<p>ಪ್ರಜಾವಾಣಿ ವಾರ್ತೆ</p>.<p><strong>ತುಮಕೂರು</strong>: ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿದರೆ ಪ್ರತಿ ದಿನ ಶೇ 5ರಷ್ಟು ಲಾಭಾಂಶ ನೀಡುವುದಾಗಿ ನಂಬಿಸಿ ಕಾರ್ಖಾನೆ ನೌಕರ, ನಗರದ ವಸಂತನರಸಾಪುರದ ನಿವಾಸಿ ಭೂಪೇಂದ್ರಕುಮಾರ್ ಎಂಬುವರಿಗೆ ₹25 ಲಕ್ಷ ವಂಚಿಸಲಾಗಿದೆ.</p>.<p>ವಾಟ್ಸ್ ಆ್ಯಪ್ ಮುಖಾಂತರ ಪರಿಚಯಿಸಿಕೊಂಡು ‘ವಿಐಪಿ 73’ ಎಂಬ ಗ್ರೂಪ್ಗೆ ಸೇರಿಸಿ ಟ್ರೇಡಿಂಗ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ‘ಡಿಆರ್ಡಬ್ಲ್ಯೂಎಐ’ ಎಂಬ ಆ್ಯಪ್ನಲ್ಲಿ ಹಣ ಹೂಡಿಕೆ ಮಾಡಿದರೆ ಉತ್ತಮ ಲಾಭ ಪಡೆಯಬಹುದು ಎಂದು ತಿಳಿಸಿದ್ದಾರೆ. ಮೊದಲಿಗೆ ₹20 ಸಾವಿರ ಹಣವನ್ನು ಸೈಬರ್ ಆರೋಪಿಗಳು ತಿಳಿಸಿದ ಖಾತೆಗೆ ವರ್ಗಾವಣೆ ಮಾಡಿದ್ದಾರೆ. ನಂತರ ಭೂಪೇಂದ್ರಕುಮಾರ್ ಖಾತೆಗೆ ಲಾಭ ಎಂದು ₹4,331 ವರ್ಗಾಯಿಸಿದ್ದಾರೆ.</p>.<p>ಇದೇ ರೀತಿಯಾಗಿ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸಬಹುದು ಎಂದು ಹೇಳಿದ್ದಾರೆ. ಇದನ್ನು ನಂಬಿದ ಭೂಪೇಂದ್ರಕುಮಾರ್ ಮೇ 6ರಿಂದ ಜೂನ್ 18ರ ವರೆಗೆ ಒಟ್ಟು ₹25,54,669 ಹಣ ವಿವಿಧ ಬ್ಯಾಂಕ್ ಖಾತೆಗಳಿಗೆ ಹಾಕಿದ್ದಾರೆ. ಅವರಿಗೆ ಯಾವುದೇ ಹಣ ವಾಪಸ್ ಹಾಕಿಲ್ಲ.</p>.<p>ನಂಬಿಸಿ ಮೋಸ ಮಾಡಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಸೈಬರ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ತುಮಕೂರು</strong>: ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿದರೆ ಪ್ರತಿ ದಿನ ಶೇ 5ರಷ್ಟು ಲಾಭಾಂಶ ನೀಡುವುದಾಗಿ ನಂಬಿಸಿ ಕಾರ್ಖಾನೆ ನೌಕರ, ನಗರದ ವಸಂತನರಸಾಪುರದ ನಿವಾಸಿ ಭೂಪೇಂದ್ರಕುಮಾರ್ ಎಂಬುವರಿಗೆ ₹25 ಲಕ್ಷ ವಂಚಿಸಲಾಗಿದೆ.</p>.<p>ವಾಟ್ಸ್ ಆ್ಯಪ್ ಮುಖಾಂತರ ಪರಿಚಯಿಸಿಕೊಂಡು ‘ವಿಐಪಿ 73’ ಎಂಬ ಗ್ರೂಪ್ಗೆ ಸೇರಿಸಿ ಟ್ರೇಡಿಂಗ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ‘ಡಿಆರ್ಡಬ್ಲ್ಯೂಎಐ’ ಎಂಬ ಆ್ಯಪ್ನಲ್ಲಿ ಹಣ ಹೂಡಿಕೆ ಮಾಡಿದರೆ ಉತ್ತಮ ಲಾಭ ಪಡೆಯಬಹುದು ಎಂದು ತಿಳಿಸಿದ್ದಾರೆ. ಮೊದಲಿಗೆ ₹20 ಸಾವಿರ ಹಣವನ್ನು ಸೈಬರ್ ಆರೋಪಿಗಳು ತಿಳಿಸಿದ ಖಾತೆಗೆ ವರ್ಗಾವಣೆ ಮಾಡಿದ್ದಾರೆ. ನಂತರ ಭೂಪೇಂದ್ರಕುಮಾರ್ ಖಾತೆಗೆ ಲಾಭ ಎಂದು ₹4,331 ವರ್ಗಾಯಿಸಿದ್ದಾರೆ.</p>.<p>ಇದೇ ರೀತಿಯಾಗಿ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸಬಹುದು ಎಂದು ಹೇಳಿದ್ದಾರೆ. ಇದನ್ನು ನಂಬಿದ ಭೂಪೇಂದ್ರಕುಮಾರ್ ಮೇ 6ರಿಂದ ಜೂನ್ 18ರ ವರೆಗೆ ಒಟ್ಟು ₹25,54,669 ಹಣ ವಿವಿಧ ಬ್ಯಾಂಕ್ ಖಾತೆಗಳಿಗೆ ಹಾಕಿದ್ದಾರೆ. ಅವರಿಗೆ ಯಾವುದೇ ಹಣ ವಾಪಸ್ ಹಾಕಿಲ್ಲ.</p>.<p>ನಂಬಿಸಿ ಮೋಸ ಮಾಡಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಸೈಬರ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>