ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ವರ್ಷಕ್ಕೆ ಗುಂಡಿ ಮುಕ್ತ ‘ಸ್ಮಾರ್ಟ್‌’ ರಸ್ತೆಗಳು

ಡಿಸೆಂಬರ್ 31ರ ಒಳಗೆ ರಸ್ತೆಗಳ ಸಂಪೂರ್ಣ ದುರಸ್ತಿಗೆ ಸಚಿವ ಕೆ.ಎಸ್.ಈಶ್ವರಪ್ಪ ತಾಕೀತು
Last Updated 5 ಡಿಸೆಂಬರ್ 2019, 9:16 IST
ಅಕ್ಷರ ಗಾತ್ರ

ಶಿವಮೊಗ್ಗ:ಭಾರಿ ಮಳೆಪರಿಣಾಮ ಸಂಪೂರ್ಣ ಹಾಳಾಗಿರುವ,ಗುಂಡಿ ಬಿದ್ದಿರುವ ರಸ್ತೆಗಳನ್ನುಡಿ.31ರಒಳಗೆದುರಸ್ತಿಮಾಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ಮಾರ್ಟ್‍ಸಿಟಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರುಮಾತನಾಡಿದರು.

ಗುಂಡಿಗಳ ದುರಸ್ತಿ ಕಾರ್ಯ ತಕ್ಷಣ ಆರಂಭಿಸಬೇಕು. ಹೊಸ ರಸ್ತೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಸರ್ಕಾರ ಈಗಾಗಲೇ ಅನುದಾನ ಬಿಡುಗಡೆ ಮಾಡಿದೆ.
ಸ್ಮಾರ್ಟ್‍ಸಿಟಿಯೋಜನೆಯ ಕಾಮಗಾರಿಗಳನ್ನೂ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಶ್ರಮಿಸಬೇಕು. ಈ ಕಾಮಗಾರಿಗಳನಿರ್ವಹಣೆ ಮತ್ತು ಉಸ್ತುವಾರಿಗಾಗಿ ನಗರ ಪಾಲಿಕೆ ಎಂಜಿನಿಯರ್‌ನಿಯೋಜಿಸಬೇಕು. ಕಾಮಗಾರಿಗಳ ಪ್ರಗತಿಯ ಸಂಪೂರ್ಣ ವಿವರ ಸಲ್ಲಿಸಬೇಕು ಎಂದು ಸೂಚಿಸಿದರು.

ನಗರದ ಸೌಂದರ್ಯ ಹೆಚ್ಚಿಸಲು ಪಾಲಿಕೆ ವ್ಯಾಪ್ತಿಯಲ್ಲಿ ₨ 32 ಕೋಟಿ ವೆಚ್ಚದಲ್ಲಿ 20ಸಾವಿರ ಎಲ್‌ಇಡಿ ದೀಪಗಳನ್ನು ಅಳವಡಿಸಲು ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡಲಾಗಿದೆ. ಈ ಗುತ್ತಿಗೆ ಅವಧಿ 7 ವರ್ಷ.ಈ ಅವಧಿಯಲ್ಲಿ ಅದರ ಸಂಪೂರ್ಣ ನಿರ್ವಹಣೆ ಗುತ್ತಿಗೆದಾರರದ್ದೇ ಆಗಿರುತ್ತದೆ. ಜನವರಿ 15ರ ಒಳಗೆಅವರಿಗೆ ಕಾರ್ಯಾದೇಶ ನೀಡಬೇಕು ಎಂದು ತಾಕೀತು ಮಾಡಿದರು.

ಸರ್ಕಾರಿ ಶಾಲೆ, ಅಂಗನವಾಡಿ ಕಟ್ಟಡಗಳ ದುರಸ್ತಿಯ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ತಕ್ಷಣ ಕಾರ್ಯಾದೇಶ ನೀಡಬೇಕು.ಎಸ್‌ಡಿಎಂಸಿ ಅಧ್ಯಕ್ಷರು,ಪದಾಧಿಕಾರಿಗಳು ಕಾಮಗಾರಿ ತ್ವರಿತಕ್ಕೆ ಸಹಕರಿಸಬೇಕು. ಗುಣಮಟ್ಟಖಾತ್ರಿಪಡಿಸಿಕೊಳ್ಳಬೇಕು. ಪ್ರತಿ ಶಾಲೆಯಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳ ಪೂರ್ಣ ವಿವರಪಡೆದು ಅದರಂತೆ ಕಾಮಗಾರಿ ಪೂರ್ಣಗೊಳಿಸಲುನಿಗಾವಹಿಸಬೇಕು. ಶಾಲೆಗಳ ಶೌಚಾಲಯ ದುರಸ್ತಿ ಕಾಮಗಾರಿ ತ್ವರಿತವಾಗಿಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಶಿವಮೊಗ್ಗ ಸಮೀಪದ ಗೋವಿಂದಾಪುರದಲ್ಲಿ ಆಶ್ರಯ ಯೋಜನೆ ಮನೆಗಳನ್ನು ನಿರ್ಮಿಸಲು ತಾಂತ್ರಿಕ ಅನುಮೋದನೆಗಾಗಿ ಪ್ರಸ್ತಾವ ಸಲ್ಲಿಸಲಾಗಿದೆ. ಅನುಮೋದನೆ ದೊರೆತತಕ್ಷಣ ಕಾಮಗಾರಿ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪಾಲಿಕೆಮೇಯರ್ಲತಾ ಗಣೇಶ್,ಉಪ ಮೇಯರ್ ಎಸ್‌.ಎನ್‌.ಚನ್ನಬಸಪ್ಪ, ವಿರೋಧ ಪಕ್ಷದ ನಾಯಕ ರಮೇಶ್‍ ಹೆಗ್ಡೆ, ಜ್ಞಾನೇಶ್ವರ್, ನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಹೆಚ್ಚುವರಿ ಜಿಲ್ಲಾಧಿಕಾರಿ ಜೆ.ಅನುರಾಧ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT