ವಿಧಾನಪರಿಷತ್ನಲ್ಲಿ ಜೆಡಿಎಸ್ನ ಎಚ್.ಎಂ. ರಮೇಶಗೌಡ, ಬಿಜೆಪಿಯ ಎನ್. ರವಿಕುಮಾರ್, ಕಾಂಗ್ರೆಸ್ಸಿನ ಪಿ.ಆರ್. ರಮೇಶ್ ಪ್ರಸ್ತಾಪಿಸಿದ ವಿಷಯದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಸಚಿವರು, ‘ತೇಲ್ಗೆರೆ ಗ್ರಾಮದಲ್ಲಿ 211 ಎಕರೆ ಸರ್ಕಾರಿ ಗೋಮಾಳವಿದೆ. ಅದರಲ್ಲಿ 15 ಜನರಿಗೆ 16 ಎಕರೆಯಂತೆ ಮಂಜೂರು ಮಾಡಿರುವುದು ಕೂಡ ಅನುಮಾನಾಸ್ಪದವಾಗಿದೆ. ಕಳೆದ ವರ್ಷ ಈ ಪ್ರಕರಣ ಗಮನಕ್ಕೆ ಬಂದ ಬಳಿಕ ಜಿಲ್ಲಾಧಿಕಾರಿಯನ್ನು ಸ್ಥಳಕ್ಕೆ ಕಳುಹಿಸಿ ತನಿಖೆ ಮಾಡಿಸಲಾಗಿದೆ’ ಎಂದರು.