬರುವ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಎರಡು ದಿನಗಳ ಕಾಲ ಸಿಗಂದೂರಿನಲ್ಲಿ ಜಾತ್ರೆ ನಡೆಯಲಿದ್ದು, 50 ಸಾವಿರ ಪ್ರವಾಸಿಗರು ಬರುವ ನಿರೀಕ್ಷೆ ಇದೆ. ಈ ವೇಳೆಯಲ್ಲಿ ಲಾಂಚ್ನಲ್ಲಿ ನೂಕುನುಗ್ಗಲು ಉಂಟಾಗುವುದು ಸಾಮಾನ್ಯ. ಸಿಬ್ಬಂದಿ ಮತ್ತಷ್ಟು ಹೆಚ್ಚಿನ ಎಚ್ಚರ ವಹಿಸಬೇಕಿದೆ ಎಂಬುದು ಸ್ಥಳೀಯರ ಒತ್ತಾಯ.</p>.<p>ಲಾಂಚ್ ಮುಖಾಮುಖಿ ಡಿಕ್ಕಿ ಪ್ರಕರಣದ ನಂತರವಾದರೂ ಕೊರತೆ ಇರುವ ಸಿಬ್ಬಂದಿ ನೇಮಕವಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಆ ವೇಳೆಯಲ್ಲಿ ಸ್ಥಳಕ್ಕೆ ಬಂದು ಪರಿಶೀಲನೆ ಶಾಸ್ತ್ರ ಮುಗಿಸಿದ್ದನ್ನು ಬಿಟ್ಟರೆ ಸಿಬ್ಬಂದಿ ನೇಮಕಕ್ಕೆ ಮುಂದಾಗಿಲ್ಲ.ಪ್ರಕರಣಕ್ಕೆ ಸಂಬಂಧ<br />ಪಟ್ಟಂತೆ ತಪ್ಪಿತಸ್ಥರ ವಿರುದ್ಧ ಮೊಕದ್ದಮೆ ದಾಖಲಿಸಬೇಕು ಎಂಬ ಒತ್ತಾಯವೂ ಕೇಳಿಬಂದಿತ್ತು. ಆದರೆ ತಾಂತ್ರಿಕ ತೊಂದರೆಯಿಂದಾಗಿ ಅವಘಡ ಸಂಭವಿಸಿದೆ ಎನ್ನುವ ಕಾರಣಕ್ಕೆ ಮಾನವೀಯ ನೆಲೆಯಲ್ಲಿ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿರಲಿಲ್ಲ.</p>.<p>ಭವಿಷ್ಯದಲ್ಲಾದರೂ ಲಾಂಚ್ನ ಸಿಬ್ಬಂದಿ ಪ್ರಯಾಣಿಕರ ಸಂಚಾರ ಹಾಗೂ ಅವರ ವಾಹನಗಳ ನಿಲುಗಡೆ ಸಂಬಂಧ ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಬೇಕು ಎಂಬುದು ಪ್ರಯಾಣಿಕರ ಒತ್ತಾಯ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>