ಹಲವು ರಾಷ್ಟ್ರಗಳಲ್ಲಿ ಈಗಾಗಲೇ ಕೃಷಿ ಉದ್ಯಮವಾಗಿದೆ. ಕೃಷಿಯ ಹೆಸರಿನಲ್ಲಿ ಕೋಟಿ ಕೋಟಿ ಹಣ ವೆಚ್ಚ ಮಾಡುವ ನಮ್ಮ ಸರ್ಕಾರಗಳು, ಅದನ್ನು ಒಂದು ಉದ್ಯಮವಾಗಿ ನೋಡಲು ಯಾಕೆ ಹಿಂದೇಟು ಹಾಕುತ್ತಿವೆ ಎನ್ನುವುದು ಅರ್ಥವಾಗುತ್ತಿಲ್ಲ.
ಕೃಷಿಗೆ ಉದ್ದಿಮೆಯ ದರ್ಜೆ ನೀಡಿದರೆ ಯಾವ ಜಿಲ್ಲೆಯಲ್ಲಿ ಯಾವ ಬೆಳೆ ಬೆಳೆಯಬೇಕು ಎಂಬುದು ಮೊದಲೇ ನಿರ್ಧಾರವಾಗುತ್ತದೆ. ವಿವಿಧ ಕಂಪನಿಗಳು ಕೃಷಿ ಕ್ಷೇತ್ರಕ್ಕೆ ಬರುತ್ತವೆ. ರೈತರು ಅವುಗಳ ಅಗತ್ಯಗಳಿಗೆ ಅನುಗುಣವಾಗಿ, ವೈಜ್ಞಾನಿಕ ಪದ್ಧತಿ ಅಳವಡಿಸಿ ಕೃಷಿ ಮಾಡುತ್ತಾರೆ. ತಾವು ಬೆಳೆದ ಬೆಳೆಗೆ ತಾವೇ ಬೆಲೆ ನಿರ್ಧರಿಸಿ, ಮಧ್ಯವರ್ತಿಗಳ ಸಹಾಯ ಇಲ್ಲದೆ ನೇರವಾಗಿ ಮಾರಾಟ ಮಾಡುತ್ತಾರೆ. ಇದರಿಂದ ಕೃಷಿಯ ಜೊತೆಜೊತೆಗೆ ಉದ್ಯೋಗಾವಕಾಶಗಳೂ ಹೆಚ್ಚುತ್ತವೆ. ಭಾರತದಲ್ಲಿ ಈ ವ್ಯವಸ್ಥೆ ಜಾರಿಗೆ ತರಲು ಕೆಲವು ತೊಡಕುಗಳಿರುವುದು ನಿಜ. ಆದರೆ ಸರ್ಕಾರ ಪ್ರಯತ್ನಿಸಿದರೆ ಹಂತ ಹಂತವಾಗಿ ಜಾರಿಗೊಳಿಸುವುದು ಅಸಾಧ್ಯವಲ್ಲ.