‘ಈ ಹಿಂದೆ ಪಟ್ಟಣದಲ್ಲಿ ಹಂದಿಗಳ ಸಂಖ್ಯೆ ವಿಪರೀತವಾದ ಹಿನ್ನೆಲೆಯಲ್ಲಿ ಪುರಸಭೆ ಅವುಗಳನ್ನು ಬೇರೆಡೆ ಸ್ಥಳಾಂತರಿಸುವ ಕಾರ್ಯ ಕೈಗೊಂಡಿತ್ತು. ಹೀಗಾಗಿ, ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದರು. ಈಗ ಬಿಡಾಡಿ ದನಗಳನ್ನು ಹತ್ತಿರದ ಗೋಶಾಲೆಗಳಿಗೆ ಸ್ಥಳಾಂತರಿಸುವ ಕಾರ್ಯ ಮಾಡಬೇಕು. ಆ ಮೂಲಕ ವ್ಯಾಪಾರಿಗಳು, ವಾಹನ ಸವಾರರಿಗೆ ನೆಮ್ಮದಿ ಕಲ್ಪಿಸಬೇಕು’ ಎಂಬುದು ಸಾರ್ವಜನಿಕರ ಒತ್ತಾಸೆಯಾಗಿದೆ.