ಹದಗೆಟ್ಟ ರಸ್ತೆ ಸಂಬಂಧ ಕೊಡಸೆ ಗ್ರಾಮದ ಗಣಪತಿ ಭಟ್ ಅವರ ಪುತ್ರಿ ಐಶ್ವರ್ಯಾ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಳು. ವಿದ್ಯಾರ್ಥಿನಿ ಐಶ್ವರ್ಯಾಳ ಪತ್ರಕ್ಕೆ ಪ್ರಧಾನಿ ಕಚೇರಿಯಿಂದ ಸ್ಪಂದನೆ ದೊರೆತಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಂದಿನ ಕ್ರಮದ ಬಗ್ಗೆ ಪತ್ರ ರವಾನಿಸಿತ್ತು. ಈ ಪತ್ರಕ್ಕೆ ಸ್ಪಂದಿಸಿದ ಮುಖ್ಯ ಕಾರ್ಯದರ್ಶಿ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಬಳಿಕ ಈ ವಿಷಯ ಸಂಸದ ಬಿ.ವೈ.ರಾಘವೇಂದ್ರ ಮತ್ತು ಶಾಸಕ ಆರಗ ಜ್ಞಾನೇಂದ್ರರ ಗಮನಕ್ಕೂ ಬಂದಿತ್ತು. ರಸ್ತೆ ಅಭಿವೃದ್ಧಿ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು.