<p><strong>ತುರುವೇಕೆರೆ: </strong>ತಾಲ್ಲೂಕಿನ ಮಲ್ಲಾಘಟ್ಟ ಕೆರೆ ಹಾಗೂ ಗಂಗಾಧರೇಶ್ವರ ದೇವಾಲಯವನ್ನು ಪ್ರವಾಸಿ ತಾಣವಾಗಿಸಲು ₹ 1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಶಾಸಕ ಮಸಾಲ ಜಯರಾಂ ತಿಳಿಸಿದರು.</p>.<p>ಮಲ್ಲಾಘಟ್ಟ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ‘ಕೆರೆ ಮೈದುಂಬಿ ಹರಿಯುತ್ತಿದ್ದು, ಜನರನ್ನು ಆಕರ್ಷಿಸುತ್ತಿದೆ. ಅದಕ್ಕೆ ಪೂರಕ ಸೌಕರ್ಯಗಳನ್ನು ಕಲ್ಪಿಸಬೇಕಿದೆ’ ಎಂದರು.</p>.<p>ಕೆರೆ ಹಿಂಭಾಗದಲ್ಲಿರುವ ಗಂಗಾಧರೇಶ್ವರ ದೇವಾಲಯದ ಪಕ್ಕದಲ್ಲಿ ಹೊರಾಂಗಣ ವೇದಿಕೆ ಹಾಗೂ ಛತ್ರ ನಿರ್ಮಿಸಲಾಗುವುದು ಎಂದರು.</p>.<p>ಆನೇಕೆರೆ ಪಂಚಾಯಿತಿ ಅಧಿಕಾರಿಗಳು, ಮಲ್ಲಾಘಟ್ಟಕೆರೆಗೆ ಬರುವ ಪ್ರವಾಸಿಗರ ವಾಹನಗಳಿಗೆ ನಿಲುಗಡೆ, ತುಂಗುದಾಣ ಸೇರದಂತೆ ಹಲವು ಸೌಕರ್ಯ ಕಲ್ಪಿಸಲಾಗುವುದು. ಅದರಿಂದ ಬರುವ ಶುಲ್ಕದಿಂದ ಕೆರೆ ನೈರ್ಮಲ್ಯ ಹಾಗೂ ನಿರ್ವಹಣೆ ಮಾಡಲಾಗುವುದು ಎಂದು ತಿಳಿಸಿದರು.</p>.<p>ಗಂಗಾಧರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.</p>.<p>ಪಟ್ಟಣ ಪಂಚಾಯಿತಿ ಸದಸ್ಯರಾದ ಚಿದಾನಂದ್, ರವಿ, ಆಶಾರಾಣಿ, ಮುಂಖಡರಾದ ಕೊಂಡಜ್ಜಿ ವಿಶ್ವನಾಥ್, ಬಿ.ಎಸ್.ದೇವರಾಜ್, ವಿ.ಟಿ.ವೆಂಕಟರಾಂ, ಸೋಮಣ್ಣ, ಸುರೇಶ್, ದಿನೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ: </strong>ತಾಲ್ಲೂಕಿನ ಮಲ್ಲಾಘಟ್ಟ ಕೆರೆ ಹಾಗೂ ಗಂಗಾಧರೇಶ್ವರ ದೇವಾಲಯವನ್ನು ಪ್ರವಾಸಿ ತಾಣವಾಗಿಸಲು ₹ 1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಶಾಸಕ ಮಸಾಲ ಜಯರಾಂ ತಿಳಿಸಿದರು.</p>.<p>ಮಲ್ಲಾಘಟ್ಟ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ‘ಕೆರೆ ಮೈದುಂಬಿ ಹರಿಯುತ್ತಿದ್ದು, ಜನರನ್ನು ಆಕರ್ಷಿಸುತ್ತಿದೆ. ಅದಕ್ಕೆ ಪೂರಕ ಸೌಕರ್ಯಗಳನ್ನು ಕಲ್ಪಿಸಬೇಕಿದೆ’ ಎಂದರು.</p>.<p>ಕೆರೆ ಹಿಂಭಾಗದಲ್ಲಿರುವ ಗಂಗಾಧರೇಶ್ವರ ದೇವಾಲಯದ ಪಕ್ಕದಲ್ಲಿ ಹೊರಾಂಗಣ ವೇದಿಕೆ ಹಾಗೂ ಛತ್ರ ನಿರ್ಮಿಸಲಾಗುವುದು ಎಂದರು.</p>.<p>ಆನೇಕೆರೆ ಪಂಚಾಯಿತಿ ಅಧಿಕಾರಿಗಳು, ಮಲ್ಲಾಘಟ್ಟಕೆರೆಗೆ ಬರುವ ಪ್ರವಾಸಿಗರ ವಾಹನಗಳಿಗೆ ನಿಲುಗಡೆ, ತುಂಗುದಾಣ ಸೇರದಂತೆ ಹಲವು ಸೌಕರ್ಯ ಕಲ್ಪಿಸಲಾಗುವುದು. ಅದರಿಂದ ಬರುವ ಶುಲ್ಕದಿಂದ ಕೆರೆ ನೈರ್ಮಲ್ಯ ಹಾಗೂ ನಿರ್ವಹಣೆ ಮಾಡಲಾಗುವುದು ಎಂದು ತಿಳಿಸಿದರು.</p>.<p>ಗಂಗಾಧರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.</p>.<p>ಪಟ್ಟಣ ಪಂಚಾಯಿತಿ ಸದಸ್ಯರಾದ ಚಿದಾನಂದ್, ರವಿ, ಆಶಾರಾಣಿ, ಮುಂಖಡರಾದ ಕೊಂಡಜ್ಜಿ ವಿಶ್ವನಾಥ್, ಬಿ.ಎಸ್.ದೇವರಾಜ್, ವಿ.ಟಿ.ವೆಂಕಟರಾಂ, ಸೋಮಣ್ಣ, ಸುರೇಶ್, ದಿನೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>