ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳದ ಶಾಂತಿ ಶೃಂಗ ಸಮ್ಮೇಳನಕ್ಕೆ ಸಿರಿಗೆರೆ ಶ್ರೀ

Last Updated 29 ನವೆಂಬರ್ 2018, 20:40 IST
ಅಕ್ಷರ ಗಾತ್ರ

ಸಿರಿಗೆರೆ: ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ನ.30ರಿಂದ ಡಿ.3ರವರೆಗೆ ನಡೆಯಲಿರುವ ಏಷ್ಯಾ ಶಾಂತಿ ಶೃಂಗ ಸಮ್ಮೇಳನದಲ್ಲಿ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸಲಿದ್ದಾರೆ.

ಅಂತರರಾಷ್ಟ್ರೀಯ ಶಾಂತಿ ಪ್ರತಿಷ್ಠಾನದ ಆಹ್ವಾನದ ಮೇರೆಗೆ ಭಾಗವಹಿಸಲು ಅವರು ಗುರುವಾರ ಕಠ್ಮಂಡುವಿಗೆ ತೆರಳಿದ್ದಾರೆ.

ಸಮ್ಮೇಳನದಲ್ಲಿ ‘ನಮ್ಮ ಕಾಲದ ಪ್ರಚಲಿತ ಸವಾಲುಗಳು, ಅಭಿವೃದ್ಧಿ ಮತ್ತು ಸಾರ್ವಕಾಲಿಕ ಮೌಲ್ಯಗಳು’ ಕುರಿತು ವಿಷಯ ಮಂಡಿಸುವರು. ಭಾರತದಿಂದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಕೂಡ ಭಾಗವಹಿಸಲಿದ್ದಾರೆ.

ಸಮ್ಮೇಳನದಲ್ಲಿ ಏಷ್ಯಾ ಖಂಡದ ವ್ಯಾಪ್ತಿಯಲ್ಲಿ ಶಾಂತಿ ಸಂವರ್ಧನೆಗೆ ಶ್ರಮಿಸುತ್ತಿರುವ ಧಾರ್ಮಿಕ, ರಾಜಕೀಯ ಮುಖಂಡರು, ಸಂಸದರು, ಸಚಿವರು, ತಜ್ಞರು ಪಾಲ್ಗೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT