ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರೈತರನ್ನು ಗುತ್ತಿಗೆ ಕೃಷಿಯತ್ತ ದೂಡುವ ಹುನ್ನಾರ’

ಮಸೂದೆ ಹಿಂಪಡೆಯಲು ಎಸ್‍ಯುಸಿಐ ಆಗ್ರಹ
Last Updated 19 ಸೆಪ್ಟೆಂಬರ್ 2020, 16:33 IST
ಅಕ್ಷರ ಗಾತ್ರ

ಬೆಂಗಳೂರು: ಅಗತ್ಯ ವಸ್ತುಗಳ ತಿದ್ದುಪಡಿ ಮಸೂದೆ, ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಮಸೂದೆಗಳು ರೈತ ವಿರೋಧಿಯಾಗಿದ್ದು, ಅವುಗಳನ್ನು ಹಿಂಪಡೆಯಬೇಕು ಎಂದು ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‍ಯುಸಿಐ) ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.

'ಈ ಮಸೂದೆಗಳ ಮೂಲಕ ಆಹಾರ ಸರಪಳಿಯನ್ನು ಕಾರ್ಪೊರೇಟ್ ಸಂಸ್ಥೆಗಳ ವಶಕ್ಕೆ ಒಪ್ಪಿಸಲು ಸರ್ಕಾರ ಮುಂದಾಗಿದೆ. ರೈತರನ್ನು ಗುತ್ತಿಗೆ ಕೃಷಿಯತ್ತ ದೂಡುವ ಹುನ್ನಾರವಿದು' ಎಂದು ಎಸ್‍ಯುಸಿಐ ರಾಜ್ಯ ಕಾರ್ಯದರ್ಶಿ ಕೆ.ಉಮಾ ದೂರಿದ್ದಾರೆ.

'ಈ ಮಸೂದೆಗಳನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ಇದೇ 25ರಂದು 'ಅಖಿಲ ಭಾರತ ಗ್ರಾಮೀಣ ಬಂದ್' ಆಚರಿಸಲಿದ್ದು, ಇದಕ್ಕೆ ಎಸ್‌ಯುಸಿಐ ಬೆಂಬಲ ನೀಡಲಿದೆ. ಈ ಅಪಾಯಕಾರಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಚಳವಳಿ ನಡೆಸಲಾಗುವುದು' ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT