ತಿಕೋಟಾ: ‘ಎಲ್ಲ ಮಕ್ಕಳಲ್ಲೂ ಒಂದೊಂದು ಪ್ರತಿಭೆ ಅಡಕವಾಗಿರುತ್ತದೆ. ಮಕ್ಕಳು ಆಟೋಟಗಳಲ್ಲಿ ಪಾಳ್ಗೊಳ್ಳುವ ಮೂಲಕ ದೈಹಿಕವಾಗಿ ಸದೃಢರಾಗಬೇಕು ಎಂದು ಘೋಣಸಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದರಾಯ ಸಿದ್ದನಾಥ ಹೇಳಿದರು.
ತಾಲ್ಲೂಕಿನ ಕಳ್ಳಕವಟಗಿಯಲ್ಲಿ ಬುಧವಾರ ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು.
‘ಕೆಲವು ಮಕ್ಕಳು ವಿವಿಧ ಆಟಗಳನ್ನು ಆಡಲು ದೈಹಿಕವಾಗಿ ಸಮರ್ಥರಿದ್ದರೂ ಅವರಿಗೆ ಅವಕಾಶಗಳು ದೊರೆತಿರುವುದಿಲ್ಲ. ಇಂತಹ ಮಕ್ಕಳಿಗೆ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಅವಕಾಶ ಮಾಡಿಕೊಡಬೇಕು. ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಕೊಡಲಾಗುವುದು’ ಎಂದು ಘೋಷಿಸಿದರು.
ಸಿಆರ್ಪಿ ಎ.ಜೆ.ಬೋಸಲೆ ಮಾತನಾಡಿ, ‘ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ವಿದ್ಯಾರ್ಥಿಗಳು ಸೋಲು–ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು’ ಎಂದರು.