ತರೂರು ಹಾಗೂ ಚಿಕ್ಕದಾಸರಹಳ್ಳಿ ಗೊಲ್ಲರಹಟ್ಟಿಯ ವಲಸೆ ಕುರಿಗಾಹಿಗಳು ವಸಂತ ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಂತಿರುವ ರೈತರ ಜಮೀನಿನಲ್ಲಿ ಮಂದೆ ಹಾಕಿ ಕುರಿ ಮೇಯಿಸುತ್ತಿದ್ದರು. ಭಾನುವಾರ ಕೈಗಾರಿಕಾ ಪ್ರದೇಶದ ಅಕ್ಕಪಕ್ಕ ಕುರಿಗಾಹಿಗಳು ಕುರಿ ಮೇಯಿಸುತ್ತಿದ್ದರು. ಈ ವೇಳೆ ಫುಡ್ ಪಾರ್ಕ್ ಸಮೀಪದಲ್ಲಿ ರೂಪಿಂಗ್, ಕೆಮಿಕಲ್ ಹಾಗೂ ಇತರೆ ಕಾರ್ಖಾನೆಗಳಿಂದ ಬಿಡುಗಡೆಯಾದ ವಿಷಪೂರಿತ ನೀರು ಹಾಗೂ ತ್ಯಾಜ್ಯ ಸೇವಿಸಿ ಘಟನೆ ಸಂಭವಿಸಿದೆ.