<p><strong>ತುಮಕೂರು:</strong> ತಾಲ್ಲೂಕಿನ ಮಲ್ಲಸಂದ್ರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಿವೃತ್ತ ಶಿಕ್ಷಕ ಶಿವರುದ್ರಪ್ಪ ಎಂಬುವರ ಮನೆಯ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು 180 ಗ್ರಾಂ ಚಿನ್ನಾಭರಣ, ₹6 ಸಾವಿರ ನಗದು ಕಳವು ಮಾಡಿದ್ದಾರೆ.</p>.<p>ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸದಸ್ಯರೆಲ್ಲ ದೇವಸ್ಥಾನಕ್ಕೆ ಹೋಗಿದ್ದರು. ಮಧ್ಯರಾತ್ರಿ ಮನೆಗೆ ವಾಪಸ್ ಬಂದಾಗ ಕಳ್ಳತನವಾಗಿರುವುದು ಗಮನಕ್ಕೆ ಬಂದಿದೆ. ಮನೆಯ ಹಿಂಬಾಗಿಲು ಮುರಿದು ಒಳಗಡೆ ನುಗ್ಗಿ, ಚಿನ್ನಾಭರಣ ದೋಚಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮಾಂಗಲ್ಯ ಸರ ಕಳವು:</p>.<p>ತಾಲ್ಲೂಕಿನ ನರಸಾಪುರದಲ್ಲಿ ಬುಧವಾರ ಮಧ್ಯಾಹ್ನ ಬೈಕ್ನಲ್ಲಿ ಬಂದಿದ್ದ ಇಬ್ಬರು ಕಳ್ಳರು ನೀರು ಕೇಳುವ ನೆಪದಲ್ಲಿ ಮಹಿಳೆಯಿಂದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.</p>.<p>ಜಯಮ್ಮ ಮನೆಯ ಮುಂದಿನ ವರಾಂಡದಲ್ಲಿ ಕುಳಿತಿದ್ದರು. ಈ ವೇಳೆ ಇಬ್ಬರು ಕಳ್ಳರು ಬೈಕ್ನಲ್ಲಿ ಬಂದು ಕುಡಿಯಲು ನೀರು ಕೇಳುವ ನೆಪದಲ್ಲಿ 50 ಗ್ರಾಂ ಸರ ಕಿತ್ತುಕೊಂಡು ಜಾಗ ಖಾಲಿ ಮಾಡಿದ್ದಾರೆ.</p>.<p>‘ಮನೆಗಳ್ಳತನ, ಸರ ಕಳವು ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರು ಎಚ್ಚರಿಕೆಯಿಂದ ಇರಬೇಕು. ಮನೆಗೆ ಬೀಗ ಹಾಕಿಕೊಂಡು ಹೊರಗಡೆ ಹೋಗುವಾಗ ಪೊಲೀಸರಿಗೆ ಮಾಹಿತಿ ನೀಡಿದರೆ ಮನೆ ಮುಂಭಾಗದಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸುತ್ತಾರೆ. ಇದರಿಂದ ಕಳ್ಳತನ ತಡೆಯುವುದು ಸುಲಭವಾಗುತ್ತದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ತಾಲ್ಲೂಕಿನ ಮಲ್ಲಸಂದ್ರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಿವೃತ್ತ ಶಿಕ್ಷಕ ಶಿವರುದ್ರಪ್ಪ ಎಂಬುವರ ಮನೆಯ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು 180 ಗ್ರಾಂ ಚಿನ್ನಾಭರಣ, ₹6 ಸಾವಿರ ನಗದು ಕಳವು ಮಾಡಿದ್ದಾರೆ.</p>.<p>ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸದಸ್ಯರೆಲ್ಲ ದೇವಸ್ಥಾನಕ್ಕೆ ಹೋಗಿದ್ದರು. ಮಧ್ಯರಾತ್ರಿ ಮನೆಗೆ ವಾಪಸ್ ಬಂದಾಗ ಕಳ್ಳತನವಾಗಿರುವುದು ಗಮನಕ್ಕೆ ಬಂದಿದೆ. ಮನೆಯ ಹಿಂಬಾಗಿಲು ಮುರಿದು ಒಳಗಡೆ ನುಗ್ಗಿ, ಚಿನ್ನಾಭರಣ ದೋಚಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮಾಂಗಲ್ಯ ಸರ ಕಳವು:</p>.<p>ತಾಲ್ಲೂಕಿನ ನರಸಾಪುರದಲ್ಲಿ ಬುಧವಾರ ಮಧ್ಯಾಹ್ನ ಬೈಕ್ನಲ್ಲಿ ಬಂದಿದ್ದ ಇಬ್ಬರು ಕಳ್ಳರು ನೀರು ಕೇಳುವ ನೆಪದಲ್ಲಿ ಮಹಿಳೆಯಿಂದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.</p>.<p>ಜಯಮ್ಮ ಮನೆಯ ಮುಂದಿನ ವರಾಂಡದಲ್ಲಿ ಕುಳಿತಿದ್ದರು. ಈ ವೇಳೆ ಇಬ್ಬರು ಕಳ್ಳರು ಬೈಕ್ನಲ್ಲಿ ಬಂದು ಕುಡಿಯಲು ನೀರು ಕೇಳುವ ನೆಪದಲ್ಲಿ 50 ಗ್ರಾಂ ಸರ ಕಿತ್ತುಕೊಂಡು ಜಾಗ ಖಾಲಿ ಮಾಡಿದ್ದಾರೆ.</p>.<p>‘ಮನೆಗಳ್ಳತನ, ಸರ ಕಳವು ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರು ಎಚ್ಚರಿಕೆಯಿಂದ ಇರಬೇಕು. ಮನೆಗೆ ಬೀಗ ಹಾಕಿಕೊಂಡು ಹೊರಗಡೆ ಹೋಗುವಾಗ ಪೊಲೀಸರಿಗೆ ಮಾಹಿತಿ ನೀಡಿದರೆ ಮನೆ ಮುಂಭಾಗದಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸುತ್ತಾರೆ. ಇದರಿಂದ ಕಳ್ಳತನ ತಡೆಯುವುದು ಸುಲಭವಾಗುತ್ತದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>