ಸಂಚಾರಿ ವ್ಯವಸ್ಥೆ ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಸುಗಮ ಸಂಚಾರಕ್ಕೆ ಅಡ್ಡಿಪಡಿಸುವ, ಕಾನೂನು ಗೌರವಿಸದ ಚಾಲಕರಿಗೆ, ಸವಾರರಿಗೆ ದಂಡ ವಿಧಿಸುವುದು ಸಹಜ. ನಗರದಲ್ಲಿ ಇರುವ ಸಂಚಾರ ಸಮಸ್ಯೆಗಳನ್ನು ಗುರುತಿಸಲಾಗುವುದು. ಜಿಲ್ಲಾಡಳಿತ, ನಗರ ಪಾಲಿಕೆ ಜತೆ ಚರ್ಚಿಸಲಾಗುವುದು. ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಮದು ಭರವಸೆ ನೀಡಿದರು.