ಇಲ್ಲಿನ ನಿರೀಕ್ಷಣಾ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್ನಲ್ಲಿ ವಿವಿಧ ಸಮುದಾಯಗಳಿಗೆ ನೂರಾರು ಕೋಟಿ ಅನುದಾನ ನೀಡಲಾಗಿದೆ. ಆದರೆ ನಮ್ಮ ಸಮುದಾಯಕ್ಕೆ ನಯಾಪೈಸೆ ನೀಡಿಲ್ಲ. ರಾಜ್ಯದಲ್ಲಿ 18 ಲಕ್ಷದಷ್ಟು ಜನಸಂಖ್ಯೆ ಹೊಂದಿರುವ ಕ್ಷೌರಿಕ ಸಮಾಜದವರ ಹಿತರಕ್ಷಣೆಗೆ ನಿಗಮ ಮಂಡಳಿ ಸ್ಥಾಪನೆ ಮಾಡಲು ಕೋರಿದ್ದೆವು. ಹಡಪದ ಸಮಾಜವನ್ನು ಪ್ರವರ್ಗ 1 ರಲ್ಲಿ ಸೇರಿಸುವಂತೆ ಹಲವು ಬಾರಿ ಮುಖ್ಯಮಂತ್ರಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಹಾಗಿದ್ದರೂ ಮನವಿಗೆ ಸ್ಪಂದಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.