<p><strong>ಬೆಂಗಳೂರು:</strong>ಹೆಣ್ಣೂರು ಸಮೀಪದ ಚಗಲಟ್ಟಿಯ ಸಿಎಂಆರ್ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಶುಕ್ರವಾರ ಸಂಸ್ಥಾಪಕರ ದಿನ ಆಚರಿಸಲಾಯಿತು. ಇದೇ ಸಂದರ್ಭದಲ್ಲಿಸಿಎಂಆರ್ ನಾಯಕತ್ವ ಪ್ರಶಸ್ತಿ ವಿತರಿಸಲಾಯಿತಲ್ಲದೆ, ₹1.5 ಕೋಟಿ ಮೌಲ್ಯದ ಶಿಷ್ಯ ವೇತನವನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು.</p>.<p>15 ವಿದ್ಯಾರ್ಥಿಗಳು ಸಿಎಂಆರ್ ನಾಯಕತ್ವ ಪ್ರಶಸ್ತಿಗೆ ಪಾತ್ರರಾದರು.ಸಿಎಂಆರ್ ಜನಾರ್ದನ ಟ್ರಸ್ಟ್ 166 ಸಿಎಂಆರ್ ಸ್ಮಾರಕ ಶಿಷ್ಯವೇತನಗಳು ಹಾಗೂ 21 ಕ್ರೀಡಾ ಶಿಷ್ಯವೇತನಗಳನ್ನೂ ಪ್ರದಾನ ಮಾಡಲಾಯಿತು. </p>.<p>ಕಂದಾಯ ಸಚಿವ ಆರ್. ಅಶೋಕ್, ‘ಈಗಿನ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಗುಣಗಳನ್ನು ಹೊಂದಿದ್ದಾರೆ. ಏನಾದರೂ ಸಾಧನೆ ಮಾಡಬೇಕೆನ್ನುವ ಗುಣ ವಿದ್ಯಾರ್ಥಿಗಳಲ್ಲಿ ಕಾಣಬಹುದು. ಮಕ್ಕಳಿಗೆ ತಂದೆ ತಾಯಿ ಪೋಷಕರಿಂದ ಉತ್ತಮ ಪ್ರೋತ್ಸಾಹ ದೊಡ್ಡ ಸಾಧನೆ ಮಾಡುತ್ತಾರೆ’ ಎಂದರು.</p>.<p>‘ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡುವವರಿಗೆ ರಾಜ್ಯ ಸರ್ಕಾರ ವಿಶೇಷ ಸವಲತ್ತುಗಳನ್ನು ನೀಡಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ, ಸಿಎಂಆರ್ ವಿಶ್ವವಿದ್ಯಾಲಯ ಕೂಡ ಮಾದರಿ ಕೆಲಸ ಮಾಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿದೆ’ ಎಂದರು.</p>.<p>ವಸತಿ ಸಚಿವ ವಿ.ಸೋಮಣ್ಣ ಮಾತನಾಡಿದರು. ಸಿಎಂಆರ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ.ಸಿ.ರಾಮಮೂರ್ತಿ, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಸಿಎಂಆರ್ ಜನಾರ್ದನ ಟ್ರಸ್ಟ್ ಅಧ್ಯಕ್ಷೆ ಸಬೀತಾ ರಾಮಮೂರ್ತಿ, ಸಿಇಒ ಕೆ.ಆರ್.ಜಯದೀಪ್, ಉಪಾಧ್ಯಕ್ಷೆ ಡಾ.ತ್ರೀಷಾ ರಾಮಮೂರ್ತಿ, ಕೆ.ಸಿ.ಜಗನ್ನಾಥ ರೆಡ್ಡಿ, ಕುಲಪತಿ ಎಂ.ಎಸ್. ಶಿವಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಹೆಣ್ಣೂರು ಸಮೀಪದ ಚಗಲಟ್ಟಿಯ ಸಿಎಂಆರ್ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಶುಕ್ರವಾರ ಸಂಸ್ಥಾಪಕರ ದಿನ ಆಚರಿಸಲಾಯಿತು. ಇದೇ ಸಂದರ್ಭದಲ್ಲಿಸಿಎಂಆರ್ ನಾಯಕತ್ವ ಪ್ರಶಸ್ತಿ ವಿತರಿಸಲಾಯಿತಲ್ಲದೆ, ₹1.5 ಕೋಟಿ ಮೌಲ್ಯದ ಶಿಷ್ಯ ವೇತನವನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು.</p>.<p>15 ವಿದ್ಯಾರ್ಥಿಗಳು ಸಿಎಂಆರ್ ನಾಯಕತ್ವ ಪ್ರಶಸ್ತಿಗೆ ಪಾತ್ರರಾದರು.ಸಿಎಂಆರ್ ಜನಾರ್ದನ ಟ್ರಸ್ಟ್ 166 ಸಿಎಂಆರ್ ಸ್ಮಾರಕ ಶಿಷ್ಯವೇತನಗಳು ಹಾಗೂ 21 ಕ್ರೀಡಾ ಶಿಷ್ಯವೇತನಗಳನ್ನೂ ಪ್ರದಾನ ಮಾಡಲಾಯಿತು. </p>.<p>ಕಂದಾಯ ಸಚಿವ ಆರ್. ಅಶೋಕ್, ‘ಈಗಿನ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಗುಣಗಳನ್ನು ಹೊಂದಿದ್ದಾರೆ. ಏನಾದರೂ ಸಾಧನೆ ಮಾಡಬೇಕೆನ್ನುವ ಗುಣ ವಿದ್ಯಾರ್ಥಿಗಳಲ್ಲಿ ಕಾಣಬಹುದು. ಮಕ್ಕಳಿಗೆ ತಂದೆ ತಾಯಿ ಪೋಷಕರಿಂದ ಉತ್ತಮ ಪ್ರೋತ್ಸಾಹ ದೊಡ್ಡ ಸಾಧನೆ ಮಾಡುತ್ತಾರೆ’ ಎಂದರು.</p>.<p>‘ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡುವವರಿಗೆ ರಾಜ್ಯ ಸರ್ಕಾರ ವಿಶೇಷ ಸವಲತ್ತುಗಳನ್ನು ನೀಡಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ, ಸಿಎಂಆರ್ ವಿಶ್ವವಿದ್ಯಾಲಯ ಕೂಡ ಮಾದರಿ ಕೆಲಸ ಮಾಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿದೆ’ ಎಂದರು.</p>.<p>ವಸತಿ ಸಚಿವ ವಿ.ಸೋಮಣ್ಣ ಮಾತನಾಡಿದರು. ಸಿಎಂಆರ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ.ಸಿ.ರಾಮಮೂರ್ತಿ, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಸಿಎಂಆರ್ ಜನಾರ್ದನ ಟ್ರಸ್ಟ್ ಅಧ್ಯಕ್ಷೆ ಸಬೀತಾ ರಾಮಮೂರ್ತಿ, ಸಿಇಒ ಕೆ.ಆರ್.ಜಯದೀಪ್, ಉಪಾಧ್ಯಕ್ಷೆ ಡಾ.ತ್ರೀಷಾ ರಾಮಮೂರ್ತಿ, ಕೆ.ಸಿ.ಜಗನ್ನಾಥ ರೆಡ್ಡಿ, ಕುಲಪತಿ ಎಂ.ಎಸ್. ಶಿವಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>