ವಿಶೇಷ ಘಟಕ ಯೋಜನೆ (ಎಸ್ಸಿಪಿ) ಮತ್ತು ಗಿರಿಜನ ಉಪ ಯೋಜನೆ (ಟಿಎಸ್ಪಿ) ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ₹ 87 ಸಾವಿರ ಕೋಟಿ ಬಿಡುಗಡೆ ಮಾಡಿರುವುದಾಗಿ ಹೇಳಿದ್ದಾರೆ. ಆದರೆ, ಅದರಲ್ಲಿನ ಶೇ 60ರಷ್ಟನ್ನು ಬೇರೆ ಯೋಜನೆಗಳಿಗೆ ಬಳಕೆ ಮಾಡಲಾಗಿದೆ. ಶೇ 20ರಷ್ಟೂ ಎಸ್ಸಿಪಿ, ಟಿಎಸ್ಪಿ ಯೋಜನೆಗಳಿಗೆ ಹಣ ಬಳಕೆಯಾಗಿಲ್ಲ. ಈ ಕುರಿತು ಶ್ವೇತ ಪತ್ರ ಹೊರಡಿಸಲಿ ಎಂದು ಒತ್ತಾಯಿಸಿದರು.