ಈ ಸಂದರ್ಭದಲ್ಲಿ ಸಂಶೋಧನಾ ವಿದ್ಯಾರ್ಥಿಗಳಾದ ಲೋಕೇಶ್, ಸತೀಶ್ ಹಾಗೂ ಇತರರು ಮಹಿಳಾ ಅಧಿಕಾರಿಯನ್ನು ನಿಂದಿಸಿ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ಹಣಕಾಸು ಅಧಿಕಾರಿ (ಪ್ರಭಾರ) ಆರ್. ಜಯಲಕ್ಷ್ಮಿ ದೂರು ನೀಡಿದ್ದರು. ಇದಕ್ಕೆ ಪ್ರತಿಯಾಗಿ ವಿದ್ಯಾರ್ಥಿಗಳು ಸಹ ದೂರು ಸಲ್ಲಿಸಿದ್ದರು.