ಇಂಡಿ ಕ್ಷೇತ್ರದ ಮಾಜಿ ಶಾಸಕ ರವಿಕಾಂತ ಪಾಟೀಲ ಹಾಗೂ ಸಿಂದಗಿ ಕ್ಷೇತ್ರದ ಮಾಜಿ ಶಾಸಕ ದಿವಂಗತ ಎಂ.ಸಿ.ಮನಗೂಳಿ ಅವರ ಪುತ್ರ ಚನ್ನವೀರ ಮನಗೂಳಿ ಅವರು ಜೆಡಿಎಸ್ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಅವರನ್ನು ಹೊರತು ಪಡಿಸಿ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿರುವ ಹಾಗೂ ಚಿರಪರಿಚಿತವಲ್ಲದ ನಾಜಿಯಾ ಅವರಿಗೆ ಪಕ್ಷದ ‘ಬಿ‘ ಫಾರಂ ಅನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ನೀಡಿರುವುದು ರಾಜಕೀಯವಾಗಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.