ಗುರುವಾರ ಬೆಳಿಗ್ಗೆ 11.30ರಿಂದ ಆಯುರ್ವೇದ ಶಿಬಿರ ಹಮ್ಮಿಕೊಳ್ಳಲಾಗಿದೆ. ಸಂಜೆ 5.30ಕ್ಕೆ ಸಾರ್ವಜನಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಸೆಲ್ಕೋ ಸೋಲಾರ್ನ ಸಂಸ್ಥಾಪಕ ಹರೀಶ್ ಹಂದೆ ಉದ್ಘಾಟಿಸಲಿದ್ದಾರೆ. ಮಹಾನಗರ ಪಾಲಿಕೆ ಮೇಯರ್ ಲಲಿತಾ ರವೀಶ್ ಅಧ್ಯಕ್ಷತೆ ವಹಿಸಲಿದ್ದು, ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ವೀರೇಶಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶಾಸಕ ಜಿ.ಬಿ.ಜ್ಯೋತಿ ಗಣೇಶ್ ಹಾಗೂ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಉಪಸ್ಥಿತರಿರುವರು ಎಂದು ಹೇಳಿದರು.