<p><strong>ಬೆಂಗಳೂರು</strong>: ‘ಕೋವಿಡ್ ಕಾಣಿಸಿಕೊಂಡ ಬಳಿಕ ರಕ್ತದ ಆಕರ ಕೋಶ ದಾನಿಗಳ ಸಂಖ್ಯೆ ಇಳಿಕೆಯಾಗಿದೆ.ಇದರಿಂದಾಗಿ ಅಸ್ಥಿ ಮಜ್ಜೆ ಕಸಿಗೆ ಎದುರು<br />ನೋಡುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ’ ಎಂದುಬಿಜಿಎಸ್ ಗ್ಲೆನಿಗಲ್ಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯಕೀಯ ಸಲಹೆಗಾರಡಾ. ಗೋವಿಂದ ಎರಿಯೆಟ್ ತಿಳಿಸಿದರು.</p>.<p>ಡಿಕೆಎಂಎಸ್ ಬಿಎಂಎಸ್ಟಿ ಫೌಂಡೇಷನ್ ಇಂಡಿಯಾ ಸಹಯೋಗದಲ್ಲಿ ಆಸ್ಪತ್ರೆ ನಗರದರಲ್ಲಿ ಹಮ್ಮಿಕೊಂಡರಕ್ತದ ಆಕರ ಕೋಶ ದಾನ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು.‘ರಕ್ತ ಕ್ಯಾನ್ಸರ್ನಿಂದ ಬಳಲುತ್ತಿರುವ ರೋಗಿಗಳನ್ನು ಕಾಪಾಡಲು ರಕ್ತದ ಆಕರ ಕೋಶ ಸಹಾಯಕ.ದೇಶದಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿದ್ದು, ದಾನಿಗಳ ಕೊರತೆಯಿಂದಾಗಿ ಹಲವು ಮಂದಿ ಕಸಿಗೆ ಎದುರು ನೋಡುತ್ತಿದ್ದಾರೆ.ಆರಂಭಿಕ ಹಂತದಲ್ಲಿಯೆ ರೋಗಿಗೆ ಹೊಂದಾಣಿಕೆಯಾಗುವ ದಾನಿ ಸಿಕ್ಕಲ್ಲಿ ವ್ಯಕ್ತಿ ಬೇಗ ಚೇತರಿಸಿಕೊಳ್ಳುತ್ತಾನೆ’ ಎಂದು ಹೇಳಿದರು.</p>.<p>‘ರಕ್ತದ ಆಕರ ಕೋಶಗಳು ಆರು ವಾರಗಳಲ್ಲಿ ಮತ್ತೆ ಬೆಳೆಯುತ್ತವೆ.ರಕ್ತದಿಂದ ಆಕರ ಕೋಶಗಳನ್ನು ಪಡೆಯುವ ಪ್ರಕ್ರಿಯೆ 4ರಿಂದ 5 ಗಂಟೆಗಳಲ್ಲಿ ಮುಕ್ತಾಯವಾಗಲಿದೆ. ಕೇವಲ 200ರಿಂದ 250 ಎಂ.ಎಲ್ ರಕ್ತವನ್ನು ಮಾತ್ರ ಪಡೆಯಲಾಗುತ್ತದೆ. ದಾನಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ’ ಎಂದು ವಿವರಿಸಿದರು.</p>.<p>ಡಿಕೆಎಂಎಸ್-ಬಿಎಂಎಸ್ಟಿ ಫೌಂಡೇಷನ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ಯಾಟ್ರಿಕ್ ಪಾಲ್, ‘ಶೇ 30ರಷ್ಟು ರೋಗಿಗಳಿಗೆ ಮಾತ್ರ ಕುಟುಂಬದ ಸದಸ್ಯರು ಅಥವಾ ಸಂಬಂಧಿಗಳ ರಕ್ತದ ಆಕರ ಕೋಶ ಹೊಂದಾಣಿಕೆಯಾಗುತ್ತದೆ. ಶೇ 70ರಷ್ಟು ರೋಗಿಗಳಿಗೆ ರಕ್ತದ ಆಕರ ಕೋಶ ಹೊಂದಾಣಿಕೆಯಾಗುವ ದಾನಿಗಳನ್ನು ಹುಡುಕಬೇಕಾಗುತ್ತದೆ. ರಕ್ತ ಕ್ಯಾನ್ಸರ್ನಿಂದ ಬಳಲುತ್ತಿರುವ ರೋಗಿಗಳನ್ನು ಕಾಪಾಡಲು<br />ರಕ್ತದ ಆಕರ ಕೋಶ ಸಹಾಯಕ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೋವಿಡ್ ಕಾಣಿಸಿಕೊಂಡ ಬಳಿಕ ರಕ್ತದ ಆಕರ ಕೋಶ ದಾನಿಗಳ ಸಂಖ್ಯೆ ಇಳಿಕೆಯಾಗಿದೆ.