ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಕೃಷ್ಣ ಜನ್ಮಾಷ್ಟಮಿ, ಲೀಲೋತ್ಸವ

Last Updated 20 ಆಗಸ್ಟ್ 2019, 9:28 IST
ಅಕ್ಷರ ಗಾತ್ರ

ವಿಜಯಪುರ: ಇಲ್ಲಿಯ ಶ್ರೀಕೃಷ್ಣ ವಾದಿರಾಜ ಮಠದಲ್ಲಿ ಆ.23 ರಿಂದ 25ರ ವರೆಗೆ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಲೀಲೋತ್ಸವ ಕಾರ್ಯಕ್ರಮಗಳು ಜರುಗಲಿವೆ.

ಆ.23ರಂದು ಬೆಳಿಗ್ಗೆ 8 ಗಂಟೆಗೆ ಶ್ರೀಕೃಷ್ಣ ದೇವರಿಗೆ ಲಕ್ಷ ತುಳಸಿ ಪುಷ್ಪಾರ್ಚನೆ, ಸಂಜೆ 7 ಗಂಟೆಗೆ ದಾಸವಾಣಿ ಕಾರ್ಯಕ್ರಮ, ರಾತ್ರಿ 11 ಗಂಟೆಗೆ ಶ್ರೀ ಬಾಲಕೃಷ್ಣನಿಗೆ ಕಲ್ಪೋಕ್ತ ಪೂಜೆ, ರಾತ್ರಿ 12.03 ಗಂಟೆಗೆ ಅಘ್ರ್ಯ ಪ್ರದಾನ ನಡೆಯಲಿದೆ.

ಆ.24 ರಂದು ಬೆಳಿಗ್ಗೆ 6 ಗಂಟೆಗೆ ಪೂಜೆ, ಷೋಡಷೋಪಚಾರ ಪೂಜೆ, ನಂತರ ವಿವಿಧ ಭಜನಾ ಮಂಡಳಿಗಳಿಂದ ಅಖಂಡ ಭಜನೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ 1 ರಿಂದ 4 ಮತ್ತು 5 ರಿಂದ 9 ವರ್ಷದವರಿಗೆ ವೇಷಭೂಷಣ ಸ್ಪರ್ಧೆ (ರಾಧಾ, ಕೃಷ್ಣ ವೇಷ ಮಾತ್ರ) ಹಮ್ಮಿಕೊಳ್ಳಲಾಗಿದೆ.

ಆ.25 ರಂದು ಬೆಳಿಗ್ಗೆ 8 ಗಂಟೆಗೆ ಪಂಚಾಮೃತ ಅಭಿಷೇಕ, 10.30 ಗಂಟೆಗೆ ನೈವೇದ್ಯ, ಮಹಾ ಮಂಗಳಾರತಿ ನಂತರ ತೀರ್ಥಪ್ರಸಾದ ಜರುಗಲಿವೆ.

ಸಂಜೆ 6 ಗಂಟೆಗೆ ಗೋಪಾಲ ಕಾವಲಿ, ಪಲ್ಲಕ್ಕಿ ಉತ್ಸವ, ತೊಟ್ಟಿಲು ಪೂಜೆ, ರಂಗಪೂಜೆ, ಅಷ್ಟಾವಧಾನ, ಮಹಾ ಮಂಗಳಾರತಿ ಹಾಗೂ ಫಲ ಮಂತ್ರಾಕ್ಷತೆ ನಡೆಯಲಿವೆ.

ಮಾಹಿತಿಗೆ 94489 55210 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT