ಷರತ್ತುಗಳು: ನಿಷೇದಾಜ್ಞೆ ಅವಧಿಯಲ್ಲಿ 5 ಜನರ ಮೇಲ್ಪಟ್ಟು ಗುಂಪುಗಾರಿಕೆ, ಇತರೆ ಕಾನೂನು ಬಾಹಿರ ಚಟುವಟಿಕೆ ನಡೆಸುವಂತಿಲ್ಲ. ಸ್ಪೋಟಕ ವಸ್ತುಗಳು, ಮಾರಕಾಸ್ತ್ರ ಕೊಂಡೊಯ್ಯುವಂತಿಲ್ಲ. ಯಾವುದೇ ಬಹಿರಂಗ ಪ್ರಚಾರ ಸಭೆ, ಸಮಾರಂಭ ಮತ್ತು ಮರೆವಣಿಗೆ ನಡೆಸುವಂತಿಲ್ಲ. ಮತೀಯ ಭಾವನೆ ಕೆರಳಿಸುವಂತಹ ಪ್ರಚೋದನಕಾರಿ ಹೇಳಿಕೆ ನೀಡುವುದು, ಘೋಷಣೆ ಕೂಗುವುದು, ಭಿತ್ತಿ ಪತ್ರಗಳನ್ನು ಪ್ರಕಟಿಸುವುದನ್ನು ನಿಷೇಧಿಸಲಾಗಿದೆ.