‘ಲಾಕ್ಡೌನ್ ಸಮಯದಲ್ಲಿ ಪಂಚಾಯಿತಿಯಿಂದ ಕೈಗೊಳ್ಳಬೇಕಾದ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ನರೇಗಾ, ಸ್ವಚ್ಛ ಭಾರತ್ ಮಿಷನ್ ಯೋಜನೆಗಳಲ್ಲಿ ನಿಗದಿತ ಪ್ರಗತಿ ಸಾಧಿಸಲಾಗಿದೆ. ಅಗತ್ಯ ಸಾಮಗ್ರಿಗಳ ಅಲಭ್ಯತೆ, ಕೂಲಿಕಾರರ ಕೊರತೆ ಹಾಗೂ ಫಲಾನುಭವಿಗಳ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದಿದ್ದರೂ ಸ್ವಚ್ಛ ಭಾರತ್ ಮಿಷನ್ ಯೋಜನೆಯಲ್ಲಿ ಶೇ 80ರಷ್ಟು ಪ್ರಗತಿ ಸಾಧಿಸಿದ್ದೇವೆ. ಸಕಾರಣವಿಲ್ಲದೆ ನೋಟಿಸ್ ನೀಡಿದ್ದಾರೆ. ಇದರಿಂದಾಗಿ ಪಿಡಿಒಗಳ ಆತ್ಮಸ್ಥೈರ್ಯ ಕುಗ್ಗಿದೆ. ಹಾಗಾಗಿ 2 ತಿಂಗಳು ರಜೆ ನೀಡಬೇಕು’ ಎಂದು ಅರ್ಜಿಯಲ್ಲಿ ಕೋರಿದ್ದಾರೆ.