ಇದರಿಂದಾಗಿ ಅಸ್ಥಿ ಮಜ್ಜೆ ಕಸಿಗೆ ಎದುರು<br />ನೋಡುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ’ ಎಂದುಬಿಜಿಎಸ್ ಗ್ಲೆನಿಗಲ್ಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯಕೀಯ ಸಲಹೆಗಾರಡಾ. ಗೋವಿಂದ ಎರಿಯೆಟ್ ತಿಳಿಸಿದರು.</p>.<p>ಡಿಕೆಎಂಎಸ್ ಬಿಎಂಎಸ್ಟಿ ಫೌಂಡೇಷನ್ ಇಂಡಿಯಾ ಸಹಯೋಗದಲ್ಲಿ ಆಸ್ಪತ್ರೆ ನಗರದರಲ್ಲಿ ಹಮ್ಮಿಕೊಂಡರಕ್ತದ ಆಕರ ಕೋಶ ದಾನ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು.‘ರಕ್ತ ಕ್ಯಾನ್ಸರ್ನಿಂದ ಬಳಲುತ್ತಿರುವ ರೋಗಿಗಳನ್ನು ಕಾಪಾಡಲು ರಕ್ತದ ಆಕರ ಕೋಶ ಸಹಾಯಕ.ದೇಶದಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿದ್ದು, ದಾನಿಗಳ ಕೊರತೆಯಿಂದಾಗಿ ಹಲವು ಮಂದಿ ಕಸಿಗೆ ಎದುರು ನೋಡುತ್ತಿದ್ದಾರೆ.ಆರಂಭಿಕ ಹಂತದಲ್ಲಿಯೆ ರೋಗಿಗೆ ಹೊಂದಾಣಿಕೆಯಾಗುವ ದಾನಿ ಸಿಕ್ಕಲ್ಲಿ ವ್ಯಕ್ತಿ ಬೇಗ ಚೇತರಿಸಿಕೊಳ್ಳುತ್ತಾನೆ’ ಎಂದು ಹೇಳಿದರು.</p>.<p>‘ರಕ್ತದ ಆಕರ ಕೋಶಗಳು ಆರು ವಾರಗಳಲ್ಲಿ ಮತ್ತೆ ಬೆಳೆಯುತ್ತವೆ.ರಕ್ತದಿಂದ ಆಕರ ಕೋಶಗಳನ್ನು ಪಡೆಯುವ ಪ್ರಕ್ರಿಯೆ 4ರಿಂದ 5 ಗಂಟೆಗಳಲ್ಲಿ ಮುಕ್ತಾಯವಾಗಲಿದೆ. ಕೇವಲ 200ರಿಂದ 250 ಎಂ.ಎಲ್ ರಕ್ತವನ್ನು ಮಾತ್ರ ಪಡೆಯಲಾಗುತ್ತದೆ. ದಾನಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ’ ಎಂದು ವಿವರಿಸಿದರು.</p>.<p>ಡಿಕೆಎಂಎಸ್-ಬಿಎಂಎಸ್ಟಿ ಫೌಂಡೇಷನ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ಯಾಟ್ರಿಕ್ ಪಾಲ್, ‘ಶೇ 30ರಷ್ಟು ರೋಗಿಗಳಿಗೆ ಮಾತ್ರ ಕುಟುಂಬದ ಸದಸ್ಯರು ಅಥವಾ ಸಂಬಂಧಿಗಳ ರಕ್ತದ ಆಕರ ಕೋಶ ಹೊಂದಾಣಿಕೆಯಾಗುತ್ತದೆ. ಶೇ 70ರಷ್ಟು ರೋಗಿಗಳಿಗೆ ರಕ್ತದ ಆಕರ ಕೋಶ ಹೊಂದಾಣಿಕೆಯಾಗುವ ದಾನಿಗಳನ್ನು ಹುಡುಕಬೇಕಾಗುತ್ತದೆ. ರಕ್ತ ಕ್ಯಾನ್ಸರ್ನಿಂದ ಬಳಲುತ್ತಿರುವ ರೋಗಿಗಳನ್ನು ಕಾಪಾಡಲು<br />ರಕ್ತದ ಆಕರ ಕೋಶ ಸಹಾಯಕ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>