ಕಬ್ಬನ್ಪೇಟೆಯಲ್ಲಿ ಕಚೇರಿ ಹೊಂದಿರುವ ಅವರು, ಆರೋಪಿ ರಮೇಶ್ ಎಂಬಾತನಿಗೆ ಜಾಮೀನು ಕೊಡಿಸಿದ್ದರು. ವಕೀಲರು ಸಲ್ಲಿಸಿದ್ದ ದಾಖಲೆಗಳೆಲ್ಲ ನಕಲಿ ಎಂಬುದು ನ್ಯಾಯಾಧೀಶರ ಗಮನಕ್ಕೆ ಬಂದಿತ್ತು. ಈ ಬಗ್ಗೆ ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡ 43ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕಾಶ ನಾಯ್ಕ, ನಾಗರಾಜಗೌಡ ಬಂಧನಕ್ಕೆ ವಾರಂಟ್ ಹೊರಡಿಸಿದ್ದರು. ಅದರನ್ವಯ ಪೊಲೀಸರು, ಆರೋಪಿಯನ್ನು ಬಂಧಿಸಿ ಮೇ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.