ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೊಮೆಟೊ ಬೆಳೆ ಕ್ಷೇತ್ರೋತ್ಸವ

Last Updated 5 ಫೆಬ್ರುವರಿ 2019, 13:51 IST
ಅಕ್ಷರ ಗಾತ್ರ

ತುಮಕೂರು: ತಾಲ್ಲೂಕಿನ ಹೆಬ್ಬೂರು ಹೋಬಳಿ ಎನ್‌.ಕೆ.ಗೊಲ್ಲರಹಟ್ಟಿಯಲ್ಲಿ ಐಡಿಎಫ್‌ ಸಂಸ್ಥೆ, ಸುಪ್ರಜಾ ಫೌಂಡೇಷನ್‌ ಮತ್ತು ಕೊಲ್ಲಾಪುರದಮ್ಮ ರೈತ ಉತ್ಪಾದಕರ ಕಂಪನಿ ಸಂಯುಕ್ತಾಶ್ರಯದಲ್ಲಿ ರೈತ ಗಂಗಣ್ಣ ಅವರ ಜಮೀನಿನಲ್ಲಿ ‘ಟೊಮೆಟೊ ಬೆಳೆ ಕ್ಷೇತ್ರೋತ್ಸವ’ ನಡೆಯಿತು.

ಈ ವೇಳೆ ಕೊಲ್ಲಾಪುರದಮ್ಮ ರೈತ ಉತ್ಪಾದಕರ ಕಂಪನಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ್ ಮಾತನಾಡಿ, ರೈತರು ರಾಸಾಯನಿಕ ಬಳಕೆ ಕಡಿಮೆ ಮಾಡಿ ಹೆಚ್ಚು ಸಾವಯವ ಪದ್ಧತಿಯನ್ನು ರೂಢಿಸಿಕೊಳ್ಳಬೇಕು. ವ್ಯವಸಾಯದಲ್ಲಿ ಖರ್ಚು ಕಡಿಮೆ ಮಾಡಿದಾಗ ಆದಾಯ ಹೆಚ್ಚು ವೃದ್ಧಿಸಬಹುದು ಎಂದರು.

ಭೂಮಿಗೆ ಕಾಂಪೋಸ್ಟ್ ಗೊಬ್ಬರವನ್ನು ಮಣ್ಣಿಗೆ ಬೆರೆಸಿ ಭೂಮಿಯನ್ನು ಹದಮಾಡಿ ಸಸಿಗಳನ್ನು ನಾಟಿ ಮಾಡಿದಾಗ ಉತ್ತಮ ಇಳುವರಿ ಪಡೆಯಬಹುದು ಎಂದು ತಿಳಿಸಿದರು.

ಐಡಿಎಫ್ ಸಂಸ್ಥೆಯ ಜೀವನ ಉತ್ತೇಜನಾಧಿಕಾರಿ ಗುರುದತ್ ಮಾತನಾಡಿ, ರೈತರು ಹಿಂದಿನ ಕಾಲದಲ್ಲಿ ಮಾಡುತಿದ್ದ ವ್ಯವಸಾಯವನ್ನು ಇಂದು ಮಾಡಿದರೆ ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ಪಡೆಯಬಹುದು ಎಂದುರು.

ಜೀವನ ಉತ್ತೇಜನಾಧಿಕಾರಿ ಹರ್ಷಿತ, ಕಂಪನಿಯ ವ್ಯವಸ್ಥಾಪಕ ಡಿ.ಲೋಕೇಶ್, ರೈತ ಗಂಗಣ್ಣ, ಕೆ.ಮಧುಸೂಧನ್, ಸಿ.ಮೋಹನ್‍ಕುಮಾರ್, ನರಸಿಂಹಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT